ಜಲ ಜಾಗೃತಿ, ಜನ ಜಾಗೃತಿಗಾಗಿ ಶೃಂಗೇರಿಯಿಂದ ಕಿಷ್ಕಿಂದೆವರೆಗೆ 400 ಕಿಲೋ ಮೀಟರ್ ವರೆಗೆ ಹಮ್ಮಿಕೊಂಡಿರುವ ನಿರ್ಮಲ ತುಂಗಾಭದ್ರ ಅಭಿಯಾನ ಪಾದಯಾತ್ರೆ ಶಿವಮೊಗ್ಗ ಜಿಲ್ಲೆ ತಲುಪಿದ್ದು, ಕಾರ್ಯಕ್ರಮಕ್ಕೆ ಕೂಡ್ಲಿ ಶೃಂಗೇರಿ ಮಠದ ಅಭಿನವ ಶಂಕರ ಭಾರತೀಯ ಸ್ವಾಮೀಜಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಅಭಿನವ ಶಂಕರ ಭಾರತೀಯ ಸ್ವಾಮೀಜಿ, ಮನುಷ್ಯನಾಗಿ ಬದುಕಬೇಕಾದರೆ ಹಲವಾರು ಋಣಗಳಿಗೆ ಋಣಿಯಾಗಿರಬೇಕಾಗುತ್ತದೆ. ಸಮಾಜದಿಂದ ಏನನ್ನು ಪಡೆದಿದ್ದೇವೆ ಅದಕ್ಕಿಂತಲೂ ಹೆಚ್ಚಿಗೆ ಸಮಾಜಕ್ಕೆ ಹಿಂದುರುಗಿಸಬೇಕು ಎಂದರು.
ಪರಿಸರವಾದಿ ಕುಮಾರಸ್ವಾಮಿ ಸೇರಿದಂತೆ ಮತ್ತಿತರ ಸಂಘಟನೆಗಳ ಮುಖ್ಯಸ್ಥರು ಶಾಲಾ ವಿದ್ಯಾರ್ಥಿಗಳು ಸಾರ್ವಜನಿಕರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು. ತುಂಗಾ ತಡದಲ್ಲಿ ಜನಜಾಗೃತಿಗಾಗಿ ತುಂಗಾ ನದಿಗೆ ವಿಶೇಷ ಆರತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪರಿಸರವಾದಿ ಕುಮಾರಸ್ವಾಮಿ, ಇತ್ತೀಚಿಗೆ ತ್ಯಾಜ್ಯದ ಸಮಸ್ಯೆ ಹೆಚ್ಚಾಗಿದ್ದು, ಪರಿಸರದ ಮೇಲೆ ಅಡ್ಡ ಪರಿಣಾಮ ಬೀರುತ್ತಿದೆ ಎಂದರು. ಪಾದಯಾತ್ರಿ ಬಾಲಕೃಷ್ಣ ನಾಯ್ಡು, ಎಲ್ಲಾ ನದಿಗಳು ಪೂಜ್ಯನೀಯವಾಗಿವೆ ಜನರು ಈ ನದಿಗಳ ಮಹತ್ವವನ್ನು ಅರಿತುಕೊಂಡು ನದಿಗಳ ಸಂರಕ್ಷಣೆಯಲ್ಲಿ ಮುಂದಾಗಬೇಕು.ನದಿಗಳು ಮತ್ತು ಅರಣ್ಯಗಳೊಂದಿಗೆ ಜನರು ಭಾವನಾತ್ಮಕವಾಗಿ ವರ್ತಿಸುತ್ತಾರೆ ನದಿ ಉಗಮ ಸ್ಥಾನದಿಂದಲೇ ಶುದ್ದೀಕರಣದ ಕಡೆಗೆ ಗಮನ ಹರಿಸುವಂಥ ಕಾರ್ಯಕ್ರಮ ಇದಾಗಿದೆ ಎಂದರು.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…