Advertisement
MIRROR FOCUS

ವಿಐಪಿ, ವಿವಿಐಪಿ ವಾಹನಗಳಲ್ಲಿ ಸೈರನ್‌ ಸದ್ದು ಬದಲಾವಣೆಗೆ ಚಿಂತನೆ | ಶಂಖ, ಕೊಳಲು, ಜಾಗಟೆ ಸದ್ದಿಗೆ ಯೋಚನೆ |

Share

ನಮ್ಮ ದೇಶದಲ್ಲಿ ವಿಐಪಿಗಳು, ವಿವಿಐಪಿಗಳಿಗೆ ಸತ್ಕಾರ ಇದೆ. ಅವರ ವಾಹನ ರಸ್ತೆಗೆ ಇಳಿದ್ರೆ ಸಾಕು ಜೋರಾಗಿ ಸೈರನ್ ಬಾರಿಸುತ್ತಾ, ಬಾರಿ ಗದ್ದಲ ಎಬ್ಬಿಸಿಕೊಂಡು ವಾಹನಗಳಲ್ಲಿ ಬರುತ್ತಾರೆ.  ಇನ್ಮುಂದೆ ಈ ಸದ್ದು-ಗದ್ದಲಕ್ಕೆ ಬ್ರೇಕ್ ಬೀಳಲಿದೆ.ಈ ರೀತಿಯ ಭಾರೀ ಸೌಂಡ್ ಮಾಡುವ ಸೈರನ್ ಗಳಿಗೆ ಬ್ರೇಕ್ ಬೀಳಲಿದೆ. ಬದಲಾಗಿ ಇನ್ನುಕೊಳಲು, ತಬಲಾ ಮತ್ತು ಶಂಖದಂತಹ  ಮಧುರ ಸದ್ದು ಕೇಳಿ ಬರಲಿದೆ.

Advertisement

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರು ಇಂಥದ್ದೊಂದು ಸುಳಿವು ನೀಡಿದ್ದಾರೆ. ಶಬ್ದ ಮಾಲಿನ್ಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ವಿಐಪಿ ವಾಹನಗಳಲ್ಲಿ ಸೈರನ್ ಸೌಂಡ್ ಗೆ ಬ್ರೇಕ್ ಹಾಕುವ ಬಗ್ಗೆ ಚಿಂತನೆ ನಡೆಸಿದ್ದಾಗಿ ಅವರು ಹೇಳಿದ್ದಾರೆ.ಸೈರನ್ ಶಬ್ದಗಳನ್ನು ಬದಲಾಯಿಸುವ ಹೊಸ ನೀತಿಯನ್ನು ರೂಪಿಸಲಾಗುತ್ತಿದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ. ಸೈರನ್ ಬದಲಿಗೆ ಭಾರತೀಯ ಸಂಗೀತ ವಾದ್ಯಗಳಾದ ಕೊಳಲು, ತಬಲಾ ಮತ್ತು ಶಂಖಗಳ ಧ್ವನಿಗಳು ಕೇಳಿ ಬರಲಿದೆ. ಪುಣೆಯ ಚಾಂದಿನಿ ಚೌಕ್ ಮೇಲ್ಸೇತುವೆ ಉದ್ಘಾಟನಾ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಗಡ್ಕರಿ, ಶಬ್ದ ಮಾಲಿನ್ಯವನ್ನು ನಿಯಂತ್ರಿಸುವುದು ಬಹಳ ಮುಖ್ಯ ಎಂದಿದ್ದಾರೆ. ಐಪಿಗಳ ವಾಹನದ ಮೇಲೆ ಕೆಂಪು ದೀಪವನ್ನು ಕೊನೆಗೊಳಿಸಲು ನನಗೆ ಅವಕಾಶ ಸಿಕ್ಕಿರುವುದು ನನ್ನ ಅದೃಷ್ಟ. ಇದೀಗ ನಾನು ವಿಐಪಿ ವಾಹನಗಳ ಮೇಲಿನ ಸೈರನ್ಗಳನ್ನು ನಿಲ್ಲಿಸಲು ಪ್ಲಾನ್ ಮಾಡುತ್ತಿದ್ದೇನೆ ಎಂದಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

SSLC ಪಾಸ್ ಮಾಡಿದವರಿಗೆ ಸುವರ್ಣಾವಕಾಶ..! ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ

ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ಆರಂಭವಾಗಿದೆ.…

6 hours ago

13 ಟನ್ ಅಕ್ರಮ ಅಡಿಕೆ ವಶ : ಕರಾವಳಿ ರಕ್ಷಣಾ ಪಡೆಯ ದಾಳಿ

ಸುಂದರ್‌ಬನ್ಸ್‌ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…

6 hours ago

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

22 hours ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

22 hours ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

22 hours ago

ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು

ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…

22 hours ago