ಇನ್ನು ಮುಂದೆ ಮಾಸ್ಕ್ ಧರಿಸದೇ ಅಡ್ಡಾಡಿದರೆ ದಂಡ ವಿಧಿಸುವ ನಿಯಮ ಜಾರಿಗೆ ತರಲಾಗಿದೆ. ಮಾಸ್ಕ್ ಧರಿಸದೇ ಓಡಾಡಿದರೆ ನಗರದ ಪ್ರದೇಶದಲ್ಲಿ ರೂ 1000 ಹಾಗೂ ಗ್ರಾಮೀಣ ಭಾಗದಲ್ಲಿ ರೂ 500 ದಂಡ ವಿಧಿಸಲಾಗುತ್ತದೆ.
ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್,ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಬಿಗಿ ಕ್ರಮ ಅನಿವಾರ್ಯವಾಗಿದೆ. ಪ್ರತೀ ವ್ಯಕ್ತಿಯ ಸುರಕ್ಷತೆ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಕಾನೂನು ಬಿಗಿ ಮಾಡಲೇಬೇಕಾದ ಅನಿವಾರ್ಯವಿದೆ ಎಂದರು ತಿಳಿಸಿದ್ದಾರೆ. ದಂಡದ ಜೊತೆಗೆ ಅಂಗಡಿ ಮುಂಗಟ್ಟುಗಳ ಎದುರು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕೂಡಾ ಕಡ್ಡಾಯವಾಗಿದೆ. ಅಂಗಡಿ ಮುಂಗಟ್ಟುಗಳ ಬಳಿ ಗ್ರಾಹಕರು, ಅಂಗಡಿಯವರು 6 ಅಡಿಗಳ ಅಂತರ ಕಾಯ್ದುಗೊಳ್ಳಬೇಕು. ಅಂತರ ಕಾಯ್ದುಕೊಳ್ಳದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ಕೋವಿಡ್-19 ಈಗ ನಮ್ಮ ಜೀವನದ ಭಾಗ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ದಕ್ಷಿಣಕನ್ನಡ, ಉಡುಪಿ, ಮಡಿಕೇರಿ ಸೇರಿದಂತೆ ಕೊಡಗು ಜಿಲ್ಲೆಯ ಬಹುತೇಕ ಕಡೆ ಧಾರಾಕಾರ ಮಳೆಯಾಗುತ್ತಿದೆ.…
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮುಂದಿನ 2 ಅಥವಾ 3…
ಕಳೆದ 16 ವರ್ಷಗಳ ದಾಖಲೆಗಳ ಪ್ರಕಾರ ನಿಗದಿತ ದಿನಕ್ಕಿಂತ ಮೊದಲೇ ಈ ಬಾರಿ…
ಉತ್ತಮ ಮಳೆಗೆ ಅರಣ್ಯ ಪ್ರದೇಶವೆಲ್ಲ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ, ಮಳೆ ಹನಿಗಳಿಗೆ ಮೈಯೊಡ್ಡಿದ…
ರಾಜ್ಯದ ಅಡಿಕೆ ಬೆಳೆ ಅತ್ಯಂತ ಉತ್ಕೃಷ್ಟ ಗುಣಮಟ್ಟದ್ದಾಗಿದ್ದು, ಇದರಲ್ಲಿ ಯಾವುದೇ ರಾಸಾಯನಿಕ ಇಲ್ಲ.…