Advertisement
ಸುದ್ದಿಗಳು

ಮಾನನಷ್ಟ ಮೊಕದ್ದಮೆ ಕೇಸ್‌ – ರಾಹುಲ್‌ ಗಾಂಧಿಗಿಲ್ಲ ರಿಲೀಫ್‌

Share

ಮಾನನಷ್ಟ ಮೊಕದ್ದಮೆ  ಪ್ರಕರಣದಲ್ಲಿ ವಿಧಿಸಲಾಗಿದ್ದ 2 ವರ್ಷ ಜೈಲು ಶಿಕ್ಷೆಗೆ ತಡೆಯಾಜ್ಞೆ ನೀಡಲು ಗುಜರಾತ್‌ ಹೈಕೋರ್ಟ್‌ ನಿರಾಕರಿಸಿದೆ. ಇದರಿಂದ ಕಾಂಗ್ರೆಸ್‌ ನಾಯಕರ ರಾಹುಲ್‌ ಗಾಂಧಿ ಅವರಿಗೆ ಮತ್ತೆ ರಿಲೀಫ್‌ ಸಿಕ್ಕಿಲ್ಲ.

ಬೇಸಿಗೆ ರಜೆಯ ನಂತರ ಅಂದರೆ, ಜೂನ್ 4 ರ ಬಳಿಕ ನ್ಯಾಯಮೂರ್ತಿ ಹೇಮಂತ್ ಪ್ರಚ್ಚಕ್ ಅವರು ತೀರ್ಪು ಪ್ರಕಟಿಸಲಿದ್ದಾರೆ. ರಾಹುಲ್‌ ಗಾಂಧಿ ಸಲ್ಲಿಸಿರುವ ಅರ್ಜಿಯ ಮೇಲೆ ಆದೇಶ ನೀಡಲಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ವಿಚಾರಣೆ ನಡೆಸುವವರೆಗೆ ಮಧ್ಯಂತರ ತಡೆ ನೀಡುವಂತೆ ಕೋರಿ ರಾಹುಲ್‌ ಗಾಂಧಿ ಮೇಲ್ಮನವಿ ಸಲ್ಲಿಸಿದ್ದರು. 

ಏನಿದು ಪ್ರಕರಣ?
ಕಳೆದ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಓರ್ವ ಕಳ್ಳ ಎಂದು ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ನಿರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಇವೆರೆಲ್ಲರ ಸರ್‌ನೇಮ್ ಒಂದೇ ಆಗಿದ್ದು, ಈ ಎಲ್ಲಾ ಕಳ್ಳರು ದೇಶವನ್ನು ಲೂಟಿ ಮಾಡಿದ್ದಾರೆ ಎಂದು ರಾಹುಲ್ ತಮ್ಮ ಭಾಷಣದಲ್ಲಿ ಹರಿಹಾಯ್ದಿದ್ದರು. ಈ ಹೇಳಿಕೆಯನ್ನು ಆಧಾರಿಸಿ ಬಿಜೆಪಿ ಶಾಸಕ ಮತ್ತು ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ಕ್ರಿಮಿನಲ್ ಮಾನಹಾನಿ ದೂರು ದಾಖಲಿಸಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ್ದ ಸೂರತ್ ಕೋರ್ಟ್ ಮಾರ್ಚ್ 23 ರಂದು ರಾಹುಲ್ ದೋಷಿ ಎಂದು ತೀರ್ಪು ನೀಡಿ 2 ವರ್ಷ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಇದರ ಜೊತೆ ಈ ಶಿಕ್ಷೆಯನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು 30 ದಿನಗಳ ಅವಕಾಶ ನೀಡಿ ರಾಹುಲ್ ಗಾಂಧಿಗೆ ಜಾಮೀನು ಮಂಜೂರು ಮಾಡಿತ್ತು.

2 ವರ್ಷ ಜೈಲು ಶಿಕ್ಷೆಯಾದ ಹಿನ್ನೆಲೆಯಲ್ಲಿ ಲೋಕಸಭಾ ಸಚಿವಾಲಯ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ಹೊರಡಿಸಿತ್ತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

1 hour ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

10 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

11 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

20 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

2 days ago