ಜಲ ಜಾಗೃತಿ, ಜನ ಜಾಗೃತಿಗಾಗಿ ಶೃಂಗೇರಿಯಿಂದ ಕಿಷ್ಕಿಂದೆವರೆಗೆ 400 ಕಿಲೋ ಮೀಟರ್ ವರೆಗೆ ಹಮ್ಮಿಕೊಂಡಿರುವ ನಿರ್ಮಲ ತುಂಗಾಭದ್ರ ಅಭಿಯಾನ ಪಾದಯಾತ್ರೆ ಶಿವಮೊಗ್ಗ ಜಿಲ್ಲೆ ತಲುಪಿದ್ದು, ಕಾರ್ಯಕ್ರಮಕ್ಕೆ ಕೂಡ್ಲಿ ಶೃಂಗೇರಿ ಮಠದ ಅಭಿನವ ಶಂಕರ ಭಾರತೀಯ ಸ್ವಾಮೀಜಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಅಭಿನವ ಶಂಕರ ಭಾರತೀಯ ಸ್ವಾಮೀಜಿ, ಮನುಷ್ಯನಾಗಿ ಬದುಕಬೇಕಾದರೆ ಹಲವಾರು ಋಣಗಳಿಗೆ ಋಣಿಯಾಗಿರಬೇಕಾಗುತ್ತದೆ. ಸಮಾಜದಿಂದ ಏನನ್ನು ಪಡೆದಿದ್ದೇವೆ ಅದಕ್ಕಿಂತಲೂ ಹೆಚ್ಚಿಗೆ ಸಮಾಜಕ್ಕೆ ಹಿಂದುರುಗಿಸಬೇಕು ಎಂದರು.
ಪರಿಸರವಾದಿ ಕುಮಾರಸ್ವಾಮಿ ಸೇರಿದಂತೆ ಮತ್ತಿತರ ಸಂಘಟನೆಗಳ ಮುಖ್ಯಸ್ಥರು ಶಾಲಾ ವಿದ್ಯಾರ್ಥಿಗಳು ಸಾರ್ವಜನಿಕರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು. ತುಂಗಾ ತಡದಲ್ಲಿ ಜನಜಾಗೃತಿಗಾಗಿ ತುಂಗಾ ನದಿಗೆ ವಿಶೇಷ ಆರತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪರಿಸರವಾದಿ ಕುಮಾರಸ್ವಾಮಿ, ಇತ್ತೀಚಿಗೆ ತ್ಯಾಜ್ಯದ ಸಮಸ್ಯೆ ಹೆಚ್ಚಾಗಿದ್ದು, ಪರಿಸರದ ಮೇಲೆ ಅಡ್ಡ ಪರಿಣಾಮ ಬೀರುತ್ತಿದೆ ಎಂದರು. ಪಾದಯಾತ್ರಿ ಬಾಲಕೃಷ್ಣ ನಾಯ್ಡು, ಎಲ್ಲಾ ನದಿಗಳು ಪೂಜ್ಯನೀಯವಾಗಿವೆ ಜನರು ಈ ನದಿಗಳ ಮಹತ್ವವನ್ನು ಅರಿತುಕೊಂಡು ನದಿಗಳ ಸಂರಕ್ಷಣೆಯಲ್ಲಿ ಮುಂದಾಗಬೇಕು.ನದಿಗಳು ಮತ್ತು ಅರಣ್ಯಗಳೊಂದಿಗೆ ಜನರು ಭಾವನಾತ್ಮಕವಾಗಿ ವರ್ತಿಸುತ್ತಾರೆ ನದಿ ಉಗಮ ಸ್ಥಾನದಿಂದಲೇ ಶುದ್ದೀಕರಣದ ಕಡೆಗೆ ಗಮನ ಹರಿಸುವಂಥ ಕಾರ್ಯಕ್ರಮ ಇದಾಗಿದೆ ಎಂದರು.
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…
ಎಥೆನಾಲ್ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…
ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…