Advertisement
MIRROR FOCUS

ವಿಐಪಿ, ವಿವಿಐಪಿ ವಾಹನಗಳಲ್ಲಿ ಸೈರನ್‌ ಸದ್ದು ಬದಲಾವಣೆಗೆ ಚಿಂತನೆ | ಶಂಖ, ಕೊಳಲು, ಜಾಗಟೆ ಸದ್ದಿಗೆ ಯೋಚನೆ |

Share

ನಮ್ಮ ದೇಶದಲ್ಲಿ ವಿಐಪಿಗಳು, ವಿವಿಐಪಿಗಳಿಗೆ ಸತ್ಕಾರ ಇದೆ. ಅವರ ವಾಹನ ರಸ್ತೆಗೆ ಇಳಿದ್ರೆ ಸಾಕು ಜೋರಾಗಿ ಸೈರನ್ ಬಾರಿಸುತ್ತಾ, ಬಾರಿ ಗದ್ದಲ ಎಬ್ಬಿಸಿಕೊಂಡು ವಾಹನಗಳಲ್ಲಿ ಬರುತ್ತಾರೆ.  ಇನ್ಮುಂದೆ ಈ ಸದ್ದು-ಗದ್ದಲಕ್ಕೆ ಬ್ರೇಕ್ ಬೀಳಲಿದೆ.ಈ ರೀತಿಯ ಭಾರೀ ಸೌಂಡ್ ಮಾಡುವ ಸೈರನ್ ಗಳಿಗೆ ಬ್ರೇಕ್ ಬೀಳಲಿದೆ. ಬದಲಾಗಿ ಇನ್ನುಕೊಳಲು, ತಬಲಾ ಮತ್ತು ಶಂಖದಂತಹ  ಮಧುರ ಸದ್ದು ಕೇಳಿ ಬರಲಿದೆ.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರು ಇಂಥದ್ದೊಂದು ಸುಳಿವು ನೀಡಿದ್ದಾರೆ. ಶಬ್ದ ಮಾಲಿನ್ಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ವಿಐಪಿ ವಾಹನಗಳಲ್ಲಿ ಸೈರನ್ ಸೌಂಡ್ ಗೆ ಬ್ರೇಕ್ ಹಾಕುವ ಬಗ್ಗೆ ಚಿಂತನೆ ನಡೆಸಿದ್ದಾಗಿ ಅವರು ಹೇಳಿದ್ದಾರೆ.ಸೈರನ್ ಶಬ್ದಗಳನ್ನು ಬದಲಾಯಿಸುವ ಹೊಸ ನೀತಿಯನ್ನು ರೂಪಿಸಲಾಗುತ್ತಿದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ. ಸೈರನ್ ಬದಲಿಗೆ ಭಾರತೀಯ ಸಂಗೀತ ವಾದ್ಯಗಳಾದ ಕೊಳಲು, ತಬಲಾ ಮತ್ತು ಶಂಖಗಳ ಧ್ವನಿಗಳು ಕೇಳಿ ಬರಲಿದೆ. ಪುಣೆಯ ಚಾಂದಿನಿ ಚೌಕ್ ಮೇಲ್ಸೇತುವೆ ಉದ್ಘಾಟನಾ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಗಡ್ಕರಿ, ಶಬ್ದ ಮಾಲಿನ್ಯವನ್ನು ನಿಯಂತ್ರಿಸುವುದು ಬಹಳ ಮುಖ್ಯ ಎಂದಿದ್ದಾರೆ. ಐಪಿಗಳ ವಾಹನದ ಮೇಲೆ ಕೆಂಪು ದೀಪವನ್ನು ಕೊನೆಗೊಳಿಸಲು ನನಗೆ ಅವಕಾಶ ಸಿಕ್ಕಿರುವುದು ನನ್ನ ಅದೃಷ್ಟ. ಇದೀಗ ನಾನು ವಿಐಪಿ ವಾಹನಗಳ ಮೇಲಿನ ಸೈರನ್ಗಳನ್ನು ನಿಲ್ಲಿಸಲು ಪ್ಲಾನ್ ಮಾಡುತ್ತಿದ್ದೇನೆ ಎಂದಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

5 hours ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

6 hours ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

6 hours ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

10 hours ago

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

2 days ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

2 days ago