ಜಲ ಜಾಗೃತಿ, ಜನ ಜಾಗೃತಿಗಾಗಿ ಶೃಂಗೇರಿಯಿಂದ ಕಿಷ್ಕಿಂದೆವರೆಗೆ 400 ಕಿಲೋ ಮೀಟರ್ ವರೆಗೆ ಹಮ್ಮಿಕೊಂಡಿರುವ ನಿರ್ಮಲ ತುಂಗಾಭದ್ರ ಅಭಿಯಾನ ಪಾದಯಾತ್ರೆ ಶಿವಮೊಗ್ಗ ಜಿಲ್ಲೆ ತಲುಪಿದ್ದು, ಕಾರ್ಯಕ್ರಮಕ್ಕೆ ಕೂಡ್ಲಿ ಶೃಂಗೇರಿ ಮಠದ ಅಭಿನವ ಶಂಕರ ಭಾರತೀಯ ಸ್ವಾಮೀಜಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಅಭಿನವ ಶಂಕರ ಭಾರತೀಯ ಸ್ವಾಮೀಜಿ, ಮನುಷ್ಯನಾಗಿ ಬದುಕಬೇಕಾದರೆ ಹಲವಾರು ಋಣಗಳಿಗೆ ಋಣಿಯಾಗಿರಬೇಕಾಗುತ್ತದೆ. ಸಮಾಜದಿಂದ ಏನನ್ನು ಪಡೆದಿದ್ದೇವೆ ಅದಕ್ಕಿಂತಲೂ ಹೆಚ್ಚಿಗೆ ಸಮಾಜಕ್ಕೆ ಹಿಂದುರುಗಿಸಬೇಕು ಎಂದರು.
ಪರಿಸರವಾದಿ ಕುಮಾರಸ್ವಾಮಿ ಸೇರಿದಂತೆ ಮತ್ತಿತರ ಸಂಘಟನೆಗಳ ಮುಖ್ಯಸ್ಥರು ಶಾಲಾ ವಿದ್ಯಾರ್ಥಿಗಳು ಸಾರ್ವಜನಿಕರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು. ತುಂಗಾ ತಡದಲ್ಲಿ ಜನಜಾಗೃತಿಗಾಗಿ ತುಂಗಾ ನದಿಗೆ ವಿಶೇಷ ಆರತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪರಿಸರವಾದಿ ಕುಮಾರಸ್ವಾಮಿ, ಇತ್ತೀಚಿಗೆ ತ್ಯಾಜ್ಯದ ಸಮಸ್ಯೆ ಹೆಚ್ಚಾಗಿದ್ದು, ಪರಿಸರದ ಮೇಲೆ ಅಡ್ಡ ಪರಿಣಾಮ ಬೀರುತ್ತಿದೆ ಎಂದರು. ಪಾದಯಾತ್ರಿ ಬಾಲಕೃಷ್ಣ ನಾಯ್ಡು, ಎಲ್ಲಾ ನದಿಗಳು ಪೂಜ್ಯನೀಯವಾಗಿವೆ ಜನರು ಈ ನದಿಗಳ ಮಹತ್ವವನ್ನು ಅರಿತುಕೊಂಡು ನದಿಗಳ ಸಂರಕ್ಷಣೆಯಲ್ಲಿ ಮುಂದಾಗಬೇಕು.ನದಿಗಳು ಮತ್ತು ಅರಣ್ಯಗಳೊಂದಿಗೆ ಜನರು ಭಾವನಾತ್ಮಕವಾಗಿ ವರ್ತಿಸುತ್ತಾರೆ ನದಿ ಉಗಮ ಸ್ಥಾನದಿಂದಲೇ ಶುದ್ದೀಕರಣದ ಕಡೆಗೆ ಗಮನ ಹರಿಸುವಂಥ ಕಾರ್ಯಕ್ರಮ ಇದಾಗಿದೆ ಎಂದರು.
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…
ಚಿಕ್ಕಮಗಳೂರು ಅರಣ್ಯ ವಿಭಾಗದಲ್ಲಿ ಕಾಡು ಬೆಂಕಿ ತಡೆಯಲು 970 ಕಿ.ಮೀ. ಬೆಂಕಿ ಪಥ…