ಇನ್ನು ಮುಂದೆ ಮಾಸ್ಕ್ ಧರಿಸದೇ ಅಡ್ಡಾಡಿದರೆ ದಂಡ ವಿಧಿಸುವ ನಿಯಮ ಜಾರಿಗೆ ತರಲಾಗಿದೆ. ಮಾಸ್ಕ್ ಧರಿಸದೇ ಓಡಾಡಿದರೆ ನಗರದ ಪ್ರದೇಶದಲ್ಲಿ ರೂ 1000 ಹಾಗೂ ಗ್ರಾಮೀಣ ಭಾಗದಲ್ಲಿ ರೂ 500 ದಂಡ ವಿಧಿಸಲಾಗುತ್ತದೆ.
ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್,ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಬಿಗಿ ಕ್ರಮ ಅನಿವಾರ್ಯವಾಗಿದೆ. ಪ್ರತೀ ವ್ಯಕ್ತಿಯ ಸುರಕ್ಷತೆ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಕಾನೂನು ಬಿಗಿ ಮಾಡಲೇಬೇಕಾದ ಅನಿವಾರ್ಯವಿದೆ ಎಂದರು ತಿಳಿಸಿದ್ದಾರೆ. ದಂಡದ ಜೊತೆಗೆ ಅಂಗಡಿ ಮುಂಗಟ್ಟುಗಳ ಎದುರು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕೂಡಾ ಕಡ್ಡಾಯವಾಗಿದೆ. ಅಂಗಡಿ ಮುಂಗಟ್ಟುಗಳ ಬಳಿ ಗ್ರಾಹಕರು, ಅಂಗಡಿಯವರು 6 ಅಡಿಗಳ ಅಂತರ ಕಾಯ್ದುಗೊಳ್ಳಬೇಕು. ಅಂತರ ಕಾಯ್ದುಕೊಳ್ಳದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…