Advertisement
MIRROR FOCUS

#RubberMarket | ರಬ್ಬರ್‌ ದರ ಏರಿಕೆ ಪ್ರಸ್ತಾವನೆ ಇಲ್ಲ | ಕೇಂದ್ರ ಸರ್ಕಾರ ಸ್ಪಷ್ಟನೆ

Share

ರಬ್ಬರ್ ಬೆಲೆಯನ್ನು ಕೆಜಿಗೆ 300 ರೂ.ಗೆ ಹೆಚ್ಚಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಪರಿಶೀಲನೆಯಲ್ಲಿಲ್ಲ ಎಂದು ಕೇಂದ್ರ ಸಚಿವಾಲಯ ಲೋಕಸಭೆಗೆ ಬುಧವಾರ ತಿಳಿಸಿದೆ.

ಇಡುಕ್ಕಿ ಸಂಸದ  ಕುರಿಯಾಕೋಸ್ ಅವರ ಪ್ರಶ್ನೆಗೆ ಲಿಖಿತ ಉತ್ತರದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್ ಮಾಹಿತಿ ನೀಡಿದರು. ಪ್ರಸ್ತುತ, ರಬ್ಬರ್‌ ಧಾರಣೆ ಏರಿಕೆಯ ಯಾವುದೇ ಪ್ರಸ್ತಾಪವು ಪರಿಗಣನೆಯಲ್ಲಿಲ್ಲ ಎಂದು ಸಚಿವರು ಹೇಳಿದರು.

ಕೇರಳದ ರಬ್ಬರ್ ರೈತರನ್ನು ಬೆಂಬಲಿಸಲು ಕೇರಳವು ಹಣಕಾಸಿನ ನೆರವು ಕೋರಿದೆಯೇ ಎಂದು ಸಂಸದರು ಕೇಳಿದ್ದರು. ಇದಕ್ಕೆ ಉತ್ತರವಾಗಿ ಪಟೇಲ್, ವಾಣಿಜ್ಯ ಇಲಾಖೆಯ ಅಡಿಯಲ್ಲಿ ರಬ್ಬರ್ ಮಂಡಳಿಯು ತನ್ನ ವಿವಿಧ ಯೋಜನೆಗಳ ಅಡಿಯಲ್ಲಿ ಹೊಸ ಗಿಡನೆಡುವಿಕೆ ಮತ್ತು ಮರು ನೆಡುವಿಕೆಗೆ ಸಬ್ಸಿಡಿಯನ್ನು ಒದಗಿಸುತ್ತದೆ. ರಬ್ಬರ್ ಬೋರ್ಡ್ ರಬ್ಬರ್ ಮರಗಳನ್ನು ಟ್ಯಾಪಿಂಗ್ ಮಾಡಲು ಮತ್ತು ಶೀಟ್ ರಬ್ಬರ್‌ಗೆ ಸಂಸ್ಕರಿಸಲು ತರಬೇತಿಯನ್ನು ಸಹ ನೀಡುತ್ತದೆ. ರಬ್ಬರ್ ಮಂಡಳಿಯು ಉತ್ಪಾದಕತೆಯನ್ನು ಸುಧಾರಿಸಲು ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ, ಉದಾಹರಣೆಗೆ ಟ್ಯಾಪಿಂಗ್ ದಿನಗಳ ಸಂಖ್ಯೆಯನ್ನು ಹೆಚ್ಚಿಸಲು ಮಳೆ ರಕ್ಷಣೆಗೆ ಪ್ಲಾಸ್ಟಿಕ್‌ ಒದಗಿಸುವುದು, ರೋಗಗಳನ್ನು ತಡೆಗಟ್ಟುವುದು ಇತ್ಯಾದಿಗಳನ್ನು ಮಾಡಲಾಗಿದೆ ಎಂದರು.

ರಬ್ಬರ್ ಆಮದನ್ನು ನಿಯಂತ್ರಿಸುವ ಕ್ರಮಗಳ ಬಗ್ಗೆ ಸಂಸದರು ಕೇಳಿರುವ ಪ್ರಶ್ನೆಗೆ ಮಾಹಿತಿ ನೀಡಿದ ಸಚಿವರು, ಸರ್ಕಾರವು 30.04.2015 ರಿಂದ ರಬ್ಬರ್ ಆಮದಿನ ಮೇಲಿನ ಸುಂಕವನ್ನು ಬದಲು ಮಾಡಿದೆ. ರಬ್ಬರ್‌ ಆಮದು ಮಾಡಿಕೊಳ್ಳಲು ಬಂದರು ಪ್ರವೇಶವನ್ನು ಚೆನ್ನೈ ಮತ್ತು ಜವಾಹರಲಾಲ್ ನೆಹರು  ಬಂದರುಗಳಿಗೆ ನಿರ್ಬಂಧಿಸಲಾಗಿದೆ . ಇದಲ್ಲದೆ, 2023-24ರ ಕೇಂದ್ರ ಬಜೆಟ್‌ನಲ್ಲಿ, ಸಂಯುಕ್ತ ರಬ್ಬರ್ ಮೇಲಿನ ಕಸ್ಟಮ್ ಸುಂಕದ ದರವನ್ನು 10% ರಿಂದ 25% ಕ್ಕೆ ಹೆಚ್ಚಿಸಲಾಗಿದೆ. ಬೇರೆ ಯಾವುದೇ ಪ್ರಸ್ತಾವನೆಗಳು ಪರಿಗಣನೆಯಲ್ಲಿಲ್ಲ, ಎಂದು ಉತ್ತರದಲ್ಲಿ ತಿಳಿಸಿದ್ದಾರೆ.

ರಬ್ಬರ್ ದರವನ್ನು ಕೆಜಿಗೆ 300 ರೂ.ಗೆ ಹೆಚ್ಚಿಸಿದರೆ ಕೇರಳದಿಂದ ಬಿಜೆಪಿಗೆ ಲೋಕಸಭಾ ಸದಸ್ಯ ಸಿಗುತ್ತದೆ ಎಂದು ಈಚೆಗೆ ಕೇರಳದ ಬಿಷಪ್‌ ಒಬ್ಬರು ಹೇಳಿದ್ದರು. ಈ ಸುದ್ದಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಹೀಗಾಗಿ ಇದೀಗ ಈ ಪ್ರಶ್ನೆಯೂ ಮುನ್ನೆಲೆಗೆ ಬಂದಿದೆ. ಇದೀಗ 300 ರೂಪಾಯಿಗೆ ದರ ಏರಿಕೆಗೆ ಯಾವುದೇ ಪ್ರಸ್ತಾಪ ಇಲ್ಲ ಎನ್ನುವ ಮೂಲಕ ಈ ಚರ್ಚೆಗೆ ತೆರೆ ಬಿದ್ದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

26 minutes ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

9 hours ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

14 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

1 day ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

1 day ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

1 day ago