Advertisement
MIRROR FOCUS

ನಿರ್ಮಲ ತುಂಗಾಭದ್ರ ಅಭಿಯಾನ ಪಾದಯಾತ್ರೆ | ಶೃಂಗೇರಿಯಿಂದ ಶ್ರೀಶೈಲದವರೆಗೆ |

Share

ಜಲ ಜಾಗೃತಿ, ಜನ ಜಾಗೃತಿಗಾಗಿ ಶೃಂಗೇರಿಯಿಂದ ಕಿಷ್ಕಿಂದೆವರೆಗೆ 400 ಕಿಲೋ ಮೀಟರ್ ವರೆಗೆ ಹಮ್ಮಿಕೊಂಡಿರುವ ನಿರ್ಮಲ ತುಂಗಾಭದ್ರ ಅಭಿಯಾನ ಪಾದಯಾತ್ರೆ ಶಿವಮೊಗ್ಗ ಜಿಲ್ಲೆ ತಲುಪಿದ್ದು, ಕಾರ್ಯಕ್ರಮಕ್ಕೆ ಕೂಡ್ಲಿ ಶೃಂಗೇರಿ ಮಠದ ಅಭಿನವ ಶಂಕರ ಭಾರತೀಯ ಸ್ವಾಮೀಜಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಅಭಿನವ ಶಂಕರ ಭಾರತೀಯ ಸ್ವಾಮೀಜಿ, ಮನುಷ್ಯನಾಗಿ ಬದುಕಬೇಕಾದರೆ ಹಲವಾರು ಋಣಗಳಿಗೆ ಋಣಿಯಾಗಿರಬೇಕಾಗುತ್ತದೆ. ಸಮಾಜದಿಂದ ಏನನ್ನು ಪಡೆದಿದ್ದೇವೆ ಅದಕ್ಕಿಂತಲೂ ಹೆಚ್ಚಿಗೆ ಸಮಾಜಕ್ಕೆ ಹಿಂದುರುಗಿಸಬೇಕು ಎಂದರು.

ಪರಿಸರವಾದಿ ಕುಮಾರಸ್ವಾಮಿ ಸೇರಿದಂತೆ ಮತ್ತಿತರ ಸಂಘಟನೆಗಳ ಮುಖ್ಯಸ್ಥರು ಶಾಲಾ ವಿದ್ಯಾರ್ಥಿಗಳು ಸಾರ್ವಜನಿಕರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು. ತುಂಗಾ ತಡದಲ್ಲಿ ಜನಜಾಗೃತಿಗಾಗಿ ತುಂಗಾ ನದಿಗೆ ವಿಶೇಷ ಆರತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪರಿಸರವಾದಿ ಕುಮಾರಸ್ವಾಮಿ, ಇತ್ತೀಚಿಗೆ ತ್ಯಾಜ್ಯದ ಸಮಸ್ಯೆ ಹೆಚ್ಚಾಗಿದ್ದು, ಪರಿಸರದ ಮೇಲೆ ಅಡ್ಡ ಪರಿಣಾಮ ಬೀರುತ್ತಿದೆ ಎಂದರು. ಪಾದಯಾತ್ರಿ ಬಾಲಕೃಷ್ಣ ನಾಯ್ಡು, ಎಲ್ಲಾ ನದಿಗಳು ಪೂಜ್ಯನೀಯವಾಗಿವೆ ಜನರು ಈ ನದಿಗಳ ಮಹತ್ವವನ್ನು ಅರಿತುಕೊಂಡು ನದಿಗಳ ಸಂರಕ್ಷಣೆಯಲ್ಲಿ ಮುಂದಾಗಬೇಕು.ನದಿಗಳು ಮತ್ತು ಅರಣ್ಯಗಳೊಂದಿಗೆ ಜನರು ಭಾವನಾತ್ಮಕವಾಗಿ ವರ್ತಿಸುತ್ತಾರೆ ನದಿ ಉಗಮ ಸ್ಥಾನದಿಂದಲೇ ಶುದ್ದೀಕರಣದ ಕಡೆಗೆ ಗಮನ ಹರಿಸುವಂಥ ಕಾರ್ಯಕ್ರಮ ಇದಾಗಿದೆ ಎಂದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಪಶ್ಚಿಮಘಟ್ಟದ 1,449 ಗ್ರಾಮಗಳ ಬಗ್ಗೆ ಆತಂಕ ಬೇಡ ಎಂದ ಪರಮೇಶ್ವರ್

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…

16 hours ago

ಕರ್ನಾಟಕದ 101 ತಾಲ್ಲೂಕುಗಳು ಬರಪೀಡಿತ : ಇನ್ನೂ 3 ತಾಲ್ಲೂಕುಗಳ ಮೇಲೂ ಬರದ ಛಾಯೆ

ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…

16 hours ago

101 ತಾಲೂಕುಗಳಲ್ಲಿ ಬರದ ಛಾಯೆ – ಗ್ರಾಮೀಣರಿಗೆ ಉದ್ಯೋಗ ಹೆಚ್ಚಿಸಲು ಸಚಿವ ಖಂಡ್ರೆ ಸೂಚನೆ

ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…

17 hours ago

ಹವಾಮಾನ ವರದಿ | 28-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ಬದಲಾವಣೆ ಎಲ್ಲಿದೆ?

ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…

23 hours ago

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

3 days ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

3 days ago