ಅಡಿಕೆ(Arecanut Growers) ಬೆಳೆಗಾರರು ಹಳದಿ ಎಲೆರೋಗ ಹಾಗೂ ಎಲೆಚುಕ್ಕೆ ರೋಗದಿಂದ ಕಂಗಾಲಾಗಿದ್ದಾರೆ. ಹೀಗಾಗ ಸರ್ಕಾರವು ಅಡಿಕೆ ಬೆಳೆಗಾರರಿಗೆ ಆರ್ಥಿಕ ನೆರವು ನೀಡಲು ಮುಂದಾಗಬೇಕು ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಸ್ವಾಮೀಜಿಗಳು, ಮಲೆನಾಡು ಪ್ರದೇಶದ ಹಾಗೂ ಇತರ ಜಿಲ್ಲೆಗಳ ಅಡಿಕೆ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಕೃಷಿಕರ ಜೀವನಾಧಾರವಾಗಿದ್ದ ಅಡಿಕೆ, ಕಾಫಿ, ಕಾಳು ಮೆಣಸಿನ ಬೆಳೆಗೆ ಹಾನಿಯಾಗಿದೆ. ಅಡಿಕೆ ಮರಗಳಿಗೆ ಹಲವು ದಶಕಗಳಿಂದ ಬಾಧಿಸುತ್ತಿರುವ ಹಳದಿ ಎಲೆ ರೋಗ, ಎಲೆ ಚುಕ್ಕೆ ರೋಗದಿಂದ ಕೃಷಿ ನಾಶವಾಗುತ್ತಿದೆ. ಹೀಗಾಗಿ ಅನೇಕ ಕುಟುಂಬಗಳು ಸಂಕಷ್ಟಕ್ಕೆ ಒಳಗಾಗಿವೆ. ಹೀಗಾಗಿ ರೋಗ ನಿಯಂತ್ರಣಕ್ಕೆ ಸೂಕ್ತ ಔಷಧ ಒದಗಿಸಿಕೊಡಬೇಕು ಹಾಗೂ ಆರ್ಥಿಕ ನೆರವು ಒದಗಿಸಬೇಕು ಎಂದು ನಿರ್ಮಲಾನಂದನಾಥ ಸ್ವಾಮೀಜಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…