ಭೂತಾನ್ನಿಂದ ಹಸಿ ಅಡಿಕೆ ಆಮದು ಮಾಡಿಕೊಳ್ಳುವ ಕೇಂದ್ರ ಸರ್ಕಾರದ ನಿರ್ಧಾರವು ಸ್ಥಳೀಯ ಅಡಿಕೆ ಮಾರುಕಟ್ಟೆಯ ಮೇಲೆ ಯಾವುದೇ ಪರಿಣಾಮ ಬೀರದು, ಅಡಿಕೆ ಬೆಳೆಗಾರರು ಯಾವುದೇ ಆತಂಕಕ್ಕೆ ಒಳಗಾಗಬೇಕಾಗಿಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಹೇಳಿದ್ದಾರೆ.
ಭೂತಾನ್ ನಿಂದ ಹಸಿ ಅಡಿಕೆ ಆಮದು ಮಾಡಿಕೊಳ್ಳುವ ಪ್ರಮಾಣ ಹಾಗೂ ನಮ್ಮ ದೇಶದ ಅಡಿಕೆ ಮಾರುಕಟ್ಟೆಗೆ ಹೋಲಿಸಿದರೆ ಅತೀ ಕಡಿಮೆ ಪ್ರಮಾಣದಲ್ಲಿದೆ. ಹೀಗಾಗಿ ದೇಶೀಯ ಅಡಿಕೆ ಮಾರುಕಟ್ಟೆ ಮೇಲೆ ಪರಿಣಾಮ ಬೀರದು ಎಂದು ಕಿಶೋರ್ ಕುಮಾರ್ ಕೊಡ್ಗಿ ಹೇಳಿದ್ದಾರೆ. ರಾಜ್ಯದಲ್ಲಿ ಉತ್ಪಾದಿಸುವ ಬಿಳಿ ಚಾಲಿ ಅಡಿಕೆ ಬೆಲೆಯಲ್ಲಿ ಸದ್ಯ ಯಾವುದೇ ಪರಿಣಾಮ ಬೀರದು.ದೇಶೀಯ ಅಡಿಕೆ ಬೆಳೆಗಾರರಲ್ಲಿ ಯಾವುದೇ ಭಯ ಅಥವಾ ಅನಿಶ್ಚಿತತೆಯನ್ನು ನಿವಾರಿಸುವ ಗುರಿಯನ್ನು ಕ್ಯಾಂಪ್ಕೋ ಹೊಂದಿದೆ. ಹೀಗಾಗಿ ಭೂತಾನ್ನಿಂದ ಅಡಿಕೆ ಆಮದು ಆಗುತ್ತಿರುವ ಬಗ್ಗೆ ಯಾವುದೇ ಆತಂಕ ಅಗತ್ಯ ಇಲ್ಲ ಎಂದು ಕಿಶೋರ್ ಕುಮಾರ್ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…