ಪಠ್ಯಪುಸ್ತಕ ಪರಿಷ್ಕರಣೆ ವಿಚಾರ ನೂತನ ಸರ್ಕಾರದಲ್ಲಿ ಮತ್ತೆ ಮುನ್ನೆಲೆಗೆ ಬಂದಿದೆ. ಕಳೆದ ವರ್ಷ ಬಿಜೆಪಿ ಸರ್ಕಾರ ತಯಾರಿಸಿದ್ದ ಪಠ್ಯಪುಸ್ತಕದ ಕೆಲವೊಂದು ವಿಷಯಗಳಿಗೆ ಭಾರಿ ವಿರೋಧ ವ್ಯಕ್ತಪಡಿಸಿತ್ತು. ಅಲ್ಲದೆ ತಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಇದನ್ನು ಬದಲಿಸುವುದಾಗಿ ಹೇಳಿತ್ತು. ಅದರಂಂತೆ ಈಗ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ವಿವಾದಿತ ಪಠ್ಯಗಳ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸಂಪೂರ್ಣ ಪಠ್ಯ ಪರಿಷ್ಕರಣೆ ಇಲ್ಲ ಎಂದು ಶಿಕ್ಷಣ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಮೌಖಿಕ ಸೂಚನೆ ನೀಡಿದ್ದಾರೆ.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಜೊತೆ ಸಿಎಂ ಮಂಗಳವಾರ ಈ ಬಗ್ಗೆ ಕೆಲಕಾಲ ಚರ್ಚೆ ನಡೆಸಿದ್ದಾರೆ. ಹೀಗಾಗಿ ಕೆಲವು ವಿವಾದಿತ ಪಠ್ಯಗಳನ್ನು ಈ ಸಾಲಿನಲ್ಲಿ ಬೋಧನೆಯಿಂದ ಕೈಬಿಡುವುದು ಬಹುತೇಕ ಫಿಕ್ಸ್ ಎನ್ನಲಾಗಿದೆ.
ಈ ಶೈಕ್ಷಣಿಕ ವರ್ಷದಲ್ಲಿ ಕೆಲ ವಿವಾದಿತ ಪಠ್ಯಗಳನ್ನು ಪಟ್ಟಿ ಮಾಡಿ ಸಲ್ಲಿಸಿ. ಸಾಹಿತ್ಯ ಮತ್ತು ಸಾಂಸ್ಕಂತಿಕ ವಲಯ ಆಕ್ಷೇಪಿಸಿರುವ ಕೆಲ ಪಠ್ಯಗಳ ಪಟ್ಟಿ ಮಾಡುವಂತೆ ಸಿಎಂ ಸೂಚನೆ ನೀಡಿದ್ದಾರೆ. ಹೀಗಾಗಿ ಅಂತಹ ಕೆಲ ಪಠ್ಯಗಳನ್ನು ಮಕ್ಕಳಿಗೆ ಬೋಧನೆ ಮಾಡದಿರಲು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಒಟ್ಟಿನಲ್ಲಿ ಶಿಕ್ಷಣ ಇಲಾಖೆಯಿಂದ ವಿವಾದಿತ ಪಠ್ಯಗಳ ಪಟ್ಟಿ ಬಂದ ಬಳಿಕ ಸರ್ಕಾರ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ. ಸರ್ಕಾರದ ತೀರ್ಮಾನದ ಬಳಿಕ ವಿವಾದಿತ ಪಠ್ಯಗಳನ್ನು ಬೋಧಿಸದಂತೆ ಶಿಕ್ಷಣ ಇಲಾಖೆಯು ಶಾಲೆಗಳಿಗೆ ಸುತ್ತೋಲೆ ಹೊರಡಿಸಲಿದೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…