Advertisement
ಸುದ್ದಿಗಳು

#AnnaBhagya | ಅನ್ನಭಾಗ್ಯ ವಿತರಣೆಗೆ ಒದಗದ ಭಾಗ್ಯ | ಕೇಂದ್ರ, ಇತರ ರಾಜ್ಯಗಳಿಂದ ಸಿಗದ ಭರವಸೆ |

Share
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯಕ್ಕೆ ಸದ್ಯಕ್ಕೆ ಬಡವರಗೆ 10 ಕೆಜಿ ಉಚಿತ ಅಕ್ಕಿ ಒದಗಿಸುವ ಯೋಜನೆ ಸದ್ಯಕ್ಕೆ ಸಿಗುವ ಲಕ್ಷಣಗಳು ಇಲ್ಲ. ಅತ್ತ ಕೇಂದ್ರವೂ ಅಕ್ಕಿ ನೀಡಲು ಸಾಧ್ಯವಿಲ್ಲ ಎಂದು  ಖಡಾಖಂಡಿತವಾಗಿ ಹೇಳಿದೆ. ಇತ್ತ ರಾಜ್ಯ ಸರ್ಕಾರ ಕೆಲ ರಾಜ್ಯಗಳ ಮೊರೆ ಹೋದರು ಅದು ಇನ್ನೂ ಪಕ್ಕಾ ಆಗಿಲ್ಲ.

ಒಂದು ಕಡೆಯಲ್ಲಿ ಅನ್ನಭಾಗ್ಯದ #AnnaBhagya ಅಕ್ಕಿಗೆ  ಕೇಂದ್ರದ ಬಾಗಿಲು ಬಹುತೇಕ ಬಂದ್ ಆಗಿದ್ದರೆ ಇನ್ನೊಂದು ಕಡೆ ರಾಜ್ಯಗಳಿಂದಲೂ ನಿರೀಕ್ಷಿಸಿದ ಭರವಸೆ ಸಿಕ್ಕಿಲ್ಲ. ಛತ್ತೀಸ್‍ಗಢ ಅಕ್ಕಿ ಕೊಡುವ ಭರವಸೆ ನೀಡಿದರೂ ಎಷ್ಟು ಪ್ರಮಾಣ ಎಂದು ಖಚಿತ ಪಡಿಸಿಲ್ಲ. ಅಲ್ಲದೇ ಛತ್ತೀಸ್‌ಗಢದಿಂದ ಅಕ್ಕಿ ಕೊಳ್ಳುವುದು ದುಬಾರಿಯಾಗಿದೆ. ಒಂದು ವೇಳೇ ಖರೀದಿಸಿದರೂ ಸಾಗಾಣಿಕಾ ವೆಚ್ಚವೂ ಹೆಚ್ಚಾಗುತ್ತದೆ. ಪಂಜಾಬ್ 1.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ನೀಡುವ ಭರವಸೆ ನೀಡಿದೆ. ಆಂಧ್ರಪ್ರದೇಶ  ಅಕ್ಕಿ ನೀಡುವ ಭರವಸೆ ನೀಡಿದರೂ ಕೆಜಿಗೆ 42 ರೂ. ದರ ನಿಗದಿ ಎಂದಿದೆ. ತೆಲಂಗಾಣ ಮತ್ತು ತಮಿಳುನಾಡಿನ ಅಕ್ಕಿ ನಿರೀಕ್ಷೆಯಲ್ಲಿ ಇದ್ದ ರಾಜ್ಯ ಸರ್ಕಾರಕ್ಕೆ ಖಚಿತ ಭರವಸೆ ಸಿಕ್ಕಿಲ್ಲ ಎನ್ನಲಾಗಿದೆ.

ಒಟ್ಟಾರೆ ಅನ್ನ ಭಾಗ್ಯದ ಅಕ್ಕಿಗಾಗಿ ರಾಜ್ಯಗಳ ಮೊರೆ ಹೋದ ರಾಜ್ಯ ಸರ್ಕಾರಕ್ಕೆ ಬೇಡಿಕೆಯಷ್ಟು ಅಕ್ಕಿಯ ಭರವಸೆ ಇನ್ನೂ ಸಿಕ್ಕಿಲ್ಲ. ಶುಕ್ರವಾರ ಕೇಂದ್ರ ಆಹಾರ ಸಚಿವ ಪಿಯೂಶ್‌ ಗೋಯಲ್‌  ಅವರನ್ನು ರಾಜ್ಯದ ಆಹಾರ ಸಚಿವ ಮುನಿಯಪ್ಪ  ಭೇಟಿ ಮಾಡಿದ್ದರು. ಭೇಟಿ ಬಳಿಕ ಪ್ರತಿಕ್ರಿಯಿಸಿದ ಮುನಿಯಪ್ಪ, ಪಿಯೂಷ್ ಗೋಯಲ್ ಅಕ್ಕಿ ನೀಡಲು ಸಾಧ್ಯವಿಲ್ಲ ಎಂದು ಹೇಳಿದರು. ಇದು ರಾಜಕೀಯ ದುರುದ್ದೇಶದ ನಿಲುವು. ಸ್ಟಾಕ್ ಇದ್ದರೂ ಕೊಡುವುದಿಲ್ಲ ಎನ್ನುವುದು ಎಷ್ಟು ಸರಿ? ನಾವು ಅಕ್ಕಿಯನ್ನು ಕೊಡುತ್ತೇವೆ. ಕೇಂದ್ರದ ಏಜೆನ್ಸಿಗಳ ಮೂಲಕ ಅಕ್ಕಿ ಕೊಳ್ಳುವ ಪ್ರಯತ್ನ ನಡೆಯುತ್ತಿದೆ. ಈ ವಾರದಲ್ಲಿ ತೀರ್ಮಾನ ಆಗಲಿದೆ ಎಂದು ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು…! ₹1.34 ಲಕ್ಷಕ್ಕೆ BSNL ಸ್ಯಾಟಲೈಟ್ ಫೋನ್ ಬಿಡುಗಡೆ

ಮೊಬೈಲ್ ನೆಟ್‌ವರ್ಕ್ ಇಲ್ಲದ ಪ್ರದೇಶಗಳಲ್ಲಿಯೂ ಸಂಪರ್ಕಕ್ಕಾಗಿ BSNL ₹1.34 ಲಕ್ಷದ ಸ್ಯಾಟಲೈಟ್ ಫೋನ್…

3 hours ago

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್‌ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…

13 hours ago

ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!

ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…

13 hours ago

ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ

ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…

13 hours ago

ಆಘಾತಕಾರಿ ವರದಿ- ಮೇ-ಜೂನ್‌ನಲ್ಲಿ ಭಾರತದ 10 ಮಕ್ಕಳಲ್ಲಿ 7 ಮಂದಿ ಶಾಲೆ ತಪ್ಪಿಸಿದರು..!

ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…

20 hours ago

ಹವಾಮಾನ ವರದಿ | 09-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ..! ಜುಲೈ 11 ರಿಂದ ಮಳೆ ಮತ್ತಷ್ಟು ಇಳಿಕೆ, ಬಿಸಿಲಿನ ಅವಧಿ ಹೆಚ್ಚಳ ಸಾಧ್ಯ

ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…

21 hours ago