ಹಕ್ಕಿಜ್ವರದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ | ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

March 6, 2025
10:01 PM

ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿದ್ದು, ಜನರು ಭಯಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.  ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಹಕ್ಕಿಜ್ವರ ಸಾಂಕ್ರಾಮಿಕ ರೋಗವಾದರೂ, ಅದು ಹಕ್ಕಿಗಳಿಂದ ಮನುಷ್ಯರಿಗೆ ಹರಡುವುದು ಅಪರೂಪ. ಹೀಗಾಗಿ ಅನಗತ್ಯ ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೂ ಮೊಟ್ಟೆ ಮತ್ತು ಮಾಂಸವನ್ನು ಸೇವಿಸುವಾಗ ಕೆಲ ಎಚ್ಚರಿಕೆಗಳನ್ನು ಪಾಲಿಸಬೇಕಾದ ಅಗತ್ಯವಿದೆ. ಮೊಟ್ಟೆ ಮತ್ತು ಮಾಂಸವನ್ನು 70  ಡಿಗ್ರಿ ಉಷ್ಣಾಂಶದಲ್ಲಿ ಅರ್ಧಗಂಟೆಗೂ ಹೆಚ್ಚು ಕಾಲ ಬೇಯಿಸಿ ಸೇವಿಸಬೇಕು ಎಂದು ಸಲಹೆ ನೀಡಿದ್ದಾರೆ.  ಸೋಂಕು ಪೀಡಿತ ಕೋಳಿ ಫಾರಂ, ಮೃತ ಹಕ್ಕಿ ಅಥವಾ ಕೋಳಿಗಳ ಸಮೀಪಕ್ಕೆ ಹೋಗದೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ
June 26, 2026
1:15 PM
by: ದ ರೂರಲ್ ಮಿರರ್.ಕಾಂ
ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”
June 26, 2026
12:52 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ
June 25, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು
ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ
June 25, 2026
8:17 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror