ಅಡಿಕೆ ಹಾಳಾಗದಂತೆ ದಾಸ್ತಾನು ಮಾಡುವುದು ಹೇಗೆ? ಈ ಬಗ್ಗೆ ಅಡಿಕೆ ಬೆಳೆಗಾರರಲ್ಲಿ ಇರುವ ಬಹುವಾದ ಚರ್ಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಪಿಂಗಾರ ರೈತ ಉತ್ಪಾದಕ ಸಂಸ್ಥೆ ಪರಿಹಾರವೊಂದನ್ನು ಕಂಡುಕೊಂಡಿದೆ. ಅಡಿಕೆ ದಾಸ್ತಾನು ಬಗ್ಗೆಯೇ ಅಧ್ಯಯನ ನಡೆಸಿದೆ, ಅಡಿಕೆ ದಾಸ್ತಾನು ಮಾಡಲು ಮಾತ್ರೆ ಹಾಕದೆಯೇ ಹೊಸದೊಂದು ಪ್ರಯತ್ನದಲ್ಲಿ ಯಶಸ್ಸಾಗಿದೆ. ನೈಟ್ರೋಜನ್ ಗ್ಯಾಸ್ ಬಳಕೆ ಈ ಪ್ರಯತ್ನದ ಹೆಜ್ಜೆ.
ಅಡಿಕೆ ಬೆಳೆಗಾರರ ಎಲ್ಲರಲ್ಲೂ ಇರುವ ಚರ್ಚೆ , ಅಡಿಕೆ ಹಾಳಾಗದಂತೆ ದಾಸ್ತಾನು ಇಡುವುದು ಹೇಗೆ ?. ಎಲ್ಲರಲ್ಲೂ ಇರುವ ಸುಲಭ ವಿಧಾನ ಅಡಿಕೆಗೆ ಮಾತ್ರೆ ಹಾಕಿ ದಾಸ್ತಾನು ಇಡುವುದು. ಈಚೆಗೆ ಕೆಲವು ಸಮಯಗಳಿಂದ ಈ ಬಗ್ಗೆಯೇ ಚರ್ಚೆಯಾಗುತ್ತಿದೆ. ಅಡಿಕೆಗೆ ಹಾಕುವ ಮಾತ್ರೆಯಿಂದಾಗಿಯೇ ಅಡಿಕೆ ಹಾನಿಕಾರಕವಾಗುತ್ತಿದೆ ಎನ್ನುವುದು ಚರ್ಚೆಯ ವಿಷಯ. ಹಾಗಿದ್ದರೆ ಏನು ಮಾಡಬಹುದು ಪರ್ಯಾಯ ಎನ್ನುವುದಕ್ಕೆ ಉತ್ತರ ಇದ್ದಿರಲಿಲ್ಲ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಪಿಂಗಾರ ರೈತ ಉತ್ಪಾದಕ ಸಂಸ್ಥೆ ಈ ಬಗ್ಗೆಯೇ ಅಧ್ಯಯನ ನಡೆಸಿದೆ, ಅಡಿಕೆ ದಾಸ್ತಾನು ಮಾಡಲು ಮಾತ್ರೆ ಹಾಕದೆಯೇ ಹೊಸದೊಂದು ಪ್ರಯತ್ನದಲ್ಲಿ ಯಶಸ್ಸಾಗಿದೆ. (ರಾಮ್ ಕಿಶೋರ್ ಮಂಚಿ ಅವರ ಸಂದರ್ಶನದ ಯೂಟ್ಯೂಬ್ ಲಿಂಕ್ ಇಲ್ಲಿದೆ…..)
ಪಿಂಗಾರ ಸಂಸ್ಥೆಯು ಕಳೆದ ವರ್ಷದಿಂದಲೇ ಈ ಅಧ್ಯಯನ ಆರಂಭ ಮಾಡಿದೆ. ಅಡಿಕೆ ದಾಸ್ತಾನು ಮಾಡಲು ಮಾತ್ರೆಯ ಬದಲಾಗಿ ನೈಟ್ರೋಜನ್ ಗ್ಯಾಸ್ ಬಳಕೆ ಮಾಡಿದೆ. ದಾಸ್ತಾನು ಕೋಣೆಯ ಒಳಗಡೆ ಗಾಳಿಯಾಡದಂತೆ ಎಚ್ಚರಿಸಿ ವಹಿಸಿ, ದಾಸ್ತಾನು ಕೊಠಡಿಯ ಒಳಗೆ ನೈಟ್ರೋಜನ್ ಗ್ಯಾಸ್ ತುಂಬಿಸುವ ಮೂಲಕ ಯಾವುದೇ ಕೀಟಗಳು ಕ್ರಿಯಾಶೀಲವಾಗದಂತೆ ಮಾಡುವ ಕೆಲಸವನ್ನು ಮಾಡಿದೆ. ಹೀಗಾಗಿ ಅಡಿಕೆ ಯಾವುದೇ ರಾಸಾಯನಿಕ ಇಲ್ಲದೆಯೇ ಗುಣಮಟ್ಟ ಕಾಯ್ದುಕೊಂಡಿರುವುದು ಪಿಂಗಾರ ಸಂಸ್ಥೆ ಗಮನಿಸಿದೆ. ಇದೀಗ ಬೆಳೆಗಾರರಿಗೂ ಈ ಮಾಹಿತಿ ನೀಡಿ, ಮುಂದೆ ಆಸಕ್ತ ಕೃಷಿಕರ ಅಡಿಕೆಯನ್ನೂ ದಾಸ್ತಾನು ಇರಿಸಲು ಹೆಜ್ಜೆ ಇರಿಸಿದೆ.
ಈ ಪ್ರಯತ್ನ ಎಲ್ಲೆಡೆಯೂ ಮಾಡಬಹುದಾಗಿದೆ. ಆಹಾರ ಪದಾರ್ಥಗಳ ರಕ್ಷಣೆ, ದಾಸ್ತಾನುನಲ್ಲಿಯೂ ಬಳಕೆ ಮಾಡಬಹುದು ಎಂದು ಪಿಂಗಾರ ಸಂಸ್ಥೆ ಅಧ್ಯಕ್ಷ ರಾಮ್ ಕಿಶೋರ್ ಮಂಚಿ ಹೇಳಿದ್ದಾರೆ. ಅಡಿಕೆಯು ಯಾವುದೇ ಹಾನಿಯಾಗದೆ ಗುಣಮಟ್ಟವನ್ನು ಕಾಯ್ದುಕೊಂಡಿದೆ ಎಂದು ಹೇಳಿದ್ದಾರೆ. ವಿವಿಧ ಬಗೆಯ ಅಡಿಕೆಯನ್ನು ಈ ಪ್ರಯೋಗದಲ್ಲಿ ಒಳಪಡಿಸಲಾಗಿದೆ, ಎಲ್ಲಾ ಬಗೆಯ ಅಡಿಕೆಯೂ ಅದೇ ಗುಣಮಟ್ಟವನ್ನು ಕಾಯ್ದುಕೊಂಡಿದೆ ಎಂದು ಹೇಳುತ್ತಾರೆ ರಾಮ್ ಕಿಶೋರ್ ಮಂಚಿ.
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…