Advertisement
MIRROR FOCUS

#RubberMarket | ರಬ್ಬರ್‌ ದರ ಏರಿಕೆ ಪ್ರಸ್ತಾವನೆ ಇಲ್ಲ | ಕೇಂದ್ರ ಸರ್ಕಾರ ಸ್ಪಷ್ಟನೆ

Share

ರಬ್ಬರ್ ಬೆಲೆಯನ್ನು ಕೆಜಿಗೆ 300 ರೂ.ಗೆ ಹೆಚ್ಚಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಪರಿಶೀಲನೆಯಲ್ಲಿಲ್ಲ ಎಂದು ಕೇಂದ್ರ ಸಚಿವಾಲಯ ಲೋಕಸಭೆಗೆ ಬುಧವಾರ ತಿಳಿಸಿದೆ.

ಇಡುಕ್ಕಿ ಸಂಸದ  ಕುರಿಯಾಕೋಸ್ ಅವರ ಪ್ರಶ್ನೆಗೆ ಲಿಖಿತ ಉತ್ತರದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್ ಮಾಹಿತಿ ನೀಡಿದರು. ಪ್ರಸ್ತುತ, ರಬ್ಬರ್‌ ಧಾರಣೆ ಏರಿಕೆಯ ಯಾವುದೇ ಪ್ರಸ್ತಾಪವು ಪರಿಗಣನೆಯಲ್ಲಿಲ್ಲ ಎಂದು ಸಚಿವರು ಹೇಳಿದರು.

ಕೇರಳದ ರಬ್ಬರ್ ರೈತರನ್ನು ಬೆಂಬಲಿಸಲು ಕೇರಳವು ಹಣಕಾಸಿನ ನೆರವು ಕೋರಿದೆಯೇ ಎಂದು ಸಂಸದರು ಕೇಳಿದ್ದರು. ಇದಕ್ಕೆ ಉತ್ತರವಾಗಿ ಪಟೇಲ್, ವಾಣಿಜ್ಯ ಇಲಾಖೆಯ ಅಡಿಯಲ್ಲಿ ರಬ್ಬರ್ ಮಂಡಳಿಯು ತನ್ನ ವಿವಿಧ ಯೋಜನೆಗಳ ಅಡಿಯಲ್ಲಿ ಹೊಸ ಗಿಡನೆಡುವಿಕೆ ಮತ್ತು ಮರು ನೆಡುವಿಕೆಗೆ ಸಬ್ಸಿಡಿಯನ್ನು ಒದಗಿಸುತ್ತದೆ. ರಬ್ಬರ್ ಬೋರ್ಡ್ ರಬ್ಬರ್ ಮರಗಳನ್ನು ಟ್ಯಾಪಿಂಗ್ ಮಾಡಲು ಮತ್ತು ಶೀಟ್ ರಬ್ಬರ್‌ಗೆ ಸಂಸ್ಕರಿಸಲು ತರಬೇತಿಯನ್ನು ಸಹ ನೀಡುತ್ತದೆ. ರಬ್ಬರ್ ಮಂಡಳಿಯು ಉತ್ಪಾದಕತೆಯನ್ನು ಸುಧಾರಿಸಲು ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ, ಉದಾಹರಣೆಗೆ ಟ್ಯಾಪಿಂಗ್ ದಿನಗಳ ಸಂಖ್ಯೆಯನ್ನು ಹೆಚ್ಚಿಸಲು ಮಳೆ ರಕ್ಷಣೆಗೆ ಪ್ಲಾಸ್ಟಿಕ್‌ ಒದಗಿಸುವುದು, ರೋಗಗಳನ್ನು ತಡೆಗಟ್ಟುವುದು ಇತ್ಯಾದಿಗಳನ್ನು ಮಾಡಲಾಗಿದೆ ಎಂದರು.

ರಬ್ಬರ್ ಆಮದನ್ನು ನಿಯಂತ್ರಿಸುವ ಕ್ರಮಗಳ ಬಗ್ಗೆ ಸಂಸದರು ಕೇಳಿರುವ ಪ್ರಶ್ನೆಗೆ ಮಾಹಿತಿ ನೀಡಿದ ಸಚಿವರು, ಸರ್ಕಾರವು 30.04.2015 ರಿಂದ ರಬ್ಬರ್ ಆಮದಿನ ಮೇಲಿನ ಸುಂಕವನ್ನು ಬದಲು ಮಾಡಿದೆ. ರಬ್ಬರ್‌ ಆಮದು ಮಾಡಿಕೊಳ್ಳಲು ಬಂದರು ಪ್ರವೇಶವನ್ನು ಚೆನ್ನೈ ಮತ್ತು ಜವಾಹರಲಾಲ್ ನೆಹರು  ಬಂದರುಗಳಿಗೆ ನಿರ್ಬಂಧಿಸಲಾಗಿದೆ . ಇದಲ್ಲದೆ, 2023-24ರ ಕೇಂದ್ರ ಬಜೆಟ್‌ನಲ್ಲಿ, ಸಂಯುಕ್ತ ರಬ್ಬರ್ ಮೇಲಿನ ಕಸ್ಟಮ್ ಸುಂಕದ ದರವನ್ನು 10% ರಿಂದ 25% ಕ್ಕೆ ಹೆಚ್ಚಿಸಲಾಗಿದೆ. ಬೇರೆ ಯಾವುದೇ ಪ್ರಸ್ತಾವನೆಗಳು ಪರಿಗಣನೆಯಲ್ಲಿಲ್ಲ, ಎಂದು ಉತ್ತರದಲ್ಲಿ ತಿಳಿಸಿದ್ದಾರೆ.

ರಬ್ಬರ್ ದರವನ್ನು ಕೆಜಿಗೆ 300 ರೂ.ಗೆ ಹೆಚ್ಚಿಸಿದರೆ ಕೇರಳದಿಂದ ಬಿಜೆಪಿಗೆ ಲೋಕಸಭಾ ಸದಸ್ಯ ಸಿಗುತ್ತದೆ ಎಂದು ಈಚೆಗೆ ಕೇರಳದ ಬಿಷಪ್‌ ಒಬ್ಬರು ಹೇಳಿದ್ದರು. ಈ ಸುದ್ದಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಹೀಗಾಗಿ ಇದೀಗ ಈ ಪ್ರಶ್ನೆಯೂ ಮುನ್ನೆಲೆಗೆ ಬಂದಿದೆ. ಇದೀಗ 300 ರೂಪಾಯಿಗೆ ದರ ಏರಿಕೆಗೆ ಯಾವುದೇ ಪ್ರಸ್ತಾಪ ಇಲ್ಲ ಎನ್ನುವ ಮೂಲಕ ಈ ಚರ್ಚೆಗೆ ತೆರೆ ಬಿದ್ದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

11 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

11 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

1 day ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

2 days ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

2 days ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago