Advertisement
MIRROR FOCUS

ವಿಐಪಿ, ವಿವಿಐಪಿ ವಾಹನಗಳಲ್ಲಿ ಸೈರನ್‌ ಸದ್ದು ಬದಲಾವಣೆಗೆ ಚಿಂತನೆ | ಶಂಖ, ಕೊಳಲು, ಜಾಗಟೆ ಸದ್ದಿಗೆ ಯೋಚನೆ |

Share

ನಮ್ಮ ದೇಶದಲ್ಲಿ ವಿಐಪಿಗಳು, ವಿವಿಐಪಿಗಳಿಗೆ ಸತ್ಕಾರ ಇದೆ. ಅವರ ವಾಹನ ರಸ್ತೆಗೆ ಇಳಿದ್ರೆ ಸಾಕು ಜೋರಾಗಿ ಸೈರನ್ ಬಾರಿಸುತ್ತಾ, ಬಾರಿ ಗದ್ದಲ ಎಬ್ಬಿಸಿಕೊಂಡು ವಾಹನಗಳಲ್ಲಿ ಬರುತ್ತಾರೆ.  ಇನ್ಮುಂದೆ ಈ ಸದ್ದು-ಗದ್ದಲಕ್ಕೆ ಬ್ರೇಕ್ ಬೀಳಲಿದೆ.ಈ ರೀತಿಯ ಭಾರೀ ಸೌಂಡ್ ಮಾಡುವ ಸೈರನ್ ಗಳಿಗೆ ಬ್ರೇಕ್ ಬೀಳಲಿದೆ. ಬದಲಾಗಿ ಇನ್ನುಕೊಳಲು, ತಬಲಾ ಮತ್ತು ಶಂಖದಂತಹ  ಮಧುರ ಸದ್ದು ಕೇಳಿ ಬರಲಿದೆ.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರು ಇಂಥದ್ದೊಂದು ಸುಳಿವು ನೀಡಿದ್ದಾರೆ. ಶಬ್ದ ಮಾಲಿನ್ಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ವಿಐಪಿ ವಾಹನಗಳಲ್ಲಿ ಸೈರನ್ ಸೌಂಡ್ ಗೆ ಬ್ರೇಕ್ ಹಾಕುವ ಬಗ್ಗೆ ಚಿಂತನೆ ನಡೆಸಿದ್ದಾಗಿ ಅವರು ಹೇಳಿದ್ದಾರೆ.ಸೈರನ್ ಶಬ್ದಗಳನ್ನು ಬದಲಾಯಿಸುವ ಹೊಸ ನೀತಿಯನ್ನು ರೂಪಿಸಲಾಗುತ್ತಿದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ. ಸೈರನ್ ಬದಲಿಗೆ ಭಾರತೀಯ ಸಂಗೀತ ವಾದ್ಯಗಳಾದ ಕೊಳಲು, ತಬಲಾ ಮತ್ತು ಶಂಖಗಳ ಧ್ವನಿಗಳು ಕೇಳಿ ಬರಲಿದೆ. ಪುಣೆಯ ಚಾಂದಿನಿ ಚೌಕ್ ಮೇಲ್ಸೇತುವೆ ಉದ್ಘಾಟನಾ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಗಡ್ಕರಿ, ಶಬ್ದ ಮಾಲಿನ್ಯವನ್ನು ನಿಯಂತ್ರಿಸುವುದು ಬಹಳ ಮುಖ್ಯ ಎಂದಿದ್ದಾರೆ. ಐಪಿಗಳ ವಾಹನದ ಮೇಲೆ ಕೆಂಪು ದೀಪವನ್ನು ಕೊನೆಗೊಳಿಸಲು ನನಗೆ ಅವಕಾಶ ಸಿಕ್ಕಿರುವುದು ನನ್ನ ಅದೃಷ್ಟ. ಇದೀಗ ನಾನು ವಿಐಪಿ ವಾಹನಗಳ ಮೇಲಿನ ಸೈರನ್ಗಳನ್ನು ನಿಲ್ಲಿಸಲು ಪ್ಲಾನ್ ಮಾಡುತ್ತಿದ್ದೇನೆ ಎಂದಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

2025-26 ರಲ್ಲಿ ಅಡಿಕೆ ಕೊಳೆರೋಗ ಮತ್ತು ಎಲೆಚುಕ್ಕಿ ರೋಗ ಪ್ರಕರಣ ವರದಿಯಾಗಿಲ್ಲ…!

ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…

5 hours ago

ಮನೆಯ ಮೇಲ್ಛಾವಣಿಯನ್ನು ಕೃಷಿ ಭೂಮಿಯನ್ನಾಗಿಸಿದ ಆಸಿಯಾ ಇತರ ಮಹಿಳೆಯರಿಗೂ ಇಂದು ಮಾದರಿ..

ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…

5 hours ago

ನಮ್ಮ ಹೊಲ ನಮ್ಮ ದಾರಿ : ರಸ್ತೆಗೆ 12.5 ಲಕ್ಷ ಸಹಾಯಧನ

ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…

5 hours ago

2025-26 ನೇ ಸಾಲಿನ ಕೃಷಿ ಇಲಾಖೆ ಸಹಾಯಧನ ಯೋಜನೆಗಳು

ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…

5 hours ago

ಕುಕ್ಕುಟ ಸಂಜೀವಿನಿ ಯೋಜನೆ : ಉಚಿತ ಕೋಳಿ ಮರಿ ಶೇಡ್ ನಿರ್ಮಾಣಕ್ಕೆ ಆರ್ಥಿಕ ನೆರವು

ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…

5 hours ago

ಹವಾಮಾನ ವರದಿ | 16-12-2025 | ಮೋಡ ಮಾತ್ರವೇ ಮಳೆ ಇದೆಯೇ…? | ಮುಂದೆ ಚಳಿಯ ಪ್ರಭಾವ ಹೇಗಿರಬಹುದು..?

17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…

23 hours ago