ಜಲ ಜಾಗೃತಿ, ಜನ ಜಾಗೃತಿಗಾಗಿ ಶೃಂಗೇರಿಯಿಂದ ಕಿಷ್ಕಿಂದೆವರೆಗೆ 400 ಕಿಲೋ ಮೀಟರ್ ವರೆಗೆ ಹಮ್ಮಿಕೊಂಡಿರುವ ನಿರ್ಮಲ ತುಂಗಾಭದ್ರ ಅಭಿಯಾನ ಪಾದಯಾತ್ರೆ ಶಿವಮೊಗ್ಗ ಜಿಲ್ಲೆ ತಲುಪಿದ್ದು, ಕಾರ್ಯಕ್ರಮಕ್ಕೆ ಕೂಡ್ಲಿ ಶೃಂಗೇರಿ ಮಠದ ಅಭಿನವ ಶಂಕರ ಭಾರತೀಯ ಸ್ವಾಮೀಜಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಅಭಿನವ ಶಂಕರ ಭಾರತೀಯ ಸ್ವಾಮೀಜಿ, ಮನುಷ್ಯನಾಗಿ ಬದುಕಬೇಕಾದರೆ ಹಲವಾರು ಋಣಗಳಿಗೆ ಋಣಿಯಾಗಿರಬೇಕಾಗುತ್ತದೆ. ಸಮಾಜದಿಂದ ಏನನ್ನು ಪಡೆದಿದ್ದೇವೆ ಅದಕ್ಕಿಂತಲೂ ಹೆಚ್ಚಿಗೆ ಸಮಾಜಕ್ಕೆ ಹಿಂದುರುಗಿಸಬೇಕು ಎಂದರು.
ಪರಿಸರವಾದಿ ಕುಮಾರಸ್ವಾಮಿ ಸೇರಿದಂತೆ ಮತ್ತಿತರ ಸಂಘಟನೆಗಳ ಮುಖ್ಯಸ್ಥರು ಶಾಲಾ ವಿದ್ಯಾರ್ಥಿಗಳು ಸಾರ್ವಜನಿಕರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು. ತುಂಗಾ ತಡದಲ್ಲಿ ಜನಜಾಗೃತಿಗಾಗಿ ತುಂಗಾ ನದಿಗೆ ವಿಶೇಷ ಆರತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪರಿಸರವಾದಿ ಕುಮಾರಸ್ವಾಮಿ, ಇತ್ತೀಚಿಗೆ ತ್ಯಾಜ್ಯದ ಸಮಸ್ಯೆ ಹೆಚ್ಚಾಗಿದ್ದು, ಪರಿಸರದ ಮೇಲೆ ಅಡ್ಡ ಪರಿಣಾಮ ಬೀರುತ್ತಿದೆ ಎಂದರು. ಪಾದಯಾತ್ರಿ ಬಾಲಕೃಷ್ಣ ನಾಯ್ಡು, ಎಲ್ಲಾ ನದಿಗಳು ಪೂಜ್ಯನೀಯವಾಗಿವೆ ಜನರು ಈ ನದಿಗಳ ಮಹತ್ವವನ್ನು ಅರಿತುಕೊಂಡು ನದಿಗಳ ಸಂರಕ್ಷಣೆಯಲ್ಲಿ ಮುಂದಾಗಬೇಕು.ನದಿಗಳು ಮತ್ತು ಅರಣ್ಯಗಳೊಂದಿಗೆ ಜನರು ಭಾವನಾತ್ಮಕವಾಗಿ ವರ್ತಿಸುತ್ತಾರೆ ನದಿ ಉಗಮ ಸ್ಥಾನದಿಂದಲೇ ಶುದ್ದೀಕರಣದ ಕಡೆಗೆ ಗಮನ ಹರಿಸುವಂಥ ಕಾರ್ಯಕ್ರಮ ಇದಾಗಿದೆ ಎಂದರು.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…