Advertisement
MIRROR FOCUS

ಇನ್ನು ಇರಲ್ಲ ಓಬಿರಾಯನ ಕಾಲದ ಬ್ರಿಟಿಷ್ ಕಾಲದ ಕ್ರಿಮಿನಲ್‌ ಕಾನೂನು :‌ ಇಂದಿನಿಂದ 3 ದೇಶಿ ಕಾನೂನು ಜಾರಿ : ಎಸ್‌ಎಂಎಸ್‌, ವಾಟ್ಸಪ್‌ ಮೂಲಕವೂ ಸಮನ್ಸ್‌

Share

ನ್ಯಾಯ(Justice) ಅನ್ನೋದು ಬಡವ ಬಗ್ಗರನ್ನದೆ ಸಮಾನವಾಗಿ ಎಲ್ಲರಿಗೂ ಸಿಗಬೇಕು. ಹಾಗೂ ನ್ಯಾಯ ಆದಷ್ಟು ಬೇಗ ಸಿಕ್ಕರೆ ಅದಕ್ಕೊಂದು ಬೆಲೆ. ಆದರೆ ಈಗಿರುವ ಕಾನೂನುಗಳು ಬ್ರಿಟಿಷರ(British Law) ಕಾಲದ್ದಾಗಿದ್ದು, ಈಗಿನ ಸಂದರ್ಭ ಸಮಯಕ್ಕೆ ತಂಕ್ಕಂತೆ ಅದರ ಬೆಲೆಯನ್ನು ಕಳೆದುಕೊಂಡಿದೆ. ಹಾಗೂ ಅವು ಅವಧಿ ಮೀರಿದ ಕಾನೂನುಗಳಾಗಿವೆ. ಈ ಹಿನ್ನೆಲೆಯಲ್ಲಿ  ತ್ವರಿತ ನ್ಯಾಯದಾನಕ್ಕೆ ಹೊಸ ಕಾನೂನು(Law)  ದೇಶದಲ್ಲಿ ಇಂದಿನಿಂದ ಬದಲಾಗಲಿದ್ದು, ಬ್ರಿಟೀಷರ ಕಾಲದಿಂದ ಜಾರಿಯಲ್ಲಿದ್ದ ಐಪಿಸಿ (Indian Penal Code), ಸಿಆರ್‌ಪಿಸಿ (Code of Criminal Procedure), ಇಂಡಿಯನ್ ಎವಿಡೆನ್ಸ್ ಆಕ್ಟ್‌ಗೆ (Indian Evidence Act) ಗುಡ್‌ಬೈ ಹೇಳಲಾಗುತ್ತದೆ.

Advertisement
Advertisement
ಐಪಿಸಿ ಜಾಗದಲ್ಲಿ ಭಾರತೀಯ ನ್ಯಾಯ ಸಂಹಿತೆ (Bharatiya Nyaya Sanhita), ಸಿಆರ್‌ಪಿಸಿ ಜಾಗದಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (Bharatiya Nagarik Suraksha Sanhita), ಇಂಡಿಯನ್ ಎವಿಡೆನ್ಸ್ ಆಕ್ಟ್ ಜಾಗದಲ್ಲಿ ಭಾರತೀಯ ಸಾಕ್ಷ್ಯ ಅಧಿನಿಯಮ (Bharatiya Sakshya Adhiniyam) ಜಾರಿಗೆ ಬರುತ್ತಿದೆ. ಭಾರತೀಯ ನ್ಯಾಯ ಸಂಹಿತೆಯು 358 ಸೆಕ್ಷನ್ ಒಳಗೊಂಡಿದೆ. 20 ಹೊಸ ಅಪರಾಧಗಳು ಸೇರಿಸಲ್ಪಟ್ಟಿವೆ, 33 ಅಪರಾಧಗಳ ಶಿಕ್ಷೆ ಅವಧಿ ಹೆಚ್ಚಿಸಲಾಗಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 531 ಸೆಕ್ಷನ್ ಒಳಗೊಂಡಿದೆ. 177 ಕಲಂಗಳನ್ನು ಬದಲಿಸಲಾಗಿದೆ. ಭಾರತೀಯ ಸಾಕ್ಷ್ಯ ಅಧಿನಿಯಮ 170 ಸೆಕ್ಷನ್ ಒಳಗೊಂಡಿದೆ.

ಹಿಂದೆ ಎಷ್ಟಿತ್ತು? ಈಗ ಎಷ್ಟು ಸೆಕ್ಷನ್‌ಗಳು ಇದೆ?
ಭಾರತೀಯ ದಂಡ ಸಂಹಿತೆ (IPC) 511 ಸೆಕ್ಷನ್‌ ಇದ್ದರೆ ಭಾರತೀಯ ನ್ಯಾಯ ಸಂಹಿತಾ(BNS)-358 ಸೆಕ್ಷನ್‌ಗಳು ಇದೆ.
ಕ್ರಿಮಿನಲ್ ಪ್ರೊಸೀಜರ್ ಕೋಡ್ (CrPC) 484 ಸೆಕ್ಷನ್‌ಗಳು ಇದ್ದರೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ(BNSS) – 531 ಸೆಕ್ಷನ್‌ಗಳು ಇದೆ. ಭಾರತೀಯ ಸಾಕ್ಷ್ಯ ಕಾಯ್ದೆ (IEA) 167 ಸೆಕ್ಷನ್‌ಗಳು ಇದ್ದರೆ ಭಾರತೀಯ ಸಾಕ್ಷ್ಯ ಅಧಿನಿಯಮ (BSA) 170 ಸೆಕ್ಷನ್‌ಗಳು ಇದೆ.

