ಪಠ್ಯಪುಸ್ತಕ ಪರಿಷ್ಕರಣೆ ವಿಚಾರ ನೂತನ ಸರ್ಕಾರದಲ್ಲಿ ಮತ್ತೆ ಮುನ್ನೆಲೆಗೆ ಬಂದಿದೆ. ಕಳೆದ ವರ್ಷ ಬಿಜೆಪಿ ಸರ್ಕಾರ ತಯಾರಿಸಿದ್ದ ಪಠ್ಯಪುಸ್ತಕದ ಕೆಲವೊಂದು ವಿಷಯಗಳಿಗೆ ಭಾರಿ ವಿರೋಧ ವ್ಯಕ್ತಪಡಿಸಿತ್ತು. ಅಲ್ಲದೆ ತಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಇದನ್ನು ಬದಲಿಸುವುದಾಗಿ ಹೇಳಿತ್ತು. ಅದರಂಂತೆ ಈಗ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ವಿವಾದಿತ ಪಠ್ಯಗಳ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸಂಪೂರ್ಣ ಪಠ್ಯ ಪರಿಷ್ಕರಣೆ ಇಲ್ಲ ಎಂದು ಶಿಕ್ಷಣ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಮೌಖಿಕ ಸೂಚನೆ ನೀಡಿದ್ದಾರೆ.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಜೊತೆ ಸಿಎಂ ಮಂಗಳವಾರ ಈ ಬಗ್ಗೆ ಕೆಲಕಾಲ ಚರ್ಚೆ ನಡೆಸಿದ್ದಾರೆ. ಹೀಗಾಗಿ ಕೆಲವು ವಿವಾದಿತ ಪಠ್ಯಗಳನ್ನು ಈ ಸಾಲಿನಲ್ಲಿ ಬೋಧನೆಯಿಂದ ಕೈಬಿಡುವುದು ಬಹುತೇಕ ಫಿಕ್ಸ್ ಎನ್ನಲಾಗಿದೆ.
ಈ ಶೈಕ್ಷಣಿಕ ವರ್ಷದಲ್ಲಿ ಕೆಲ ವಿವಾದಿತ ಪಠ್ಯಗಳನ್ನು ಪಟ್ಟಿ ಮಾಡಿ ಸಲ್ಲಿಸಿ. ಸಾಹಿತ್ಯ ಮತ್ತು ಸಾಂಸ್ಕಂತಿಕ ವಲಯ ಆಕ್ಷೇಪಿಸಿರುವ ಕೆಲ ಪಠ್ಯಗಳ ಪಟ್ಟಿ ಮಾಡುವಂತೆ ಸಿಎಂ ಸೂಚನೆ ನೀಡಿದ್ದಾರೆ. ಹೀಗಾಗಿ ಅಂತಹ ಕೆಲ ಪಠ್ಯಗಳನ್ನು ಮಕ್ಕಳಿಗೆ ಬೋಧನೆ ಮಾಡದಿರಲು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಒಟ್ಟಿನಲ್ಲಿ ಶಿಕ್ಷಣ ಇಲಾಖೆಯಿಂದ ವಿವಾದಿತ ಪಠ್ಯಗಳ ಪಟ್ಟಿ ಬಂದ ಬಳಿಕ ಸರ್ಕಾರ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ. ಸರ್ಕಾರದ ತೀರ್ಮಾನದ ಬಳಿಕ ವಿವಾದಿತ ಪಠ್ಯಗಳನ್ನು ಬೋಧಿಸದಂತೆ ಶಿಕ್ಷಣ ಇಲಾಖೆಯು ಶಾಲೆಗಳಿಗೆ ಸುತ್ತೋಲೆ ಹೊರಡಿಸಲಿದೆ.
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…