MIRROR FOCUS

ವಿಐಪಿ, ವಿವಿಐಪಿ ವಾಹನಗಳಲ್ಲಿ ಸೈರನ್‌ ಸದ್ದು ಬದಲಾವಣೆಗೆ ಚಿಂತನೆ | ಶಂಖ, ಕೊಳಲು, ಜಾಗಟೆ ಸದ್ದಿಗೆ ಯೋಚನೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನಮ್ಮ ದೇಶದಲ್ಲಿ ವಿಐಪಿಗಳು, ವಿವಿಐಪಿಗಳಿಗೆ ಸತ್ಕಾರ ಇದೆ. ಅವರ ವಾಹನ ರಸ್ತೆಗೆ ಇಳಿದ್ರೆ ಸಾಕು ಜೋರಾಗಿ ಸೈರನ್ ಬಾರಿಸುತ್ತಾ, ಬಾರಿ ಗದ್ದಲ ಎಬ್ಬಿಸಿಕೊಂಡು ವಾಹನಗಳಲ್ಲಿ ಬರುತ್ತಾರೆ.  ಇನ್ಮುಂದೆ ಈ ಸದ್ದು-ಗದ್ದಲಕ್ಕೆ ಬ್ರೇಕ್ ಬೀಳಲಿದೆ.ಈ ರೀತಿಯ ಭಾರೀ ಸೌಂಡ್ ಮಾಡುವ ಸೈರನ್ ಗಳಿಗೆ ಬ್ರೇಕ್ ಬೀಳಲಿದೆ. ಬದಲಾಗಿ ಇನ್ನುಕೊಳಲು, ತಬಲಾ ಮತ್ತು ಶಂಖದಂತಹ  ಮಧುರ ಸದ್ದು ಕೇಳಿ ಬರಲಿದೆ.

Advertisement
Advertisement

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರು ಇಂಥದ್ದೊಂದು ಸುಳಿವು ನೀಡಿದ್ದಾರೆ. ಶಬ್ದ ಮಾಲಿನ್ಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ವಿಐಪಿ ವಾಹನಗಳಲ್ಲಿ ಸೈರನ್ ಸೌಂಡ್ ಗೆ ಬ್ರೇಕ್ ಹಾಕುವ ಬಗ್ಗೆ ಚಿಂತನೆ ನಡೆಸಿದ್ದಾಗಿ ಅವರು ಹೇಳಿದ್ದಾರೆ.ಸೈರನ್ ಶಬ್ದಗಳನ್ನು ಬದಲಾಯಿಸುವ ಹೊಸ ನೀತಿಯನ್ನು ರೂಪಿಸಲಾಗುತ್ತಿದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ. ಸೈರನ್ ಬದಲಿಗೆ ಭಾರತೀಯ ಸಂಗೀತ ವಾದ್ಯಗಳಾದ ಕೊಳಲು, ತಬಲಾ ಮತ್ತು ಶಂಖಗಳ ಧ್ವನಿಗಳು ಕೇಳಿ ಬರಲಿದೆ. ಪುಣೆಯ ಚಾಂದಿನಿ ಚೌಕ್ ಮೇಲ್ಸೇತುವೆ ಉದ್ಘಾಟನಾ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಗಡ್ಕರಿ, ಶಬ್ದ ಮಾಲಿನ್ಯವನ್ನು ನಿಯಂತ್ರಿಸುವುದು ಬಹಳ ಮುಖ್ಯ ಎಂದಿದ್ದಾರೆ. ಐಪಿಗಳ ವಾಹನದ ಮೇಲೆ ಕೆಂಪು ದೀಪವನ್ನು ಕೊನೆಗೊಳಿಸಲು ನನಗೆ ಅವಕಾಶ ಸಿಕ್ಕಿರುವುದು ನನ್ನ ಅದೃಷ್ಟ. ಇದೀಗ ನಾನು ವಿಐಪಿ ವಾಹನಗಳ ಮೇಲಿನ ಸೈರನ್ಗಳನ್ನು ನಿಲ್ಲಿಸಲು ಪ್ಲಾನ್ ಮಾಡುತ್ತಿದ್ದೇನೆ ಎಂದಿದ್ದಾರೆ.

Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಷಾಢ ಮಾಸದಲ್ಲಿ ಶಕ್ತಿದೇವತೆಯ ಉಪಾಸನೆ ಏಕೆ ಅಗತ್ಯ..?

ಆಷಾಢ ಮಾಸದಲ್ಲಿ ಶಕ್ತಿದೇವತೆ ಪೂಜೆಯ ಮಹತ್ವ ಹಾಗೂ ಏಕೆ ಅಗತ್ಯ ಇದೆ ಎನ್ನುವುದರ…

4 hours ago

ಸೇವೆಗಳನ್ನು ಸುಧಾರಿಸಲು ಭಕ್ತರಿಂದ ಅಭಿಪ್ರಾಯ ಸಂಗ್ರಹಕ್ಕೆ ಮುಂದಾದ ಟಿಟಿಡಿ

ತಿರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಭಕ್ತರಿಂದ ರಚನಾತ್ಮಕ ಪ್ರತಿಕ್ರಿಯೆಗಳನ್ನು ಸಂಗ್ರಹಿಸಲು ಭಕ್ತರಿಂದ ಪ್ರತಿಕ್ರಿಯೆ…

4 hours ago

ರೈತರಿಗೆ ಕೃಷಿ ಬಗ್ಗೆ ಅರಿವು ಕಾರ್ಯಕ್ರಮ

ರೈತರಿಗೆ ಇಲಾಖೆಯ ವತಿಯಿಂದ ಕೃಷಿಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ದಕ್ಷಿಣ ಕನ್ನಡ…

4 hours ago

‌ರಾಜ್ಯಮಟ್ಟದ ಚೆಸ್ ಚಾಂಪಿಯನ್‌ ಶಿಪ್ | ರಾಷ್ಟ್ರಮಟ್ಟಕ್ಕೆ ರವೀಶ್‌ ಕೋಟೆ ಆಯ್ಕೆ

ದಕ್ಷಿಣ ಕನ್ನಡದ ಚೆಸ್‌ ಆಟಗಾರ ರವೀಶ್ ಕೋಟೆ‌ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ

7 hours ago

ಬಾಹ್ಯಾಕಾಶ ನಿಲ್ದಾಣದಲ್ಲಿರುವ ಶುಕ್ಲಾ ಜೊತೆ ಪ್ರಧಾನಿ ವಿಡಿಯೋ ಸಂವಾದ

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ   ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್  ಶುಭಾಂಶು ಶುಕ್ಲಾ ಅವರೊಂದಿಗೆ…

7 hours ago