ನಮ್ಮ ದೇಶದಲ್ಲಿ ವಿಐಪಿಗಳು, ವಿವಿಐಪಿಗಳಿಗೆ ಸತ್ಕಾರ ಇದೆ. ಅವರ ವಾಹನ ರಸ್ತೆಗೆ ಇಳಿದ್ರೆ ಸಾಕು ಜೋರಾಗಿ ಸೈರನ್ ಬಾರಿಸುತ್ತಾ, ಬಾರಿ ಗದ್ದಲ ಎಬ್ಬಿಸಿಕೊಂಡು ವಾಹನಗಳಲ್ಲಿ ಬರುತ್ತಾರೆ. ಇನ್ಮುಂದೆ ಈ ಸದ್ದು-ಗದ್ದಲಕ್ಕೆ ಬ್ರೇಕ್ ಬೀಳಲಿದೆ.ಈ ರೀತಿಯ ಭಾರೀ ಸೌಂಡ್ ಮಾಡುವ ಸೈರನ್ ಗಳಿಗೆ ಬ್ರೇಕ್ ಬೀಳಲಿದೆ. ಬದಲಾಗಿ ಇನ್ನುಕೊಳಲು, ತಬಲಾ ಮತ್ತು ಶಂಖದಂತಹ ಮಧುರ ಸದ್ದು ಕೇಳಿ ಬರಲಿದೆ.
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರು ಇಂಥದ್ದೊಂದು ಸುಳಿವು ನೀಡಿದ್ದಾರೆ. ಶಬ್ದ ಮಾಲಿನ್ಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ವಿಐಪಿ ವಾಹನಗಳಲ್ಲಿ ಸೈರನ್ ಸೌಂಡ್ ಗೆ ಬ್ರೇಕ್ ಹಾಕುವ ಬಗ್ಗೆ ಚಿಂತನೆ ನಡೆಸಿದ್ದಾಗಿ ಅವರು ಹೇಳಿದ್ದಾರೆ.ಸೈರನ್ ಶಬ್ದಗಳನ್ನು ಬದಲಾಯಿಸುವ ಹೊಸ ನೀತಿಯನ್ನು ರೂಪಿಸಲಾಗುತ್ತಿದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ. ಸೈರನ್ ಬದಲಿಗೆ ಭಾರತೀಯ ಸಂಗೀತ ವಾದ್ಯಗಳಾದ ಕೊಳಲು, ತಬಲಾ ಮತ್ತು ಶಂಖಗಳ ಧ್ವನಿಗಳು ಕೇಳಿ ಬರಲಿದೆ. ಪುಣೆಯ ಚಾಂದಿನಿ ಚೌಕ್ ಮೇಲ್ಸೇತುವೆ ಉದ್ಘಾಟನಾ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಗಡ್ಕರಿ, ಶಬ್ದ ಮಾಲಿನ್ಯವನ್ನು ನಿಯಂತ್ರಿಸುವುದು ಬಹಳ ಮುಖ್ಯ ಎಂದಿದ್ದಾರೆ. ಐಪಿಗಳ ವಾಹನದ ಮೇಲೆ ಕೆಂಪು ದೀಪವನ್ನು ಕೊನೆಗೊಳಿಸಲು ನನಗೆ ಅವಕಾಶ ಸಿಕ್ಕಿರುವುದು ನನ್ನ ಅದೃಷ್ಟ. ಇದೀಗ ನಾನು ವಿಐಪಿ ವಾಹನಗಳ ಮೇಲಿನ ಸೈರನ್ಗಳನ್ನು ನಿಲ್ಲಿಸಲು ಪ್ಲಾನ್ ಮಾಡುತ್ತಿದ್ದೇನೆ ಎಂದಿದ್ದಾರೆ.
ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಉತ್ತರ ಕನ್ನಡದಲ್ಲಿ 27 ಸೆಂಟಿ ಮೀಟರ್, ಸಿದ್ಧಾಪುರದಲ್ಲಿ…
ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…
16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…