Advertisement
MIRROR FOCUS

ಅಡಿಕೆ ಬೆಳೆಗಾರರಿಗೆ ಮಾಹಿತಿ…| ಅಡಿಕೆ ಹಾಳಾಗದಂತೆ ಮಾತ್ರೆ ಹಾಕಬೇಡಿ | ಪಿಂಗಾರ ಸಂಸ್ಥೆ ಮಾಡಿರುವ ಅಧ್ಯಯನ ಇಲ್ಲಿದೆ.. |

Share

ಅಡಿಕೆ ಹಾಳಾಗದಂತೆ ದಾಸ್ತಾನು ಮಾಡುವುದು ಹೇಗೆ? ಈ ಬಗ್ಗೆ ಅಡಿಕೆ ಬೆಳೆಗಾರರಲ್ಲಿ ಇರುವ ಬಹುವಾದ ಚರ್ಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಪಿಂಗಾರ ರೈತ ಉತ್ಪಾದಕ ಸಂಸ್ಥೆ ಪರಿಹಾರವೊಂದನ್ನು ಕಂಡುಕೊಂಡಿದೆ. ಅಡಿಕೆ ದಾಸ್ತಾನು ಬಗ್ಗೆಯೇ ಅಧ್ಯಯನ ನಡೆಸಿದೆ, ಅಡಿಕೆ ದಾಸ್ತಾನು ಮಾಡಲು ಮಾತ್ರೆ ಹಾಕದೆಯೇ ಹೊಸದೊಂದು ಪ್ರಯತ್ನದಲ್ಲಿ ಯಶಸ್ಸಾಗಿದೆ. ನೈಟ್ರೋಜನ್‌ ಗ್ಯಾಸ್‌ ಬಳಕೆ ಈ ಪ್ರಯತ್ನದ ಹೆಜ್ಜೆ.

ಅಡಿಕೆ ಬೆಳೆಗಾರರ ಎಲ್ಲರಲ್ಲೂ ಇರುವ ಚರ್ಚೆ , ಅಡಿಕೆ ಹಾಳಾಗದಂತೆ ದಾಸ್ತಾನು ಇಡುವುದು  ಹೇಗೆ ?. ಎಲ್ಲರಲ್ಲೂ ಇರುವ ಸುಲಭ ವಿಧಾನ ಅಡಿಕೆಗೆ ಮಾತ್ರೆ ಹಾಕಿ ದಾಸ್ತಾನು ಇಡುವುದು. ಈಚೆಗೆ ಕೆಲವು ಸಮಯಗಳಿಂದ ಈ ಬಗ್ಗೆಯೇ ಚರ್ಚೆಯಾಗುತ್ತಿದೆ. ಅಡಿಕೆಗೆ ಹಾಕುವ ಮಾತ್ರೆಯಿಂದಾಗಿಯೇ ಅಡಿಕೆ ಹಾನಿಕಾರಕವಾಗುತ್ತಿದೆ ಎನ್ನುವುದು ಚರ್ಚೆಯ ವಿಷಯ. ಹಾಗಿದ್ದರೆ ಏನು ಮಾಡಬಹುದು ಪರ್ಯಾಯ ಎನ್ನುವುದಕ್ಕೆ ಉತ್ತರ ಇದ್ದಿರಲಿಲ್ಲ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಪಿಂಗಾರ ರೈತ ಉತ್ಪಾದಕ ಸಂಸ್ಥೆ ಈ ಬಗ್ಗೆಯೇ ಅಧ್ಯಯನ ನಡೆಸಿದೆ, ಅಡಿಕೆ ದಾಸ್ತಾನು ಮಾಡಲು ಮಾತ್ರೆ ಹಾಕದೆಯೇ ಹೊಸದೊಂದು ಪ್ರಯತ್ನದಲ್ಲಿ ಯಶಸ್ಸಾಗಿದೆ. (ರಾಮ್‌ ಕಿಶೋರ್‌ ಮಂಚಿ ಅವರ ಸಂದರ್ಶನದ ಯೂಟ್ಯೂಬ್‌ ಲಿಂಕ್‌ ಇಲ್ಲಿದೆ…..)

