ನಾನೇ ಮುಂದಿನ ಸಿಎಂ : ನನ್ನ ಬಿಟ್ಟು ಬೇರೆ ಯಾರೂ CM ಆಗಲು ಸಾಧ್ಯವಿಲ್ಲ: ಹೆಚ್‌ಡಿಕೆ ಗುಡುಗು

May 3, 2023
11:41 PM

2023ರ ವಿಧಾನಸಭಾ ಚುನಾವಣೆಯಲ್ಲಿ ದೇವರ ಆಶೀರ್ವಾದ ಜೆಡಿಎಸ್ ಪಕ್ಷದ ಮೇಲಿದೆ. ಹೀಗಾಗಿ ಈ ಬಾರಿ ನನ್ನ ಬಿಟ್ಟು ಬೇರೆ ಯಾರೂ ಮುಖ್ಯಮಂತ್ರಿ ಆಗಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.

Advertisement
Advertisement

ಶಿವಮೊಗ್ಗದ ಎನ್‌ಇಎಸ್‌ ಮೈದಾನದಲ್ಲಿ ನಡೆದ ಜೆಡಿಎಸ್  ಚುನಾವಣಾ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಮಾಧ್ಯಮದಲ್ಲಿ ಪ್ರತಿನಿತ್ಯ ಒಂದೊಂದು ಸರ್ವೆ ವರದಿ‌ ಬರುತ್ತಿದೆ. ಈ ಬಾರಿ ಜೆಡಿಎಸ್ 30 ರಿಂದ 35 ಸ್ಥಾನ ಬರದೇ ಇದ್ದರೆ ಆಗ ಪ್ರಶ್ನೆ ಮಾಡಿ ಎಂದು ಹೇಳಿದರು.

ನನ್ನ ಸರ್ಕಾರದ ಅವಧಿಯಲ್ಲಿ ನಾನು ಕ್ಷೇತ್ರಗಳಿಗೆ ಕೊಟ್ಟ ಹಣದಿಂದ ಅಭಿವೃದ್ಧಿ ಆಗಿದೆ. ನಾನು ಅಭಿವೃದ್ಧಿಗೆ ಹಣ ಕೊಡದೇ 40 ಪರ್ಸೆಂಟ್‌ ಕಮೀಷನ್ ಹೊಡೆದಿದ್ದರೆ, 10 ಸಾವಿರ ಕೋಟಿ ರೂ. ಹೊಡೆಯಬಹುದಿತ್ತು. ಆದ್ರೆ ನಾನು ಲೂಟಿ ಹೊಡೆಯುವ ಕೆಲಸ ಮಾಡಲಿಲ್ಲ. ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಈ ಹಿಂದೆ ಕಾಂಗ್ರೆಸ್ ನವರು ಅಧಿಕಾರದಲ್ಲಿದ್ದಾಗ ಲಂಚದ ಹಣವನ್ನು ಕೈಯಲ್ಲಿ ಗೋರುತ್ತಿದ್ದರು. ಆದರೆ ಬಿಜೆಪಿಯವರು ಜೆಸಿಬಿ, ಇಟಾಚಿ ಹಾಕಿಕೊಂಡು ಗೋರುತ್ತಿದ್ದಾರೆ. ಸಾಕು ರಾಜ್ಯದ ಜನರು ಅವರಿಗೆ ಇನ್ನೆಷ್ಟು ಗೋರಲು ಬಿಡುತ್ತೀರಾ. ನಮಗೆ 5 ವರ್ಷದ ಸ್ಪಷ್ಟ ಬಹುಮತದ ಸರ್ಕಾರ ನಡೆಸಲು ಅವಕಾಶ ಕೊಡಿ ಎಂದು ಮನವಿ ಮಾಡಿದ್ದಾರೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ
February 12, 2026
7:04 AM
by: ಮಿರರ್‌ ಡೆಸ್ಕ್
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ
ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ
February 12, 2026
6:47 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror