Advertisement
MIRROR FOCUS

#RubberMarket | ರಬ್ಬರ್‌ ದರ ಏರಿಕೆ ಪ್ರಸ್ತಾವನೆ ಇಲ್ಲ | ಕೇಂದ್ರ ಸರ್ಕಾರ ಸ್ಪಷ್ಟನೆ

Share

ರಬ್ಬರ್ ಬೆಲೆಯನ್ನು ಕೆಜಿಗೆ 300 ರೂ.ಗೆ ಹೆಚ್ಚಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಪರಿಶೀಲನೆಯಲ್ಲಿಲ್ಲ ಎಂದು ಕೇಂದ್ರ ಸಚಿವಾಲಯ ಲೋಕಸಭೆಗೆ ಬುಧವಾರ ತಿಳಿಸಿದೆ.

Advertisement
Advertisement

ಇಡುಕ್ಕಿ ಸಂಸದ  ಕುರಿಯಾಕೋಸ್ ಅವರ ಪ್ರಶ್ನೆಗೆ ಲಿಖಿತ ಉತ್ತರದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್ ಮಾಹಿತಿ ನೀಡಿದರು. ಪ್ರಸ್ತುತ, ರಬ್ಬರ್‌ ಧಾರಣೆ ಏರಿಕೆಯ ಯಾವುದೇ ಪ್ರಸ್ತಾಪವು ಪರಿಗಣನೆಯಲ್ಲಿಲ್ಲ ಎಂದು ಸಚಿವರು ಹೇಳಿದರು.

ಕೇರಳದ ರಬ್ಬರ್ ರೈತರನ್ನು ಬೆಂಬಲಿಸಲು ಕೇರಳವು ಹಣಕಾಸಿನ ನೆರವು ಕೋರಿದೆಯೇ ಎಂದು ಸಂಸದರು ಕೇಳಿದ್ದರು. ಇದಕ್ಕೆ ಉತ್ತರವಾಗಿ ಪಟೇಲ್, ವಾಣಿಜ್ಯ ಇಲಾಖೆಯ ಅಡಿಯಲ್ಲಿ ರಬ್ಬರ್ ಮಂಡಳಿಯು ತನ್ನ ವಿವಿಧ ಯೋಜನೆಗಳ ಅಡಿಯಲ್ಲಿ ಹೊಸ ಗಿಡನೆಡುವಿಕೆ ಮತ್ತು ಮರು ನೆಡುವಿಕೆಗೆ ಸಬ್ಸಿಡಿಯನ್ನು ಒದಗಿಸುತ್ತದೆ. ರಬ್ಬರ್ ಬೋರ್ಡ್ ರಬ್ಬರ್ ಮರಗಳನ್ನು ಟ್ಯಾಪಿಂಗ್ ಮಾಡಲು ಮತ್ತು ಶೀಟ್ ರಬ್ಬರ್‌ಗೆ ಸಂಸ್ಕರಿಸಲು ತರಬೇತಿಯನ್ನು ಸಹ ನೀಡುತ್ತದೆ. ರಬ್ಬರ್ ಮಂಡಳಿಯು ಉತ್ಪಾದಕತೆಯನ್ನು ಸುಧಾರಿಸಲು ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ, ಉದಾಹರಣೆಗೆ ಟ್ಯಾಪಿಂಗ್ ದಿನಗಳ ಸಂಖ್ಯೆಯನ್ನು ಹೆಚ್ಚಿಸಲು ಮಳೆ ರಕ್ಷಣೆಗೆ ಪ್ಲಾಸ್ಟಿಕ್‌ ಒದಗಿಸುವುದು, ರೋಗಗಳನ್ನು ತಡೆಗಟ್ಟುವುದು ಇತ್ಯಾದಿಗಳನ್ನು ಮಾಡಲಾಗಿದೆ ಎಂದರು.

