2023ರ ವಿಧಾನಸಭಾ ಚುನಾವಣೆಯಲ್ಲಿ ದೇವರ ಆಶೀರ್ವಾದ ಜೆಡಿಎಸ್ ಪಕ್ಷದ ಮೇಲಿದೆ. ಹೀಗಾಗಿ ಈ ಬಾರಿ ನನ್ನ ಬಿಟ್ಟು ಬೇರೆ ಯಾರೂ ಮುಖ್ಯಮಂತ್ರಿ ಆಗಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.
ಶಿವಮೊಗ್ಗದ ಎನ್ಇಎಸ್ ಮೈದಾನದಲ್ಲಿ ನಡೆದ ಜೆಡಿಎಸ್ ಚುನಾವಣಾ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಮಾಧ್ಯಮದಲ್ಲಿ ಪ್ರತಿನಿತ್ಯ ಒಂದೊಂದು ಸರ್ವೆ ವರದಿ ಬರುತ್ತಿದೆ. ಈ ಬಾರಿ ಜೆಡಿಎಸ್ 30 ರಿಂದ 35 ಸ್ಥಾನ ಬರದೇ ಇದ್ದರೆ ಆಗ ಪ್ರಶ್ನೆ ಮಾಡಿ ಎಂದು ಹೇಳಿದರು.
ನನ್ನ ಸರ್ಕಾರದ ಅವಧಿಯಲ್ಲಿ ನಾನು ಕ್ಷೇತ್ರಗಳಿಗೆ ಕೊಟ್ಟ ಹಣದಿಂದ ಅಭಿವೃದ್ಧಿ ಆಗಿದೆ. ನಾನು ಅಭಿವೃದ್ಧಿಗೆ ಹಣ ಕೊಡದೇ 40 ಪರ್ಸೆಂಟ್ ಕಮೀಷನ್ ಹೊಡೆದಿದ್ದರೆ, 10 ಸಾವಿರ ಕೋಟಿ ರೂ. ಹೊಡೆಯಬಹುದಿತ್ತು. ಆದ್ರೆ ನಾನು ಲೂಟಿ ಹೊಡೆಯುವ ಕೆಲಸ ಮಾಡಲಿಲ್ಲ. ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ ಎಂದು ಹೇಳಿದ್ದಾರೆ.
ಈ ಹಿಂದೆ ಕಾಂಗ್ರೆಸ್ ನವರು ಅಧಿಕಾರದಲ್ಲಿದ್ದಾಗ ಲಂಚದ ಹಣವನ್ನು ಕೈಯಲ್ಲಿ ಗೋರುತ್ತಿದ್ದರು. ಆದರೆ ಬಿಜೆಪಿಯವರು ಜೆಸಿಬಿ, ಇಟಾಚಿ ಹಾಕಿಕೊಂಡು ಗೋರುತ್ತಿದ್ದಾರೆ. ಸಾಕು ರಾಜ್ಯದ ಜನರು ಅವರಿಗೆ ಇನ್ನೆಷ್ಟು ಗೋರಲು ಬಿಡುತ್ತೀರಾ. ನಮಗೆ 5 ವರ್ಷದ ಸ್ಪಷ್ಟ ಬಹುಮತದ ಸರ್ಕಾರ ನಡೆಸಲು ಅವಕಾಶ ಕೊಡಿ ಎಂದು ಮನವಿ ಮಾಡಿದ್ದಾರೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…