ತುಂಗಾಭದ್ರಾ ನದಿಗಳ ರಕ್ಷಣೆಗೆ ಹಮ್ಮಿಕೊಂಡಿರುವ ಅಭಿಯಾನ ಶ್ಲಾಘನೀಯ ಎಂದು ಕೂಡ್ಲಿ ಶೃಂಗೇರಿ ಮಠದ ಶ್ರೀ ಅಭಿನವ ಶಂಕರ ಭಾರತಿ ಸ್ವಾಮೀಜಿ ತಿಳಿಸಿದ್ದಾರೆ. ಇದಕ್ಕೆ ಪೂರಕವಾಗಿ ರಾಜ್ಯ ಸರಕಾರ ಕಾನೂನಿನ ಬಲ ನೀಡಬೇಕಿದೆ ಎಂದು ತಿಳಿಸಿದ್ದಾರೆ.
ನಿರ್ಮಲ ತುಂಗಭದ್ರಾ ಅಭಿಯಾನ ಅಂಗವಾಗಿ ಆಯೋಜಿಸಿದ್ದ ‘ತುಂಗಾ ಆರತಿ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ನದಿ ಮಲೀನಗೊಳ್ಳುವುದನ್ನು ತಡೆಯಬೇಕಾದರೆ, ಅದಕ್ಕೆ ಕೃಷಿಯ ಮೂಲಕ ಸೇರುತ್ತಿರುವ ರಾಸಾಯನಿಕವನ್ನೂ ನಿಯಂತ್ರಿಸಬೇಕು. ಪಾತ್ರದಲ್ಲಿಮರಗಳ ರಕ್ಷಣೆ ಆಗಬೇಕು. ಭೂಮಿಗೆ ನೀರು ಇಂಗಿಸುವ ಮರಗಳನ್ನು ನೆಟ್ಟು ಕಾಪಾಡಬೇಕು ಎಂದು ಸಲಹೆ ನೀಡಿದರು. ನೀರಿನ ಸೆಲೆಗಳನ್ನು ರಕ್ಷಿಸಬೇಕಾದರೆ ಪೂರಕ ಕಾನೂನುಗಳನ್ನು ಮಾಡಬೇಕು. ಅದು ಸರಕಾರದಿಂದ ಮಾತ್ರ ಸಾಧ್ಯ. ಜನರ ಮನಸ್ಥಿತಿಯೂ ಬದಲಾಗಬೇಕಿದೆ. ಸರಕಾರವನ್ನೇ ಮೋಸ ಮಾಡುವ ಮನಸ್ಥಿತಿ ಜನರಲ್ಲಿದ್ದು, ಅದೂ ಬದಲಾಗಬೇಕು ಎಂದರು.
2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…
ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…
ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…
ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…
ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…