2023ರ ವಿಧಾನಸಭಾ ಚುನಾವಣೆಯಲ್ಲಿ ದೇವರ ಆಶೀರ್ವಾದ ಜೆಡಿಎಸ್ ಪಕ್ಷದ ಮೇಲಿದೆ. ಹೀಗಾಗಿ ಈ ಬಾರಿ ನನ್ನ ಬಿಟ್ಟು ಬೇರೆ ಯಾರೂ ಮುಖ್ಯಮಂತ್ರಿ ಆಗಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.
ಶಿವಮೊಗ್ಗದ ಎನ್ಇಎಸ್ ಮೈದಾನದಲ್ಲಿ ನಡೆದ ಜೆಡಿಎಸ್ ಚುನಾವಣಾ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಮಾಧ್ಯಮದಲ್ಲಿ ಪ್ರತಿನಿತ್ಯ ಒಂದೊಂದು ಸರ್ವೆ ವರದಿ ಬರುತ್ತಿದೆ. ಈ ಬಾರಿ ಜೆಡಿಎಸ್ 30 ರಿಂದ 35 ಸ್ಥಾನ ಬರದೇ ಇದ್ದರೆ ಆಗ ಪ್ರಶ್ನೆ ಮಾಡಿ ಎಂದು ಹೇಳಿದರು.
ನನ್ನ ಸರ್ಕಾರದ ಅವಧಿಯಲ್ಲಿ ನಾನು ಕ್ಷೇತ್ರಗಳಿಗೆ ಕೊಟ್ಟ ಹಣದಿಂದ ಅಭಿವೃದ್ಧಿ ಆಗಿದೆ. ನಾನು ಅಭಿವೃದ್ಧಿಗೆ ಹಣ ಕೊಡದೇ 40 ಪರ್ಸೆಂಟ್ ಕಮೀಷನ್ ಹೊಡೆದಿದ್ದರೆ, 10 ಸಾವಿರ ಕೋಟಿ ರೂ. ಹೊಡೆಯಬಹುದಿತ್ತು. ಆದ್ರೆ ನಾನು ಲೂಟಿ ಹೊಡೆಯುವ ಕೆಲಸ ಮಾಡಲಿಲ್ಲ. ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ ಎಂದು ಹೇಳಿದ್ದಾರೆ.
ಈ ಹಿಂದೆ ಕಾಂಗ್ರೆಸ್ ನವರು ಅಧಿಕಾರದಲ್ಲಿದ್ದಾಗ ಲಂಚದ ಹಣವನ್ನು ಕೈಯಲ್ಲಿ ಗೋರುತ್ತಿದ್ದರು. ಆದರೆ ಬಿಜೆಪಿಯವರು ಜೆಸಿಬಿ, ಇಟಾಚಿ ಹಾಕಿಕೊಂಡು ಗೋರುತ್ತಿದ್ದಾರೆ. ಸಾಕು ರಾಜ್ಯದ ಜನರು ಅವರಿಗೆ ಇನ್ನೆಷ್ಟು ಗೋರಲು ಬಿಡುತ್ತೀರಾ. ನಮಗೆ 5 ವರ್ಷದ ಸ್ಪಷ್ಟ ಬಹುಮತದ ಸರ್ಕಾರ ನಡೆಸಲು ಅವಕಾಶ ಕೊಡಿ ಎಂದು ಮನವಿ ಮಾಡಿದ್ದಾರೆ.
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…