ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ನ.25ರಂದು ತಮಿಳುನಾಡು ಮತ್ತು ಪುದುಚೆರಿಯ ಕರಾವಳಿ ಪ್ರದೇಶದಲ್ಲಿ ‘ನಿವಾರ್’ ಚಂಡಮಾರುತ ತೀವ್ರವಾಗಿ ಅಪ್ಪಳಿಸುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
‘ಮುಂಜಾಗ್ರತಾ ಕ್ರಮವಾಗಿ ಚೆಂಬರಂಬಕ್ಕಂ ಸೇರಿದಂತೆ ಇಲ್ಲಿನ ಜಲಾಶಯಗಳ ಪ್ರದೇಶಗಳ ಮೇಲೆ ನಿರಂತರವಾಗಿ ನಿಗಾವಹಿಸಲಾಗುತ್ತಿದ್ದು, ತಗ್ಗು ಪ್ರದೇಶಗಳಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೇವಲ ತಮಿಳುನಾಡು ಮಾತ್ರವಲ್ಲದೇ, ನೆರೆಯ ಆಂಧ್ರ ಪ್ರದೇಶ ಮತ್ತು ಕರ್ನಾಟಕದ ಕೆಲ ಭಾಗಗಳಿಗೂ ನಿವಾರ್ ಚಂಡಮಾರುತದ ಎಪೆಕ್ಟ್ ತಟ್ಟಲಿದ್ದು, ಇಲ್ಲಿಯೂ ಕೂಡ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ..
ತಮಿಳುನಾಡು ಮತ್ತು ಪುದುಚೆರಿಯ ಕರಾವಳಿ ಭಾಗಗಳಿಗೆ ‘ನಿವಾರ್’ ಚಂಡಮಾರುತ ಅಪ್ಪಳಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಎರಡು ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮೋದಿಯವರು, ‘ನಿವಾರ್ ಚಂಡಮಾರುತದ ಹಿನ್ನೆಲೆಯಲ್ಲಿ ತಮಿಳುನಾಡು ಮತ್ತು ಪುದುಚೆರಿಯಲ್ಲಿ ಉಂಟಾಗಿರುವ ಪರಿಸ್ಥಿತಿ ಬಗ್ಗೆ ಮಾತನಾಡಿದ್ದೇನೆ. ಕೇಂದ್ರದಿಂದ ಸಾಧ್ಯವಾದಷ್ಟು ಎಲ್ಲ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದ್ದೇನೆ. ಪ್ರವಾಹಪೀಡಿತ ಪ್ರದೇಶಗಳಲ್ಲಿರುವ ಜನರ ಸುರಕ್ಷತೆಗಾಗಿ ಪ್ರಾರ್ಥಿಸುತ್ತೇನೆ’ ಎಂದು ಉಲ್ಲೇಖಿಸಿದ್ದಾರೆ.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…