ಯಡಿಯೂರಪ್ಪ ನನ್ನ ಟಿಕೆಟ್ ಸಲುವಾಗಿ ಸಾಕಷ್ಟು ಪ್ರಯತ್ನ ಮಾಡಿದ್ದಾರೆ. ಆದರೆ ಅವರು ಅಸಹಾಯಕರಾದರು. ಈಗ ನನ್ನ ಮೇಲೆ ಯಡಿಯೂರಪ್ಪ ಮಾಡಿರುವ ಟೀಕೆಗಳನ್ನು ಆಶೀರ್ವಾದ ಎಂದು ಭಾವಿಸುತ್ತೇನೆ. ಯಡಿಯೂರಪ್ಪ ಎಂಬ ಹಿರಿಯ ಮತ್ತು ಲಿಂಗಾಯತ ನಾಯಕರಿಂದ ನನ್ನ ಬೈಯಿಸಲಾಗುತ್ತಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆರೋಪ ಮಾಡಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಮೇಲೆ ಬಂದೂಕು ಇಟ್ಟು ಗುಂಡು ಹಾರಿಸಲಾಗುತ್ತಿದೆ. ಇದೇ ಯಡಿಯೂರಪ್ಪನವರು ಕೆಜೆಪಿ ಕಟ್ಟಿದಾಗ ಬಸವರಾಜ ಬೊಮ್ಮಾಯಿ ಹೋಗಲಿಲ್ಲ ಅಂತ ಹಿಗ್ಗಾಮುಗ್ಗಾ ಬೈದಿದ್ದರು. ಆದರೆ ಬಸವರಾಜ ಬೊಮ್ಮಾಯಿಯವರು ಬಿಜೆಪಿಯಲ್ಲಿ ಗೆಲುವು ಸಾಧಿಸಿದ್ದರು. ನಾನು ಕೂಡಾ ಅತಿ ಹೆಚ್ಚು ಲೀಡ್ನಿಂದ ಗೆಲುವು ಸಾಧಿಸುತ್ತೇನೆ. ಯಡಿಯೂರಪ್ಪ ಎಷ್ಟೇ ಬೈದರು ಅದು ಅವರ ಆಶೀರ್ವವಚನ ಎಂದು ಭಾವಿಸುತ್ತೆನೆ ಎಂದು ಹೇಳಿದರು.
ಒಬ್ಬ ಲಿಂಗಾಯತ ನಾಯಕನಿಂದ ಮತ್ತೊಬ್ಬ ಲಿಂಗಾಯತ ನಾಯಕನನ್ನು ಬೈಯಿಸಲಾಗುತ್ತಿದೆ. ಯಡಿಯೂರಪ್ಪನವರು ಅಸಹಾಯಕರಾಗಿದ್ದಾರೆ. ಯಡಿಯೂರಪ್ಪನವರು ರಕ್ತದಲ್ಲಿ ಬರೆದು ಕೊಡಲಿ ಅಥವಾ ಯಾವುದರಿಂದಾದಲೂ ಬರೆದು ಕೊಡಲಿ. ನೇರವಾಗಿ ಯುದ್ಧಕ್ಕೆ ಬರೋರು ನೀವೇ ಬನ್ನಿ, ಯಡಿಯೂರಪ್ಪರನ್ನು ಯಾಕೆ ನಡುವೆ ತರುತ್ತಿರಿ? 50-60 ಜನ ಲಿಂಗಾಯತರ ಜೊತೆಗೆ ಸೇರಿ ಸಭೆ ಮಾಡಿದರೆ ಇಡೀ ಲಿಂಗಾಯತ ಸಮುದಾಯದ ಸಭೆ ಆಗಲ್ಲ ಎಂದರು.
ಸೆಂಟ್ರಲ್ ಕ್ಷೇತ್ರ ಬರೀ ಹುಬ್ಬಳ್ಳಿ ಧಾರವಾಡಕ್ಕೆ ಸೀಮಿತವಲ್ಲಾ. ಇದು ರಾಷ್ಟ್ರೀಯ ಸೆಂಟ್ರಲ್ ಆಗಿದೆ. ಅಮಿತ್ ಶಾ ಹುಬ್ಬಳ್ಳಿ ಮತ್ತು ಯಾದಗಿರಿಯಲ್ಲಿ ಜಗದೀಶ್ ಶೆಟ್ಟರ್ ಸೋಲಿಸಬೇಕು ಅಂತ ಭಾಷಣ ಮಾಡುತ್ತಿದ್ದಾರೆ. ಸ್ಮೃತಿ ಇರಾನಿ, ಯಡಿಯೂರಪ್ಪ ಮತ್ತು ಜೆಪಿ ನಡ್ಡಾ ಸಹ ನನ್ನ ಸೋಲಿಸಲು ಕರೆ ನೀಡಿದ್ದಾರೆ. ನನ್ನ ಮೇಲೆ ಎಲ್ಲರೂ ಮುಗಿ ಬಿದ್ದಿದ್ದಾರೆ. ಈ ಬಡಪಾಯಿ ಮೇಲೆ ಯಾಕೆ ಎಲ್ಲರೂ ಬಿದ್ದಿದ್ದಾರೆ ಗೊತ್ತಿಲ್ಲ. ಇವರೆಲ್ಲರೂ ಸೇರಿ ಸೆಂಟ್ರಲ್ ಕ್ಷೇತ್ರವನ್ನು ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡಿದ್ದಾರೆ. ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರಿದ್ದು ದೊಡ್ಡ ಅಪರಾಧವೆಂಬಂತೆ ಬಿಂಬಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…