#AnnaBhagya | ಅನ್ನಭಾಗ್ಯ ವಿತರಣೆಗೆ ಒದಗದ ಭಾಗ್ಯ | ಕೇಂದ್ರ, ಇತರ ರಾಜ್ಯಗಳಿಂದ ಸಿಗದ ಭರವಸೆ |

June 24, 2023
10:19 AM
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯಕ್ಕೆ ಸದ್ಯಕ್ಕೆ ಬಡವರಗೆ 10 ಕೆಜಿ ಉಚಿತ ಅಕ್ಕಿ ಒದಗಿಸುವ ಯೋಜನೆ ಸದ್ಯಕ್ಕೆ ಸಿಗುವ ಲಕ್ಷಣಗಳು ಇಲ್ಲ. ಅತ್ತ ಕೇಂದ್ರವೂ ಅಕ್ಕಿ ನೀಡಲು ಸಾಧ್ಯವಿಲ್ಲ ಎಂದು  ಖಡಾಖಂಡಿತವಾಗಿ ಹೇಳಿದೆ. ಇತ್ತ ರಾಜ್ಯ ಸರ್ಕಾರ ಕೆಲ ರಾಜ್ಯಗಳ ಮೊರೆ ಹೋದರು ಅದು ಇನ್ನೂ ಪಕ್ಕಾ ಆಗಿಲ್ಲ.

ಒಂದು ಕಡೆಯಲ್ಲಿ ಅನ್ನಭಾಗ್ಯದ #AnnaBhagya ಅಕ್ಕಿಗೆ  ಕೇಂದ್ರದ ಬಾಗಿಲು ಬಹುತೇಕ ಬಂದ್ ಆಗಿದ್ದರೆ ಇನ್ನೊಂದು ಕಡೆ ರಾಜ್ಯಗಳಿಂದಲೂ ನಿರೀಕ್ಷಿಸಿದ ಭರವಸೆ ಸಿಕ್ಕಿಲ್ಲ. ಛತ್ತೀಸ್‍ಗಢ ಅಕ್ಕಿ ಕೊಡುವ ಭರವಸೆ ನೀಡಿದರೂ ಎಷ್ಟು ಪ್ರಮಾಣ ಎಂದು ಖಚಿತ ಪಡಿಸಿಲ್ಲ. ಅಲ್ಲದೇ ಛತ್ತೀಸ್‌ಗಢದಿಂದ ಅಕ್ಕಿ ಕೊಳ್ಳುವುದು ದುಬಾರಿಯಾಗಿದೆ. ಒಂದು ವೇಳೇ ಖರೀದಿಸಿದರೂ ಸಾಗಾಣಿಕಾ ವೆಚ್ಚವೂ ಹೆಚ್ಚಾಗುತ್ತದೆ. ಪಂಜಾಬ್ 1.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ನೀಡುವ ಭರವಸೆ ನೀಡಿದೆ. ಆಂಧ್ರಪ್ರದೇಶ  ಅಕ್ಕಿ ನೀಡುವ ಭರವಸೆ ನೀಡಿದರೂ ಕೆಜಿಗೆ 42 ರೂ. ದರ ನಿಗದಿ ಎಂದಿದೆ. ತೆಲಂಗಾಣ ಮತ್ತು ತಮಿಳುನಾಡಿನ ಅಕ್ಕಿ ನಿರೀಕ್ಷೆಯಲ್ಲಿ ಇದ್ದ ರಾಜ್ಯ ಸರ್ಕಾರಕ್ಕೆ ಖಚಿತ ಭರವಸೆ ಸಿಕ್ಕಿಲ್ಲ ಎನ್ನಲಾಗಿದೆ.

ಒಟ್ಟಾರೆ ಅನ್ನ ಭಾಗ್ಯದ ಅಕ್ಕಿಗಾಗಿ ರಾಜ್ಯಗಳ ಮೊರೆ ಹೋದ ರಾಜ್ಯ ಸರ್ಕಾರಕ್ಕೆ ಬೇಡಿಕೆಯಷ್ಟು ಅಕ್ಕಿಯ ಭರವಸೆ ಇನ್ನೂ ಸಿಕ್ಕಿಲ್ಲ. ಶುಕ್ರವಾರ ಕೇಂದ್ರ ಆಹಾರ ಸಚಿವ ಪಿಯೂಶ್‌ ಗೋಯಲ್‌  ಅವರನ್ನು ರಾಜ್ಯದ ಆಹಾರ ಸಚಿವ ಮುನಿಯಪ್ಪ  ಭೇಟಿ ಮಾಡಿದ್ದರು. ಭೇಟಿ ಬಳಿಕ ಪ್ರತಿಕ್ರಿಯಿಸಿದ ಮುನಿಯಪ್ಪ, ಪಿಯೂಷ್ ಗೋಯಲ್ ಅಕ್ಕಿ ನೀಡಲು ಸಾಧ್ಯವಿಲ್ಲ ಎಂದು ಹೇಳಿದರು. ಇದು ರಾಜಕೀಯ ದುರುದ್ದೇಶದ ನಿಲುವು. ಸ್ಟಾಕ್ ಇದ್ದರೂ ಕೊಡುವುದಿಲ್ಲ ಎನ್ನುವುದು ಎಷ್ಟು ಸರಿ? ನಾವು ಅಕ್ಕಿಯನ್ನು ಕೊಡುತ್ತೇವೆ. ಕೇಂದ್ರದ ಏಜೆನ್ಸಿಗಳ ಮೂಲಕ ಅಕ್ಕಿ ಕೊಳ್ಳುವ ಪ್ರಯತ್ನ ನಡೆಯುತ್ತಿದೆ. ಈ ವಾರದಲ್ಲಿ ತೀರ್ಮಾನ ಆಗಲಿದೆ ಎಂದು ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ಚಕ್ರಗಳೇ ಬದಲಾಗುತ್ತಿವೆ | ಲಾ ನೀನಾ ಪರಿಣಾಮ ಕಡಿಮೆ, ಉಷ್ಣ ಅಲೆಗಳ ಭೀತಿ ಹೆಚ್ಚಳ
March 15, 2026
11:39 AM
by: ದ ರೂರಲ್ ಮಿರರ್.ಕಾಂ
ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!
March 14, 2026
8:05 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ
March 14, 2026
2:43 PM
by: ಸಾಯಿಶೇಖರ್ ಕರಿಕಳ
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?
March 14, 2026
7:21 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror