ಅಡಿಕೆ ಬೆಳೆಗಾರರ ಸಮಸ್ಯೆ | ಸರ್ಕಾರ ಅಡಿಕೆ ಬೆಳೆಗಾರರ ನೆರವಿಗೆ ಬರಲು ಆದಿಚುಂಚನಗಿರಿ ಶ್ರೀಗಳಿಂದ ಮನವಿ |

October 29, 2022
7:34 PM

ಅಡಿಕೆ(Arecanut Growers) ಬೆಳೆಗಾರರು ಹಳದಿ ಎಲೆರೋಗ ಹಾಗೂ ಎಲೆಚುಕ್ಕೆ ರೋಗದಿಂದ ಕಂಗಾಲಾಗಿದ್ದಾರೆ. ಹೀಗಾಗ ಸರ್ಕಾರವು ಅಡಿಕೆ ಬೆಳೆಗಾರರಿಗೆ  ಆರ್ಥಿಕ ನೆರವು ನೀಡಲು ಮುಂದಾಗಬೇಕು ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ  ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಸ್ವಾಮೀಜಿಗಳು, ಮಲೆನಾಡು ಪ್ರದೇಶದ ಹಾಗೂ ಇತರ ಜಿಲ್ಲೆಗಳ ಅಡಿಕೆ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ.  ಕೃಷಿಕರ  ಜೀವನಾಧಾರವಾಗಿದ್ದ ಅಡಿಕೆ, ಕಾಫಿ, ಕಾಳು ಮೆಣಸಿನ ಬೆಳೆಗೆ ಹಾನಿಯಾಗಿದೆ.  ಅಡಿಕೆ ಮರಗಳಿಗೆ ಹಲವು ದಶಕಗಳಿಂದ ಬಾಧಿಸುತ್ತಿರುವ ಹಳದಿ ಎಲೆ ರೋಗ, ಎಲೆ ಚುಕ್ಕೆ ರೋಗದಿಂದ ಕೃಷಿ ನಾಶವಾಗುತ್ತಿದೆ.  ಹೀಗಾಗಿ ಅನೇಕ ಕುಟುಂಬಗಳು ಸಂಕಷ್ಟಕ್ಕೆ ಒಳಗಾಗಿವೆ. ಹೀಗಾಗಿ ರೋಗ ನಿಯಂತ್ರಣಕ್ಕೆ ಸೂಕ್ತ ಔಷಧ ಒದಗಿಸಿಕೊಡಬೇಕು ಹಾಗೂ  ಆರ್ಥಿಕ ನೆರವು ಒದಗಿಸಬೇಕು ಎಂದು ನಿರ್ಮಲಾನಂದನಾಥ ಸ್ವಾಮೀಜಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,
May 7, 2026
1:59 PM
by: ಸಾಯಿಶೇಖರ್ ಕರಿಕಳ
ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ
May 7, 2026
7:50 AM
by: ದ ರೂರಲ್ ಮಿರರ್.ಕಾಂ
ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ
May 7, 2026
7:40 AM
by: ಮಿರರ್‌ ಡೆಸ್ಕ್
ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ
May 7, 2026
7:37 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror