ಭೂತಾನ್ನಿಂದ ಹಸಿ ಅಡಿಕೆ ಆಮದು ಮಾಡಿಕೊಳ್ಳುವ ಕೇಂದ್ರ ಸರ್ಕಾರದ ನಿರ್ಧಾರವು ಸ್ಥಳೀಯ ಅಡಿಕೆ ಮಾರುಕಟ್ಟೆಯ ಮೇಲೆ ಯಾವುದೇ ಪರಿಣಾಮ ಬೀರದು, ಅಡಿಕೆ ಬೆಳೆಗಾರರು ಯಾವುದೇ ಆತಂಕಕ್ಕೆ ಒಳಗಾಗಬೇಕಾಗಿಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಹೇಳಿದ್ದಾರೆ.
ಭೂತಾನ್ ನಿಂದ ಹಸಿ ಅಡಿಕೆ ಆಮದು ಮಾಡಿಕೊಳ್ಳುವ ಪ್ರಮಾಣ ಹಾಗೂ ನಮ್ಮ ದೇಶದ ಅಡಿಕೆ ಮಾರುಕಟ್ಟೆಗೆ ಹೋಲಿಸಿದರೆ ಅತೀ ಕಡಿಮೆ ಪ್ರಮಾಣದಲ್ಲಿದೆ. ಹೀಗಾಗಿ ದೇಶೀಯ ಅಡಿಕೆ ಮಾರುಕಟ್ಟೆ ಮೇಲೆ ಪರಿಣಾಮ ಬೀರದು ಎಂದು ಕಿಶೋರ್ ಕುಮಾರ್ ಕೊಡ್ಗಿ ಹೇಳಿದ್ದಾರೆ. ರಾಜ್ಯದಲ್ಲಿ ಉತ್ಪಾದಿಸುವ ಬಿಳಿ ಚಾಲಿ ಅಡಿಕೆ ಬೆಲೆಯಲ್ಲಿ ಸದ್ಯ ಯಾವುದೇ ಪರಿಣಾಮ ಬೀರದು.ದೇಶೀಯ ಅಡಿಕೆ ಬೆಳೆಗಾರರಲ್ಲಿ ಯಾವುದೇ ಭಯ ಅಥವಾ ಅನಿಶ್ಚಿತತೆಯನ್ನು ನಿವಾರಿಸುವ ಗುರಿಯನ್ನು ಕ್ಯಾಂಪ್ಕೋ ಹೊಂದಿದೆ. ಹೀಗಾಗಿ ಭೂತಾನ್ನಿಂದ ಅಡಿಕೆ ಆಮದು ಆಗುತ್ತಿರುವ ಬಗ್ಗೆ ಯಾವುದೇ ಆತಂಕ ಅಗತ್ಯ ಇಲ್ಲ ಎಂದು ಕಿಶೋರ್ ಕುಮಾರ್ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಹವಾಮಾನ ಬದಲಾವಣೆಯು 2050 ರ ದಶಕದಲ್ಲಿ ಮಳೆಯಾಶ್ರಿತ ಅಕ್ಕಿ ಇಳುವರಿಯನ್ನು 20% ಮತ್ತು…
ವೈದಿಕ ಜ್ಯೋತಿಷ್ಯ ಶಾಸ್ತ್ರದಲ್ಲಿ ದೈವ ಶಾಪ ದೋಷ ಎಂಬುದು ಗತ ಜನ್ಮದ ಕರ್ಮದಿಂದ…
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಕೊಡಗಿನ…
ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…
ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…
ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…