#AnnaBhagya | ಅನ್ನಭಾಗ್ಯ ವಿತರಣೆಗೆ ಒದಗದ ಭಾಗ್ಯ | ಕೇಂದ್ರ, ಇತರ ರಾಜ್ಯಗಳಿಂದ ಸಿಗದ ಭರವಸೆ |

June 24, 2023
10:19 AM
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯಕ್ಕೆ ಸದ್ಯಕ್ಕೆ ಬಡವರಗೆ 10 ಕೆಜಿ ಉಚಿತ ಅಕ್ಕಿ ಒದಗಿಸುವ ಯೋಜನೆ ಸದ್ಯಕ್ಕೆ ಸಿಗುವ ಲಕ್ಷಣಗಳು ಇಲ್ಲ. ಅತ್ತ ಕೇಂದ್ರವೂ ಅಕ್ಕಿ ನೀಡಲು ಸಾಧ್ಯವಿಲ್ಲ ಎಂದು  ಖಡಾಖಂಡಿತವಾಗಿ ಹೇಳಿದೆ. ಇತ್ತ ರಾಜ್ಯ ಸರ್ಕಾರ ಕೆಲ ರಾಜ್ಯಗಳ ಮೊರೆ ಹೋದರು ಅದು ಇನ್ನೂ ಪಕ್ಕಾ ಆಗಿಲ್ಲ.

ಒಂದು ಕಡೆಯಲ್ಲಿ ಅನ್ನಭಾಗ್ಯದ #AnnaBhagya ಅಕ್ಕಿಗೆ  ಕೇಂದ್ರದ ಬಾಗಿಲು ಬಹುತೇಕ ಬಂದ್ ಆಗಿದ್ದರೆ ಇನ್ನೊಂದು ಕಡೆ ರಾಜ್ಯಗಳಿಂದಲೂ ನಿರೀಕ್ಷಿಸಿದ ಭರವಸೆ ಸಿಕ್ಕಿಲ್ಲ. ಛತ್ತೀಸ್‍ಗಢ ಅಕ್ಕಿ ಕೊಡುವ ಭರವಸೆ ನೀಡಿದರೂ ಎಷ್ಟು ಪ್ರಮಾಣ ಎಂದು ಖಚಿತ ಪಡಿಸಿಲ್ಲ. ಅಲ್ಲದೇ ಛತ್ತೀಸ್‌ಗಢದಿಂದ ಅಕ್ಕಿ ಕೊಳ್ಳುವುದು ದುಬಾರಿಯಾಗಿದೆ. ಒಂದು ವೇಳೇ ಖರೀದಿಸಿದರೂ ಸಾಗಾಣಿಕಾ ವೆಚ್ಚವೂ ಹೆಚ್ಚಾಗುತ್ತದೆ. ಪಂಜಾಬ್ 1.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ನೀಡುವ ಭರವಸೆ ನೀಡಿದೆ. ಆಂಧ್ರಪ್ರದೇಶ  ಅಕ್ಕಿ ನೀಡುವ ಭರವಸೆ ನೀಡಿದರೂ ಕೆಜಿಗೆ 42 ರೂ. ದರ ನಿಗದಿ ಎಂದಿದೆ. ತೆಲಂಗಾಣ ಮತ್ತು ತಮಿಳುನಾಡಿನ ಅಕ್ಕಿ ನಿರೀಕ್ಷೆಯಲ್ಲಿ ಇದ್ದ ರಾಜ್ಯ ಸರ್ಕಾರಕ್ಕೆ ಖಚಿತ ಭರವಸೆ ಸಿಕ್ಕಿಲ್ಲ ಎನ್ನಲಾಗಿದೆ.

Advertisement

ಒಟ್ಟಾರೆ ಅನ್ನ ಭಾಗ್ಯದ ಅಕ್ಕಿಗಾಗಿ ರಾಜ್ಯಗಳ ಮೊರೆ ಹೋದ ರಾಜ್ಯ ಸರ್ಕಾರಕ್ಕೆ ಬೇಡಿಕೆಯಷ್ಟು ಅಕ್ಕಿಯ ಭರವಸೆ ಇನ್ನೂ ಸಿಕ್ಕಿಲ್ಲ. ಶುಕ್ರವಾರ ಕೇಂದ್ರ ಆಹಾರ ಸಚಿವ ಪಿಯೂಶ್‌ ಗೋಯಲ್‌  ಅವರನ್ನು ರಾಜ್ಯದ ಆಹಾರ ಸಚಿವ ಮುನಿಯಪ್ಪ  ಭೇಟಿ ಮಾಡಿದ್ದರು. ಭೇಟಿ ಬಳಿಕ ಪ್ರತಿಕ್ರಿಯಿಸಿದ ಮುನಿಯಪ್ಪ, ಪಿಯೂಷ್ ಗೋಯಲ್ ಅಕ್ಕಿ ನೀಡಲು ಸಾಧ್ಯವಿಲ್ಲ ಎಂದು ಹೇಳಿದರು. ಇದು ರಾಜಕೀಯ ದುರುದ್ದೇಶದ ನಿಲುವು. ಸ್ಟಾಕ್ ಇದ್ದರೂ ಕೊಡುವುದಿಲ್ಲ ಎನ್ನುವುದು ಎಷ್ಟು ಸರಿ? ನಾವು ಅಕ್ಕಿಯನ್ನು ಕೊಡುತ್ತೇವೆ. ಕೇಂದ್ರದ ಏಜೆನ್ಸಿಗಳ ಮೂಲಕ ಅಕ್ಕಿ ಕೊಳ್ಳುವ ಪ್ರಯತ್ನ ನಡೆಯುತ್ತಿದೆ. ಈ ವಾರದಲ್ಲಿ ತೀರ್ಮಾನ ಆಗಲಿದೆ ಎಂದು ತಿಳಿಸಿದರು.

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 28-03-2025 | ಕೆಲವು ಕಡೆ ಇಂದೂ ಮಳೆ | ಎ.2 ರಿಂದ ಮುಂಗಾರು ಪೂರ್ವ ಮಳೆಯ ಲಕ್ಷಣ |
March 28, 2025
3:02 PM
by: ಸಾಯಿಶೇಖರ್ ಕರಿಕಳ
ಪಪ್ಪಾಯಿ ಬೆಳೆ ಕಲಿಸಿದ ಕೃಷಿ ಪಾಠ | ಕೃಷಿ ಬದುಕಿಗೊಂದು ಸ್ಫೂರ್ತಿಯ ಮಾತು |
March 28, 2025
8:12 AM
by: ಮಹೇಶ್ ಪುಚ್ಚಪ್ಪಾಡಿ
7.5 ಲಕ್ಷಕ್ಕೂ ಹೆಚ್ಚು ಯಾತ್ರಿಕರು ಚಾರ್ ಧಾಮ್ ಹೇಮಕುಂಡ್ ಯಾತ್ರೆಗೆ ನೋಂದಾವಣೆ
March 28, 2025
8:00 AM
by: The Rural Mirror ಸುದ್ದಿಜಾಲ
ಹೇಮಾವತಿ ನದಿ ನೀರಿಗೆ ವಿಷ ಸೇರ್ಪಡೆ : ಮೀನುಗಳ ಸಾವು
March 28, 2025
7:35 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group