ನಮ್ಮ ದೇಶದಲ್ಲಿ ವಿಐಪಿಗಳು, ವಿವಿಐಪಿಗಳಿಗೆ ಸತ್ಕಾರ ಇದೆ. ಅವರ ವಾಹನ ರಸ್ತೆಗೆ ಇಳಿದ್ರೆ ಸಾಕು ಜೋರಾಗಿ ಸೈರನ್ ಬಾರಿಸುತ್ತಾ, ಬಾರಿ ಗದ್ದಲ ಎಬ್ಬಿಸಿಕೊಂಡು ವಾಹನಗಳಲ್ಲಿ ಬರುತ್ತಾರೆ. ಇನ್ಮುಂದೆ ಈ ಸದ್ದು-ಗದ್ದಲಕ್ಕೆ ಬ್ರೇಕ್ ಬೀಳಲಿದೆ.ಈ ರೀತಿಯ ಭಾರೀ ಸೌಂಡ್ ಮಾಡುವ ಸೈರನ್ ಗಳಿಗೆ ಬ್ರೇಕ್ ಬೀಳಲಿದೆ. ಬದಲಾಗಿ ಇನ್ನುಕೊಳಲು, ತಬಲಾ ಮತ್ತು ಶಂಖದಂತಹ ಮಧುರ ಸದ್ದು ಕೇಳಿ ಬರಲಿದೆ.
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರು ಇಂಥದ್ದೊಂದು ಸುಳಿವು ನೀಡಿದ್ದಾರೆ. ಶಬ್ದ ಮಾಲಿನ್ಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ವಿಐಪಿ ವಾಹನಗಳಲ್ಲಿ ಸೈರನ್ ಸೌಂಡ್ ಗೆ ಬ್ರೇಕ್ ಹಾಕುವ ಬಗ್ಗೆ ಚಿಂತನೆ ನಡೆಸಿದ್ದಾಗಿ ಅವರು ಹೇಳಿದ್ದಾರೆ.ಸೈರನ್ ಶಬ್ದಗಳನ್ನು ಬದಲಾಯಿಸುವ ಹೊಸ ನೀತಿಯನ್ನು ರೂಪಿಸಲಾಗುತ್ತಿದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ. ಸೈರನ್ ಬದಲಿಗೆ ಭಾರತೀಯ ಸಂಗೀತ ವಾದ್ಯಗಳಾದ ಕೊಳಲು, ತಬಲಾ ಮತ್ತು ಶಂಖಗಳ ಧ್ವನಿಗಳು ಕೇಳಿ ಬರಲಿದೆ. ಪುಣೆಯ ಚಾಂದಿನಿ ಚೌಕ್ ಮೇಲ್ಸೇತುವೆ ಉದ್ಘಾಟನಾ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಗಡ್ಕರಿ, ಶಬ್ದ ಮಾಲಿನ್ಯವನ್ನು ನಿಯಂತ್ರಿಸುವುದು ಬಹಳ ಮುಖ್ಯ ಎಂದಿದ್ದಾರೆ. ಐಪಿಗಳ ವಾಹನದ ಮೇಲೆ ಕೆಂಪು ದೀಪವನ್ನು ಕೊನೆಗೊಳಿಸಲು ನನಗೆ ಅವಕಾಶ ಸಿಕ್ಕಿರುವುದು ನನ್ನ ಅದೃಷ್ಟ. ಇದೀಗ ನಾನು ವಿಐಪಿ ವಾಹನಗಳ ಮೇಲಿನ ಸೈರನ್ಗಳನ್ನು ನಿಲ್ಲಿಸಲು ಪ್ಲಾನ್ ಮಾಡುತ್ತಿದ್ದೇನೆ ಎಂದಿದ್ದಾರೆ.
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…
ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ ತಮಿಳುನಾಡು ಮೂರು ಹೊಸ ಆನೆ…
ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿ ಭಾಗದಲ್ಲಿ ಮಧ್ಯಮ ಸ್ತರದ ತಿರುವಿಕೆ ಉಂಟಾಗಿದ್ದು, ಇದರ ಪ್ರಭಾವದಿಂದ…
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…