ಭೂತಾನ್ನಿಂದ ಹಸಿ ಅಡಿಕೆ ಆಮದು ಮಾಡಿಕೊಳ್ಳುವ ಕೇಂದ್ರ ಸರ್ಕಾರದ ನಿರ್ಧಾರವು ಸ್ಥಳೀಯ ಅಡಿಕೆ ಮಾರುಕಟ್ಟೆಯ ಮೇಲೆ ಯಾವುದೇ ಪರಿಣಾಮ ಬೀರದು, ಅಡಿಕೆ ಬೆಳೆಗಾರರು ಯಾವುದೇ ಆತಂಕಕ್ಕೆ ಒಳಗಾಗಬೇಕಾಗಿಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಹೇಳಿದ್ದಾರೆ.
ಭೂತಾನ್ ನಿಂದ ಹಸಿ ಅಡಿಕೆ ಆಮದು ಮಾಡಿಕೊಳ್ಳುವ ಪ್ರಮಾಣ ಹಾಗೂ ನಮ್ಮ ದೇಶದ ಅಡಿಕೆ ಮಾರುಕಟ್ಟೆಗೆ ಹೋಲಿಸಿದರೆ ಅತೀ ಕಡಿಮೆ ಪ್ರಮಾಣದಲ್ಲಿದೆ. ಹೀಗಾಗಿ ದೇಶೀಯ ಅಡಿಕೆ ಮಾರುಕಟ್ಟೆ ಮೇಲೆ ಪರಿಣಾಮ ಬೀರದು ಎಂದು ಕಿಶೋರ್ ಕುಮಾರ್ ಕೊಡ್ಗಿ ಹೇಳಿದ್ದಾರೆ. ರಾಜ್ಯದಲ್ಲಿ ಉತ್ಪಾದಿಸುವ ಬಿಳಿ ಚಾಲಿ ಅಡಿಕೆ ಬೆಲೆಯಲ್ಲಿ ಸದ್ಯ ಯಾವುದೇ ಪರಿಣಾಮ ಬೀರದು.ದೇಶೀಯ ಅಡಿಕೆ ಬೆಳೆಗಾರರಲ್ಲಿ ಯಾವುದೇ ಭಯ ಅಥವಾ ಅನಿಶ್ಚಿತತೆಯನ್ನು ನಿವಾರಿಸುವ ಗುರಿಯನ್ನು ಕ್ಯಾಂಪ್ಕೋ ಹೊಂದಿದೆ. ಹೀಗಾಗಿ ಭೂತಾನ್ನಿಂದ ಅಡಿಕೆ ಆಮದು ಆಗುತ್ತಿರುವ ಬಗ್ಗೆ ಯಾವುದೇ ಆತಂಕ ಅಗತ್ಯ ಇಲ್ಲ ಎಂದು ಕಿಶೋರ್ ಕುಮಾರ್ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.