2023ರ ವಿಧಾನಸಭಾ ಚುನಾವಣೆಯಲ್ಲಿ ದೇವರ ಆಶೀರ್ವಾದ ಜೆಡಿಎಸ್ ಪಕ್ಷದ ಮೇಲಿದೆ. ಹೀಗಾಗಿ ಈ ಬಾರಿ ನನ್ನ ಬಿಟ್ಟು ಬೇರೆ ಯಾರೂ ಮುಖ್ಯಮಂತ್ರಿ ಆಗಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.
ಶಿವಮೊಗ್ಗದ ಎನ್ಇಎಸ್ ಮೈದಾನದಲ್ಲಿ ನಡೆದ ಜೆಡಿಎಸ್ ಚುನಾವಣಾ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಮಾಧ್ಯಮದಲ್ಲಿ ಪ್ರತಿನಿತ್ಯ ಒಂದೊಂದು ಸರ್ವೆ ವರದಿ ಬರುತ್ತಿದೆ. ಈ ಬಾರಿ ಜೆಡಿಎಸ್ 30 ರಿಂದ 35 ಸ್ಥಾನ ಬರದೇ ಇದ್ದರೆ ಆಗ ಪ್ರಶ್ನೆ ಮಾಡಿ ಎಂದು ಹೇಳಿದರು.
ನನ್ನ ಸರ್ಕಾರದ ಅವಧಿಯಲ್ಲಿ ನಾನು ಕ್ಷೇತ್ರಗಳಿಗೆ ಕೊಟ್ಟ ಹಣದಿಂದ ಅಭಿವೃದ್ಧಿ ಆಗಿದೆ. ನಾನು ಅಭಿವೃದ್ಧಿಗೆ ಹಣ ಕೊಡದೇ 40 ಪರ್ಸೆಂಟ್ ಕಮೀಷನ್ ಹೊಡೆದಿದ್ದರೆ, 10 ಸಾವಿರ ಕೋಟಿ ರೂ. ಹೊಡೆಯಬಹುದಿತ್ತು. ಆದ್ರೆ ನಾನು ಲೂಟಿ ಹೊಡೆಯುವ ಕೆಲಸ ಮಾಡಲಿಲ್ಲ. ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ ಎಂದು ಹೇಳಿದ್ದಾರೆ.
ಈ ಹಿಂದೆ ಕಾಂಗ್ರೆಸ್ ನವರು ಅಧಿಕಾರದಲ್ಲಿದ್ದಾಗ ಲಂಚದ ಹಣವನ್ನು ಕೈಯಲ್ಲಿ ಗೋರುತ್ತಿದ್ದರು. ಆದರೆ ಬಿಜೆಪಿಯವರು ಜೆಸಿಬಿ, ಇಟಾಚಿ ಹಾಕಿಕೊಂಡು ಗೋರುತ್ತಿದ್ದಾರೆ. ಸಾಕು ರಾಜ್ಯದ ಜನರು ಅವರಿಗೆ ಇನ್ನೆಷ್ಟು ಗೋರಲು ಬಿಡುತ್ತೀರಾ. ನಮಗೆ 5 ವರ್ಷದ ಸ್ಪಷ್ಟ ಬಹುಮತದ ಸರ್ಕಾರ ನಡೆಸಲು ಅವಕಾಶ ಕೊಡಿ ಎಂದು ಮನವಿ ಮಾಡಿದ್ದಾರೆ.
ಮುಂದಿನ ಏಳು ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಕೆಲವು ಕಡೆ ಭಾರೀ…
ಇತಿಹಾಸದಲ್ಲಿ ಮೊದಲ ಬಾರಿಗೆ ಕೇರಳ ಕೊಬ್ಬರಿ ಆಮದು ಮಾಡಿಕೊಳ್ಳುವ ಸಾಧ್ಯತೆ ಇದೆ.ತೆಂಗಿನಕಾಯಿ ಉತ್ಪಾದನೆಯಲ್ಲಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ದೇಶದಲ್ಲಿ ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ಹೆಚ್ಚು ಪರಿಸರ…
ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಆಧುನಿಕ ಮೂಲಭೂತ…
ದಾವಣಗೆರೆ ನಗರ ಸೇರಿದಂತೆ ಜಿಲ್ಲಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟವನ್ನು…