Advertisement

ಹೊಸ ಕಾನೂನಿನಲ್ಲಿ ಏನು ಬದಲಾವಣೆ?

* ಪೊಲೀಸ್ ಕಸ್ಟಡಿ ಗರಿಷ್ಠ ಅವಧಿ 14ದಿನದಿಂದ 60 ದಿನಗಳವರೆಗೂ ಹೆಚ್ಚಳ
* 3-7 ವರ್ಷ ಶಿಕ್ಷೆಯಾಗುವ ಕೇಸ್‌ಗಳಲ್ಲಿ ದೂರು ನೀಡಿದ 24 ಗಂಟೆಯೊಳಗೆ ಎಫ್‌ಐಆರ್
* 3-7 ವರ್ಷ ಶಿಕ್ಷೆಯಾಗುವ ಕೇಸ್‌ಗಳ ತನಿಖೆಯನ್ನು 14 ದಿನದಲ್ಲಿ ಒಂದು ಹಂತಕ್ಕೆ ತರಬೇಕು
* ಏಳು ವರ್ಷಕ್ಕಿಂತ ಹೆಚ್ಚು ಶಿಕ್ಷೆ ಆಗುವ ಪ್ರಕರಣಗಳಲ್ಲಿ ಫೊರೆನ್ಸಿಕ್ ತನಿಖೆ ಕಡ್ಡಾಯ

Advertisement

* ಆರ್ಥಿಕ ಅಪರಾಧ ಕೇಸ್‌ಗಳಲ್ಲಿ ಪೊಲೀಸರಿಗೆ ಸ್ಥಿರಾಸ್ತಿ-ಚರಾಸ್ತಿ ಜಪ್ತಿ ಮಾಡುವ ಅಧಿಕಾರ
* ಮಹಿಳೆ, ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು 2 ತಿಂಗಳಲ್ಲಿ ತನಿಖೆ ಮುಗಿಸಬೇಕು
* ರೇಪ್ ಕೇಸ್‌ಗಳಲ್ಲಿ ಸಂತ್ರಸ್ತೆ ಹೇಳಿಕೆಯನ್ನು ಆಕೆಯ ಸಂಬಂಧಿಕರ ಸಮ್ಮುಖದಲ್ಲಿ ಮಹಿಳಾ ಅಧಿಕಾರಿಯ ಮುಂದೆ ಹೇಳಬೇಕು.

* ಪೋಕ್ಸೋ ಕೇಸ್‌ಗಳಲ್ಲಿ ಸಂತ್ರಸ್ತರ ಹೇಳಿಕೆಯನ್ನು ಮಹಿಳಾ ಅಧಿಕಾರಿ ಕೂಡ ದಾಖಲಿಸಿಕೊಳ್ಳಬಹುದು
* ಕ್ರಿಮಿನಲ್ ಕೇಸ್ ವಿಚಾರಣೆ. ಕೋರ್ಟ್ ಗರಿಷ್ಠ 2-3 ವಾಯಿದೆಗಳನ್ನು ಮಾತ್ರ ನೀಡಬೇಕು.
* ತನಿಖೆ, ಕೋರ್ಟ್ ಸಮನ್ಸ್‌ಗಳನ್ನು ಮಸೇಜ್‌, ವಾಟ್ಸಪ್ ಸೇರಿ ಡಿಜಿಟಲ್ ರೂಪದಲ್ಲಿಯೇ ಕಳಿಸಬಹುದು
* ಕೇಸ್ ನಮೂದು-ಕೋರ್ಟ್ ವಿಚಾರಣೆವರೆಗೂ ಸಂತ್ರಸ್ತರಿಗೆ ವಾಟ್ಸಪ್ ಮೂಲಕ ಪ್ರತಿಹಂತದ ಮಾಹಿತಿ

