Advertisement
ಸುದ್ದಿಗಳು

#AnnaBhagya | ಅನ್ನಭಾಗ್ಯ ವಿತರಣೆಗೆ ಒದಗದ ಭಾಗ್ಯ | ಕೇಂದ್ರ, ಇತರ ರಾಜ್ಯಗಳಿಂದ ಸಿಗದ ಭರವಸೆ |

Share
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯಕ್ಕೆ ಸದ್ಯಕ್ಕೆ ಬಡವರಗೆ 10 ಕೆಜಿ ಉಚಿತ ಅಕ್ಕಿ ಒದಗಿಸುವ ಯೋಜನೆ ಸದ್ಯಕ್ಕೆ ಸಿಗುವ ಲಕ್ಷಣಗಳು ಇಲ್ಲ. ಅತ್ತ ಕೇಂದ್ರವೂ ಅಕ್ಕಿ ನೀಡಲು ಸಾಧ್ಯವಿಲ್ಲ ಎಂದು  ಖಡಾಖಂಡಿತವಾಗಿ ಹೇಳಿದೆ. ಇತ್ತ ರಾಜ್ಯ ಸರ್ಕಾರ ಕೆಲ ರಾಜ್ಯಗಳ ಮೊರೆ ಹೋದರು ಅದು ಇನ್ನೂ ಪಕ್ಕಾ ಆಗಿಲ್ಲ.

ಒಂದು ಕಡೆಯಲ್ಲಿ ಅನ್ನಭಾಗ್ಯದ #AnnaBhagya ಅಕ್ಕಿಗೆ  ಕೇಂದ್ರದ ಬಾಗಿಲು ಬಹುತೇಕ ಬಂದ್ ಆಗಿದ್ದರೆ ಇನ್ನೊಂದು ಕಡೆ ರಾಜ್ಯಗಳಿಂದಲೂ ನಿರೀಕ್ಷಿಸಿದ ಭರವಸೆ ಸಿಕ್ಕಿಲ್ಲ. ಛತ್ತೀಸ್‍ಗಢ ಅಕ್ಕಿ ಕೊಡುವ ಭರವಸೆ ನೀಡಿದರೂ ಎಷ್ಟು ಪ್ರಮಾಣ ಎಂದು ಖಚಿತ ಪಡಿಸಿಲ್ಲ. ಅಲ್ಲದೇ ಛತ್ತೀಸ್‌ಗಢದಿಂದ ಅಕ್ಕಿ ಕೊಳ್ಳುವುದು ದುಬಾರಿಯಾಗಿದೆ. ಒಂದು ವೇಳೇ ಖರೀದಿಸಿದರೂ ಸಾಗಾಣಿಕಾ ವೆಚ್ಚವೂ ಹೆಚ್ಚಾಗುತ್ತದೆ. ಪಂಜಾಬ್ 1.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ನೀಡುವ ಭರವಸೆ ನೀಡಿದೆ. ಆಂಧ್ರಪ್ರದೇಶ  ಅಕ್ಕಿ ನೀಡುವ ಭರವಸೆ ನೀಡಿದರೂ ಕೆಜಿಗೆ 42 ರೂ. ದರ ನಿಗದಿ ಎಂದಿದೆ. ತೆಲಂಗಾಣ ಮತ್ತು ತಮಿಳುನಾಡಿನ ಅಕ್ಕಿ ನಿರೀಕ್ಷೆಯಲ್ಲಿ ಇದ್ದ ರಾಜ್ಯ ಸರ್ಕಾರಕ್ಕೆ ಖಚಿತ ಭರವಸೆ ಸಿಕ್ಕಿಲ್ಲ ಎನ್ನಲಾಗಿದೆ.

ಒಟ್ಟಾರೆ ಅನ್ನ ಭಾಗ್ಯದ ಅಕ್ಕಿಗಾಗಿ ರಾಜ್ಯಗಳ ಮೊರೆ ಹೋದ ರಾಜ್ಯ ಸರ್ಕಾರಕ್ಕೆ ಬೇಡಿಕೆಯಷ್ಟು ಅಕ್ಕಿಯ ಭರವಸೆ ಇನ್ನೂ ಸಿಕ್ಕಿಲ್ಲ. ಶುಕ್ರವಾರ ಕೇಂದ್ರ ಆಹಾರ ಸಚಿವ ಪಿಯೂಶ್‌ ಗೋಯಲ್‌  ಅವರನ್ನು ರಾಜ್ಯದ ಆಹಾರ ಸಚಿವ ಮುನಿಯಪ್ಪ  ಭೇಟಿ ಮಾಡಿದ್ದರು. ಭೇಟಿ ಬಳಿಕ ಪ್ರತಿಕ್ರಿಯಿಸಿದ ಮುನಿಯಪ್ಪ, ಪಿಯೂಷ್ ಗೋಯಲ್ ಅಕ್ಕಿ ನೀಡಲು ಸಾಧ್ಯವಿಲ್ಲ ಎಂದು ಹೇಳಿದರು. ಇದು ರಾಜಕೀಯ ದುರುದ್ದೇಶದ ನಿಲುವು. ಸ್ಟಾಕ್ ಇದ್ದರೂ ಕೊಡುವುದಿಲ್ಲ ಎನ್ನುವುದು ಎಷ್ಟು ಸರಿ? ನಾವು ಅಕ್ಕಿಯನ್ನು ಕೊಡುತ್ತೇವೆ. ಕೇಂದ್ರದ ಏಜೆನ್ಸಿಗಳ ಮೂಲಕ ಅಕ್ಕಿ ಕೊಳ್ಳುವ ಪ್ರಯತ್ನ ನಡೆಯುತ್ತಿದೆ. ಈ ವಾರದಲ್ಲಿ ತೀರ್ಮಾನ ಆಗಲಿದೆ ಎಂದು ತಿಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

5 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

6 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

6 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

13 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

18 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

1 day ago