ಪಿಂಗಾರ ಸಂಸ್ಥೆಯು ಕಳೆದ ವರ್ಷದಿಂದಲೇ ಈ ಅಧ್ಯಯನ ಆರಂಭ ಮಾಡಿದೆ. ಅಡಿಕೆ ದಾಸ್ತಾನು ಮಾಡಲು ಮಾತ್ರೆಯ ಬದಲಾಗಿ ನೈಟ್ರೋಜನ್‌ ಗ್ಯಾಸ್‌ ಬಳಕೆ ಮಾಡಿದೆ. ದಾಸ್ತಾನು ಕೋಣೆಯ ಒಳಗಡೆ ಗಾಳಿಯಾಡದಂತೆ ಎಚ್ಚರಿಸಿ ವಹಿಸಿ, ದಾಸ್ತಾನು ಕೊಠಡಿಯ ಒಳಗೆ ನೈಟ್ರೋಜನ್‌ ಗ್ಯಾಸ್‌ ತುಂಬಿಸುವ ಮೂಲಕ ಯಾವುದೇ ಕೀಟಗಳು ಕ್ರಿಯಾಶೀಲವಾಗದಂತೆ ಮಾಡುವ ಕೆಲಸವನ್ನು ಮಾಡಿದೆ. ಹೀಗಾಗಿ ಅಡಿಕೆ ಯಾವುದೇ ರಾಸಾಯನಿಕ ಇಲ್ಲದೆಯೇ ಗುಣಮಟ್ಟ ಕಾಯ್ದುಕೊಂಡಿರುವುದು  ಪಿಂಗಾರ ಸಂಸ್ಥೆ ಗಮನಿಸಿದೆ. ಇದೀಗ ಬೆಳೆಗಾರರಿಗೂ ಈ ಮಾಹಿತಿ ನೀಡಿ, ಮುಂದೆ ಆಸಕ್ತ ಕೃಷಿಕರ ಅಡಿಕೆಯನ್ನೂ ದಾಸ್ತಾನು ಇರಿಸಲು ಹೆಜ್ಜೆ ಇರಿಸಿದೆ.

ರಾಮ್‌ ಕಿಶೊರ್‌ ಮಂಚಿ

ಈ ಪ್ರಯತ್ನ ಎಲ್ಲೆಡೆಯೂ ಮಾಡಬಹುದಾಗಿದೆ. ಆಹಾರ ಪದಾರ್ಥಗಳ ರಕ್ಷಣೆ, ದಾಸ್ತಾನುನಲ್ಲಿಯೂ ಬಳಕೆ ಮಾಡಬಹುದು  ಎಂದು ಪಿಂಗಾರ ಸಂಸ್ಥೆ ಅಧ್ಯಕ್ಷ ರಾಮ್‌ ಕಿಶೋರ್‌ ಮಂಚಿ ಹೇಳಿದ್ದಾರೆ. ಅಡಿಕೆಯು ಯಾವುದೇ ಹಾನಿಯಾಗದೆ ಗುಣಮಟ್ಟವನ್ನು ಕಾಯ್ದುಕೊಂಡಿದೆ ಎಂದು ಹೇಳಿದ್ದಾರೆ. ವಿವಿಧ ಬಗೆಯ ಅಡಿಕೆಯನ್ನು ಈ ಪ್ರಯೋಗದಲ್ಲಿ ಒಳಪಡಿಸಲಾಗಿದೆ, ಎಲ್ಲಾ ಬಗೆಯ ಅಡಿಕೆಯೂ ಅದೇ ಗುಣಮಟ್ಟವನ್ನು ಕಾಯ್ದುಕೊಂಡಿದೆ ಎಂದು  ಹೇಳುತ್ತಾರೆ ರಾಮ್‌ ಕಿಶೋರ್‌ ಮಂಚಿ.

 

ನಿಮ್ಮ ಅಭಿಪ್ರಾಯಗಳಿಗೆ :

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

26 minutes ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

9 hours ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

14 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

1 day ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

1 day ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

1 day ago