ರಬ್ಬರ್ ಆಮದನ್ನು ನಿಯಂತ್ರಿಸುವ ಕ್ರಮಗಳ ಬಗ್ಗೆ ಸಂಸದರು ಕೇಳಿರುವ ಪ್ರಶ್ನೆಗೆ ಮಾಹಿತಿ ನೀಡಿದ ಸಚಿವರು, ಸರ್ಕಾರವು 30.04.2015 ರಿಂದ ರಬ್ಬರ್ ಆಮದಿನ ಮೇಲಿನ ಸುಂಕವನ್ನು ಬದಲು ಮಾಡಿದೆ. ರಬ್ಬರ್‌ ಆಮದು ಮಾಡಿಕೊಳ್ಳಲು ಬಂದರು ಪ್ರವೇಶವನ್ನು ಚೆನ್ನೈ ಮತ್ತು ಜವಾಹರಲಾಲ್ ನೆಹರು  ಬಂದರುಗಳಿಗೆ ನಿರ್ಬಂಧಿಸಲಾಗಿದೆ . ಇದಲ್ಲದೆ, 2023-24ರ ಕೇಂದ್ರ ಬಜೆಟ್‌ನಲ್ಲಿ, ಸಂಯುಕ್ತ ರಬ್ಬರ್ ಮೇಲಿನ ಕಸ್ಟಮ್ ಸುಂಕದ ದರವನ್ನು 10% ರಿಂದ 25% ಕ್ಕೆ ಹೆಚ್ಚಿಸಲಾಗಿದೆ. ಬೇರೆ ಯಾವುದೇ ಪ್ರಸ್ತಾವನೆಗಳು ಪರಿಗಣನೆಯಲ್ಲಿಲ್ಲ, ಎಂದು ಉತ್ತರದಲ್ಲಿ ತಿಳಿಸಿದ್ದಾರೆ.

ರಬ್ಬರ್ ದರವನ್ನು ಕೆಜಿಗೆ 300 ರೂ.ಗೆ ಹೆಚ್ಚಿಸಿದರೆ ಕೇರಳದಿಂದ ಬಿಜೆಪಿಗೆ ಲೋಕಸಭಾ ಸದಸ್ಯ ಸಿಗುತ್ತದೆ ಎಂದು ಈಚೆಗೆ ಕೇರಳದ ಬಿಷಪ್‌ ಒಬ್ಬರು ಹೇಳಿದ್ದರು. ಈ ಸುದ್ದಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಹೀಗಾಗಿ ಇದೀಗ ಈ ಪ್ರಶ್ನೆಯೂ ಮುನ್ನೆಲೆಗೆ ಬಂದಿದೆ. ಇದೀಗ 300 ರೂಪಾಯಿಗೆ ದರ ಏರಿಕೆಗೆ ಯಾವುದೇ ಪ್ರಸ್ತಾಪ ಇಲ್ಲ ಎನ್ನುವ ಮೂಲಕ ಈ ಚರ್ಚೆಗೆ ತೆರೆ ಬಿದ್ದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ನಿಷೇಧ ಇಲ್ಲ – ಈಗ ಅಡಿಕೆ ಬಳಕೆಯ ನಿಯಂತ್ರಣದತ್ತ ಫೋಕಸ್

ಅಡಿಕೆ ನಿಷೇಧಕ್ಕಿಂತ ಬಳಕೆಯ ನಿಯಂತ್ರಣವೇ ಪರಿಣಾಮಕಾರಿ ಎಂದು WHO ಅಭಿಪ್ರಾಯಪಟ್ಟಿದೆ. ಆಗ್ನೇಯ ಏಷ್ಯಾದ…

4 hours ago

ಅಡಿಕೆ ಬಳಕೆಯ ನಿಯಂತ್ರಣಕ್ಕೆ ‘MPOWER’ ನೀತಿ ಅಗತ್ಯ : ವಿಶ್ವ ಆರೋಗ್ಯ ಸಂಸ್ಥೆ

ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…

9 hours ago

ಅರೆಕಾನಟ್ ಚಾಲೆಂಜ್ : ಅಡಿಕೆ ನಿಯಂತ್ರಣ ಕುರಿತು WHO ಉತ್ಸುಕತೆ – ಕ್ಲಿನಿಕಲ್ ಪರೀಕ್ಷೆಗಳ ಅಗತ್ಯಕ್ಕೆ ತಜ್ಞರ ಒತ್ತಾಯ

ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…

9 hours ago

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

19 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

19 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

19 hours ago