ಯಡಿಯೂರಪ್ಪ ನನ್ನ ಟಿಕೆಟ್ ಸಲುವಾಗಿ ಸಾಕಷ್ಟು ಪ್ರಯತ್ನ ಮಾಡಿದ್ದಾರೆ. ಆದರೆ ಅವರು ಅಸಹಾಯಕರಾದರು. ಈಗ ನನ್ನ ಮೇಲೆ ಯಡಿಯೂರಪ್ಪ ಮಾಡಿರುವ ಟೀಕೆಗಳನ್ನು ಆಶೀರ್ವಾದ ಎಂದು ಭಾವಿಸುತ್ತೇನೆ. ಯಡಿಯೂರಪ್ಪ ಎಂಬ ಹಿರಿಯ ಮತ್ತು ಲಿಂಗಾಯತ ನಾಯಕರಿಂದ ನನ್ನ ಬೈಯಿಸಲಾಗುತ್ತಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆರೋಪ ಮಾಡಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಮೇಲೆ ಬಂದೂಕು ಇಟ್ಟು ಗುಂಡು ಹಾರಿಸಲಾಗುತ್ತಿದೆ. ಇದೇ ಯಡಿಯೂರಪ್ಪನವರು ಕೆಜೆಪಿ ಕಟ್ಟಿದಾಗ ಬಸವರಾಜ ಬೊಮ್ಮಾಯಿ ಹೋಗಲಿಲ್ಲ ಅಂತ ಹಿಗ್ಗಾಮುಗ್ಗಾ ಬೈದಿದ್ದರು. ಆದರೆ ಬಸವರಾಜ ಬೊಮ್ಮಾಯಿಯವರು ಬಿಜೆಪಿಯಲ್ಲಿ ಗೆಲುವು ಸಾಧಿಸಿದ್ದರು. ನಾನು ಕೂಡಾ ಅತಿ ಹೆಚ್ಚು ಲೀಡ್ನಿಂದ ಗೆಲುವು ಸಾಧಿಸುತ್ತೇನೆ. ಯಡಿಯೂರಪ್ಪ ಎಷ್ಟೇ ಬೈದರು ಅದು ಅವರ ಆಶೀರ್ವವಚನ ಎಂದು ಭಾವಿಸುತ್ತೆನೆ ಎಂದು ಹೇಳಿದರು.
ಒಬ್ಬ ಲಿಂಗಾಯತ ನಾಯಕನಿಂದ ಮತ್ತೊಬ್ಬ ಲಿಂಗಾಯತ ನಾಯಕನನ್ನು ಬೈಯಿಸಲಾಗುತ್ತಿದೆ. ಯಡಿಯೂರಪ್ಪನವರು ಅಸಹಾಯಕರಾಗಿದ್ದಾರೆ. ಯಡಿಯೂರಪ್ಪನವರು ರಕ್ತದಲ್ಲಿ ಬರೆದು ಕೊಡಲಿ ಅಥವಾ ಯಾವುದರಿಂದಾದಲೂ ಬರೆದು ಕೊಡಲಿ. ನೇರವಾಗಿ ಯುದ್ಧಕ್ಕೆ ಬರೋರು ನೀವೇ ಬನ್ನಿ, ಯಡಿಯೂರಪ್ಪರನ್ನು ಯಾಕೆ ನಡುವೆ ತರುತ್ತಿರಿ? 50-60 ಜನ ಲಿಂಗಾಯತರ ಜೊತೆಗೆ ಸೇರಿ ಸಭೆ ಮಾಡಿದರೆ ಇಡೀ ಲಿಂಗಾಯತ ಸಮುದಾಯದ ಸಭೆ ಆಗಲ್ಲ ಎಂದರು.
ಸೆಂಟ್ರಲ್ ಕ್ಷೇತ್ರ ಬರೀ ಹುಬ್ಬಳ್ಳಿ ಧಾರವಾಡಕ್ಕೆ ಸೀಮಿತವಲ್ಲಾ. ಇದು ರಾಷ್ಟ್ರೀಯ ಸೆಂಟ್ರಲ್ ಆಗಿದೆ. ಅಮಿತ್ ಶಾ ಹುಬ್ಬಳ್ಳಿ ಮತ್ತು ಯಾದಗಿರಿಯಲ್ಲಿ ಜಗದೀಶ್ ಶೆಟ್ಟರ್ ಸೋಲಿಸಬೇಕು ಅಂತ ಭಾಷಣ ಮಾಡುತ್ತಿದ್ದಾರೆ. ಸ್ಮೃತಿ ಇರಾನಿ, ಯಡಿಯೂರಪ್ಪ ಮತ್ತು ಜೆಪಿ ನಡ್ಡಾ ಸಹ ನನ್ನ ಸೋಲಿಸಲು ಕರೆ ನೀಡಿದ್ದಾರೆ. ನನ್ನ ಮೇಲೆ ಎಲ್ಲರೂ ಮುಗಿ ಬಿದ್ದಿದ್ದಾರೆ. ಈ ಬಡಪಾಯಿ ಮೇಲೆ ಯಾಕೆ ಎಲ್ಲರೂ ಬಿದ್ದಿದ್ದಾರೆ ಗೊತ್ತಿಲ್ಲ. ಇವರೆಲ್ಲರೂ ಸೇರಿ ಸೆಂಟ್ರಲ್ ಕ್ಷೇತ್ರವನ್ನು ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡಿದ್ದಾರೆ. ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರಿದ್ದು ದೊಡ್ಡ ಅಪರಾಧವೆಂಬಂತೆ ಬಿಂಬಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…