Advertisement
ಸುದ್ದಿಗಳು

#AnnaBhagya | ಅನ್ನಭಾಗ್ಯ ವಿತರಣೆಗೆ ಒದಗದ ಭಾಗ್ಯ | ಕೇಂದ್ರ, ಇತರ ರಾಜ್ಯಗಳಿಂದ ಸಿಗದ ಭರವಸೆ |

Share
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯಕ್ಕೆ ಸದ್ಯಕ್ಕೆ ಬಡವರಗೆ 10 ಕೆಜಿ ಉಚಿತ ಅಕ್ಕಿ ಒದಗಿಸುವ ಯೋಜನೆ ಸದ್ಯಕ್ಕೆ ಸಿಗುವ ಲಕ್ಷಣಗಳು ಇಲ್ಲ. ಅತ್ತ ಕೇಂದ್ರವೂ ಅಕ್ಕಿ ನೀಡಲು ಸಾಧ್ಯವಿಲ್ಲ ಎಂದು  ಖಡಾಖಂಡಿತವಾಗಿ ಹೇಳಿದೆ. ಇತ್ತ ರಾಜ್ಯ ಸರ್ಕಾರ ಕೆಲ ರಾಜ್ಯಗಳ ಮೊರೆ ಹೋದರು ಅದು ಇನ್ನೂ ಪಕ್ಕಾ ಆಗಿಲ್ಲ.

ಒಂದು ಕಡೆಯಲ್ಲಿ ಅನ್ನಭಾಗ್ಯದ #AnnaBhagya ಅಕ್ಕಿಗೆ  ಕೇಂದ್ರದ ಬಾಗಿಲು ಬಹುತೇಕ ಬಂದ್ ಆಗಿದ್ದರೆ ಇನ್ನೊಂದು ಕಡೆ ರಾಜ್ಯಗಳಿಂದಲೂ ನಿರೀಕ್ಷಿಸಿದ ಭರವಸೆ ಸಿಕ್ಕಿಲ್ಲ. ಛತ್ತೀಸ್‍ಗಢ ಅಕ್ಕಿ ಕೊಡುವ ಭರವಸೆ ನೀಡಿದರೂ ಎಷ್ಟು ಪ್ರಮಾಣ ಎಂದು ಖಚಿತ ಪಡಿಸಿಲ್ಲ. ಅಲ್ಲದೇ ಛತ್ತೀಸ್‌ಗಢದಿಂದ ಅಕ್ಕಿ ಕೊಳ್ಳುವುದು ದುಬಾರಿಯಾಗಿದೆ. ಒಂದು ವೇಳೇ ಖರೀದಿಸಿದರೂ ಸಾಗಾಣಿಕಾ ವೆಚ್ಚವೂ ಹೆಚ್ಚಾಗುತ್ತದೆ. ಪಂಜಾಬ್ 1.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ನೀಡುವ ಭರವಸೆ ನೀಡಿದೆ. ಆಂಧ್ರಪ್ರದೇಶ  ಅಕ್ಕಿ ನೀಡುವ ಭರವಸೆ ನೀಡಿದರೂ ಕೆಜಿಗೆ 42 ರೂ. ದರ ನಿಗದಿ ಎಂದಿದೆ. ತೆಲಂಗಾಣ ಮತ್ತು ತಮಿಳುನಾಡಿನ ಅಕ್ಕಿ ನಿರೀಕ್ಷೆಯಲ್ಲಿ ಇದ್ದ ರಾಜ್ಯ ಸರ್ಕಾರಕ್ಕೆ ಖಚಿತ ಭರವಸೆ ಸಿಕ್ಕಿಲ್ಲ ಎನ್ನಲಾಗಿದೆ.

ಒಟ್ಟಾರೆ ಅನ್ನ ಭಾಗ್ಯದ ಅಕ್ಕಿಗಾಗಿ ರಾಜ್ಯಗಳ ಮೊರೆ ಹೋದ ರಾಜ್ಯ ಸರ್ಕಾರಕ್ಕೆ ಬೇಡಿಕೆಯಷ್ಟು ಅಕ್ಕಿಯ ಭರವಸೆ ಇನ್ನೂ ಸಿಕ್ಕಿಲ್ಲ. ಶುಕ್ರವಾರ ಕೇಂದ್ರ ಆಹಾರ ಸಚಿವ ಪಿಯೂಶ್‌ ಗೋಯಲ್‌  ಅವರನ್ನು ರಾಜ್ಯದ ಆಹಾರ ಸಚಿವ ಮುನಿಯಪ್ಪ  ಭೇಟಿ ಮಾಡಿದ್ದರು. ಭೇಟಿ ಬಳಿಕ ಪ್ರತಿಕ್ರಿಯಿಸಿದ ಮುನಿಯಪ್ಪ, ಪಿಯೂಷ್ ಗೋಯಲ್ ಅಕ್ಕಿ ನೀಡಲು ಸಾಧ್ಯವಿಲ್ಲ ಎಂದು ಹೇಳಿದರು. ಇದು ರಾಜಕೀಯ ದುರುದ್ದೇಶದ ನಿಲುವು. ಸ್ಟಾಕ್ ಇದ್ದರೂ ಕೊಡುವುದಿಲ್ಲ ಎನ್ನುವುದು ಎಷ್ಟು ಸರಿ? ನಾವು ಅಕ್ಕಿಯನ್ನು ಕೊಡುತ್ತೇವೆ. ಕೇಂದ್ರದ ಏಜೆನ್ಸಿಗಳ ಮೂಲಕ ಅಕ್ಕಿ ಕೊಳ್ಳುವ ಪ್ರಯತ್ನ ನಡೆಯುತ್ತಿದೆ. ಈ ವಾರದಲ್ಲಿ ತೀರ್ಮಾನ ಆಗಲಿದೆ ಎಂದು ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

6 hours ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

7 hours ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

17 hours ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

2 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

2 days ago