Advertisement
MIRROR FOCUS

ದೀಪಾವಳಿಗೆ ಹಸಿರು ಪಟಾಕಿ ಬಳಕೆಗೆ ಸರಕಾರ ಮನವಿ | ಪಟಾಕಿ ನಿಷೇಧವಿಲ್ಲ

Share

ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ದೀಪಾವಳಿಯಲ್ಲಿ ಹಸಿರು ಪಟಾಕಿ ಮಾತ್ರ ಬಳಸಿ ದೀಪಾವಳಿಯನ್ನು ಸರಳ ಹಾಗೂ ಸುಂದರವಾಗಿ ಆಚರಿಸಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜ್ಯದ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಕೊರೋನಾ ಸೋಂಕನ್ನು ನಿಯಂತ್ರಿಸುವ ಉದ್ದೇಶದಿಂದ ಸಾರ್ವಜನಿಕರ ಮತ್ತು ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಮನವಿಯಲ್ಲಿ  ತಿಳಿಸಿದ್ದಾರೆ.

ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ದೀಪಾವಳಿಯಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸುವ ತೀರ್ಮಾನಕ್ಕೆ ಬರಲಾಗಿದ್ದು ಆದರೆ  ಸಾರ್ವಜನಿಕವಲಯದಲ್ಲಿ ಟೀಕೆ ಬಂದಿದ್ದರಿಂದ  ತಮ್ಮ ನಿಲುವನ್ನು ಬದಲಿಸಿಕೊಂಡ ಮುಖ್ಯಮಂತ್ರಿಗಳು  ಹಸಿರು ಪಟಾಕಿಯನ್ನು ಮಾತ್ರ ಬಳಸಬಹುದು ಎಂದು ಹೇಳಿಕೆ ನೀಡಿದರು.

ಪಟಾಕಿಯಿಂದ ಉಂಟಾಗುವ ವಾಯುಮಾಲಿನ್ಯದಿಂದ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಹೆಚ್ಚು ಹಾನಿಯುಂಟಾಗುತ್ತದೆ. ಈ ಹಿನ್ನೆಲೆಯಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸುವಂತೆ ತಜ್ಞರು ಸರಕಾರಕ್ಕೆ  ಶಿಫಾರಸು ಮಾಡಿದ್ದರು.ಕೊರೋನಾ ಸೋಂಕು ತಗುಲಿ ಗುಣಮುಖರಾಗಿರುವವರ ಆರೋಗ್ಯದ ದೃಷ್ಟಿಯಿಂದ ಪಟಾಕಿ ಸಿಡಿಸುವುದನ್ನು ನಿಷೇಧಿಸುವುದು ಒಳ್ಳೆಯದು. ಪಟಾಕಿ ಸಿಡಿಸುವುದರಿಂದ ಮಲಿವಾಗುವ ಗಾಳಿಯನ್ನು ಸೇವಿಸುವುದರಿಂದ ಈಗಾಗಲೇ ಸೋಂಕಿತರಾಗಿದ್ದು, ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿರುವವರಿಗೆ ತೀವ್ರ ಸಮಸ್ಯೆಯಾಗಲಿದೆ ಎಂದು ತಜ್ಞರು ಸರಕಾರಕ್ಕೆ ಸಲಹೆ ನೀಡಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 11-01-2026| ಇಂದು ಕೆಲವೆಡೆ ಮಳೆ ನಿರೀಕ್ಷೆ | ಎಲ್ಲೆಲ್ಲಿ ಮಳೆ ಇರಬಹುದು..?

12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

5 hours ago

ಬರ ಪ್ರದೇಶ ಕೃಷಿಗೆ ಕಡಿಮೆ ವೆಚ್ಚದ ಪರಿಹಾರ | ಬೀಜ ಸಂಸ್ಕರಣೆಯಲ್ಲಿ ಒಂಟೆ ಮೂತ್ರ ಬಳಕೆ ಪರಿಣಾಮಕಾರಿ – ICAR ಅಧ್ಯಯನ

ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…

9 hours ago

ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ

ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…

10 hours ago

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

20 hours ago

ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..

ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…

20 hours ago