Advertisement
ಸುದ್ದಿಗಳು

ಅಡಿಕೆ ಬೆಳೆಗೆ ಕೇಂದ್ರ ಸರ್ಕಾರದಿಂದ ಸಹಾಯ ಇಲ್ಲ.. ? | ಅಚ್ಚರಿ ಮೂಡಿಸಿದ ಮೇಘಾಲಯ ಕೃಷಿ ಸಚಿವರ ಹೇಳಿಕೆ |

Share

ಅಡಿಕೆಯ ಬಗ್ಗೆ , ಅಡಿಕೆ ಬೆಳೆಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿದ್ದಂತೆಯೇ ಇದೀಗ ಮೇಘಾಲಯ ಕೃಷಿ ಸಚಿವ ಬಾಂಟೆಡೋರ್ ಲಿಂಗ್ಡೋಹ್ ಅವರು ಅಡಿಕೆಯಿಂದ ಆರೋಗ್ಯದ ಮೇಲೆ ಅಪಾಯದ ಕಾರಣ ಮುಂದಿರಿಸಿ ಭಾರತ ಸರ್ಕಾರವು ಇನ್ನು ಮುಂದೆ ಅಡಿಕೆಗೆ ಸಂಬಂಧಿಸಿದ ಯಾವುದೇ ಯೋಜನೆಗಳನ್ನು ಅನುಮೋದಿಸುವುದಿಲ್ಲ ಎಂದು ನೀಡಿರುವ ಹೇಳಿಕೆ ಇದೀಗ ಅಚ್ಚರಿಗೆ ಕಾರಣವಾಗಿದೆ.

ಅಡಿಕೆ ಆರೋಗ್ಯಕ್ಕೆ ಹಾನಿಕಾರಕ ಎಂದು ಕಳೆದ ಹಲವು ಸಮಯಗಳಿಂದ ಆಗಾಗ ವರದಿಗಳು ಕಂಡುಬರುತ್ತಿದ್ದವು. ಅಂತರಾಷ್ಟ್ರೀಯ ಮಟ್ಟದಲ್ಲಿ ಅಡಿಕೆಯ ಗುಣಲಕ್ಷಣಗಳ ಬಗ್ಗೆ ಅಧ್ಯಯನಗಳು ನಡೆದು ಋಣಾತ್ಮಕ ವರದಿಗಳೇ ಹೆಚ್ಚಾಗಿ ಪ್ರಕಟವಾಗುತ್ತಿದ್ದವು. ಭಾರತದಲ್ಲೂ ಅಂತಹದ್ದೇ ವರದಿಗಳು ಆಗಾಗ ಬರುತ್ತಿರುವ ಬೆನ್ನಲ್ಲೇ ಇದೀಗ ಮೇಘಾಲಯದ ಕೃಷಿ ಸಚಿವ ಬಾಂಟೆಡೋರ್ ಲಿಂಗ್ಡೋಹ್ ಅವರು ಆರೋಗ್ಯದ ಮೇಲಿನ ಅಪಾಯಗಳನ್ನು ಗುರುತಿಸಿ ಅಡಿಕೆಗಾಗಿ ಮಿಷನ್ ಫಾರ್ ಇಂಟಿಗ್ರೇಟೆಡ್ ಡೆವಲಪ್‌ಮೆಂಟ್ ಆಫ್ ಹಾರ್ಟಿಕಲ್ಚರ್ (MIDH)  ಅಡಿಯಲ್ಲಿ ಭಾರತ ಸರ್ಕಾರವು ಇನ್ನು ಮುಂದೆ ಯೋಜನೆಗಳನ್ನು ಅನುಮೋದಿಸುವುದಿಲ್ಲ ಎಂದು ಬಹಿರಂಗಪಡಿಸಿದ್ದಾರೆ. ಮೇಘಾಲಯ ಸರ್ಕಾರದ ಬಜೆಟ್ ಅಧಿವೇಶನದ ಸಂದರ್ಭ ಈ ಹೇಳಿಕೆಯನ್ನು ಸದನದಲ್ಲಿ ನೀಡಿರುವುದು  ಅಚ್ಚರಿ ಮೂಡಿಸಿದೆ. ಈ ಬಗ್ಗೆ ಮೇಘಾಲಯದ ದಿ ಶಿಲ್ಲಾಂಗ್‌ ಟೈಮ್ಸ್‌ ವರದಿ ಮಾಡಿದೆ.

ಈ ಬಗ್ಗೆ ಇನ್ನೂ ಮುಂದುವರಿಸಿ ಹೇಳಿದ ಮೇಘಾಲಯ ಕೃಷಿ ಸಚಿವ ಬಾಂಟೆಡೋರ್ ಲಿಂಗ್ಡೋಹ್, ಕೇಂದ್ರವು ಮಾರುಕಟ್ಟೆ ಮತ್ತು ತಪಾಸಣೆ ನಿರ್ದೇಶನಾಲಯದ ಅಡಿಯಲ್ಲಿನ  ಸರಕು ಪಟ್ಟಿಯ ಡ್ರಗ್ಸ್ ಮತ್ತು ನಾರ್ಕೋಟಿಕ್ಸ್ ವಿಭಾಗದ ಅಡಿಯಲ್ಲಿ ಅಡಿಕೆಯನ್ನು ಗುರುತಿಸಿದೆ ಎಂದೂ ಹೇಳಿರುವ ಬಗ್ಗೆ ಮೇಘಾಲಯ ಮಾಧ್ಯಮ ವರದಿ ಮಾಡಿದೆ.

ಮೇಘಾಲಯದಲ್ಲಿ ಕೂಡಾ ಅಡಿಕೆಯನ್ನು ಬೆಳೆಯುವ ಕೃಷಿಕರು ಇದ್ದಾರೆ. ಈ ಕಾರಣದಿಂದ ಮೇಘಾಲಯ ಸರ್ಕಾರವು ಈ ಬೆಳೆಗಾರರಿಗೆ ನೆರವು ನೀಡುತ್ತದೆ. ಅಡಿಕೆಯನ್ನು ಪ್ರಸ್ತುತ ಮೇಘಾಲಯ ರಾಜ್ಯವು ಕೃಷಿ ಉತ್ಪನ್ನ ಎಂದು ಪಟ್ಟಿ ಮಾಡಿದೆ ಎಂದು ಹೇಳಿದರು.

ಮೇಘಾಲಯದ ಅಡಿಕೆ ಕೃಷಿಯು ಮಳೆಯಿಂದ ಸುಳಿಕೊಳೆಯ ರೋಗಕ್ಕೆ ತುತ್ತಾಗಿರುವುದು  ಹಾಗೂ ಇತರ ರೋಗಗಳಿಂದ ಕೃಷಿಕರು ಸಂಕಷ್ಟ ಅನುಭವಿಸುತ್ತಿರುವ ಬಗ್ಗೆ ಬಂದಿರುವ ಪ್ರಶ್ನೆಗೆ ಕೃಷಿ ಸಚಿವರು ಉತ್ತರಿಸಿದ್ದರು. ಮಾಹಿತಿ ಪ್ರಕಾರ ಮೇಘಾಲಯದ  43 ಹಳ್ಳಿಗಳ ಸುಮಾರು 298.4 ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆ ಹಾನಿಗೊಳಗಾಗಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

14 hours ago

ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ

ಬಿದದಿ ಎಐ ಟೌನ್‌ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…

14 hours ago

ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ

ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…

20 hours ago

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

2 days ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

2 days ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

2 days ago