Advertisement

* ರಾಷ್ಟ್ರಮಟ್ಟದ ಡಿಜಿ ಲಾಕರ್‌ನಲ್ಲಿ ಸಾಕ್ಷಿಗಳ ಹೇಳಿಕೆ, ಆಡಿಯೋ, ವೀಡಿಯೋ ಸಾಕ್ಷ್ಯ ಭದ್ರ
* ರೇಡ್ ಪ್ರಕ್ರಿಯೆಯ ಕಡ್ಡಾಯ ಚಿತ್ರೀಕರಣ. 48 ಗಂಟೆಯಲ್ಲಿ ನ್ಯಾಯಾಲಯಕ್ಕೆ ವರದಿ
* ಸಂತ್ರಸ್ತರು ಠಾಣೆಗೆ ಹೋಗದೆಯೂ ಆನ್‌ಲೈನ್ ಮೂಲಕ ದೂರು ನೀಡಬಹುದು. ಮಹಿಳೆಯರು, ವಿಕಲಚೇತನರು, ರೋಗಿಗಳು, ಮಕ್ಕಳು, ಹಿರಿಯರು ಠಾಣೆಗೆ ಹೋಗುವ ಅಗತ್ಯವಿಲ್ಲ. ಈ ಐದು ವರ್ಗದ ಮಂದಿ ತಾವಿರುವ ಕಡೆಯೇ ಪೊಲೀಸರನ್ನು ಕರೆಸಬಹುದು.

* ಯಾವುದೇ ಘಟನೆಯ ಮಾಹಿತಿಯನ್ನು ಆನ್‌ಲೈನ್ ಮೂಲಕ ಯಾವ ಠಾಣೆಗಾದ್ರೂ ತಿಳಿಸಬಹುದು.
* ಝೀರೋ ಎಫ್‌ಐಆರ್; ಠಾಣಾ ವ್ಯಾಪ್ತಿ ಲೆಕ್ಕಿಸದೇ ಯಾವ ಠಾಣೆಗಾದ್ರೂ ದೂರು ಸಲ್ಲಿಸಬಹುದು.
* ಆರೋಪಿಗಳ ಬಂಧನದ ಬಗ್ಗೆ ಅವರ ಸ್ನೇಹಿತರು, ಕುಟುಂಬ ಸದಸ್ಯರಿಗೆ ಪೊಲೀಸರು ತಿಳಿಸಬೇಕು.
* ಆರೋಪಿಗಳಿಗೆ, ಸಂತ್ರಸ್ತರಿಗೆ ಎಫ್‌ಐಆರ್ ಕಾಪಿ ಉಚಿತವಾಗಿ ನೀಡಬೇಕು.
* ಮದುವೆ ಭರವಸೆ ನೀಡಿ ಲೈಂಗಿಕ ದೌರ್ಜನ್ಯ ಎಸಗುವವರಿಗೆ 10 ವರ್ಷಗಳವರೆಗೆ ಶಿಕ್ಷೆ.

Advertisement
  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳು ಜನರ ದೈನಂದಿನ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರಬಾರದು | ಕೇರಳ ಹೈಕೋರ್ಟ್‌ ಅಭಿಪ್ರಾಯ |

ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಕಾಮಗಾರಿಗಳು ಪ್ರಮುಖವಾಗಿದ್ದರೂ, ನಾಗರಿಕರ ದೈನಂದಿನ ಜೀವನದ ಮೇಲೆ ಪ್ರತಿಕೂಲ…

10 hours ago

ಕರಾವಳಿ ಜಿಲ್ಲೆಗಳಲ್ಲಿ ಈ ವಾರ ಉತ್ತಮ ಮಳೆ ಹಾಗೂ ಗಾಳಿಯ ನಿರೀಕ್ಷೆ |

ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ

12 hours ago

ಪುತ್ತೂರಿನಲ್ಲಿ ತಾಳಮದ್ದಳೆ ಸಪ್ತಾಹ ಉದ್ಘಾಟನೆ | ಜು.7 ಸಮಾರೋಪ |

ಪುತ್ತೂರಿನಲ್ಲಿ ಯಕ್ಷಗಾನ ತಾಳಮದ್ದಳೆ ಸಪ್ತಾಹ ಉದ್ಘಾಟನೆಗೊಂಡಿದೆ.

12 hours ago

ಅಡಿಕೆ-ಕಾಳುಮೆಣಸು ಅಕ್ರಮ ಆಮದು ತಡೆಗೆ ಒತ್ತಾಯ | ಅಡಿಕೆ ಮೇಲಿನ ಜಿಎಸ್‌ಟಿ ಇಳಿಕೆಗೆ ಕೇಂದ್ರ ಹಣಕಾಸು ಸಚಿವರಿಗೆ ಕ್ಯಾಂಪ್ಕೋ ಅಧ್ಯಕ್ಷರಿಂದ ಮನವಿ

ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಅವರು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ…

13 hours ago

ಹವಾಮಾನ ವರದಿ | 02.07.2024 | ರಾಜ್ಯದ ಕೆಲವೆಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ

03.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

20 hours ago

ಮಣ್ಣು ಅಂದರೆ ಮಣ್ಣು ಅಷ್ಟೊಂದು ಮಹತ್ವ ಏಕೆ? ಎಂಬ ಪ್ರಶ್ನೆ..?

ಜಗತ್ತಿನ ಎಲ್ಲ ಜೀವಿಗಳ(creature)ಆಸ್ತಿತ್ವಕ್ಕೆ ಕಾರಣವೇ ಮಣ್ಣು(Soil).  ಆದರೆ ಅತ್ಯಂತ ಹೆಚ್ಚು ಪೆಟ್ಟು ತಿನ್ನುವ…

21 hours ago