ಮದರಸಾಗಳಲ್ಲಿ 1 ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ನಿರ್ಬಂಧ

November 28, 2022
6:17 PM

ಉತ್ತರ ಪ್ರದೇಶದ ಮದರಸಾಗಳಲ್ಲಿ 1 ರಿಂದ 8 ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದನ್ನು ಕೇಂದ್ರ ಸರ್ಕಾರ ನಿರ್ಬಂಧಿಸಿದೆ. ಪ್ರತಿ ಶೈಕ್ಷಣಿಕ ವರ್ಷ ನೀಡಲಾಗುತ್ತಿದ್ದ ಸ್ಕಾಲರ್‌ಶಿಪ್‌ ಗೆ ಈ ಬಾರಿ ತಡೆ ಹಾಕಿದೆ.

Advertisement
Advertisement
Advertisement
Advertisement

ಈವರೆಗೂ 1 ರಿಂದ 5 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ 1,000 ರೂ. ಶಿಷ್ಯವೇತನವನ್ನು ನೀಡಲಾಗುತ್ತಿತ್ತು. 6 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ವಿವಿಧ ಕೋರ್ಸ್‍ಗಳ ಆಧಾರದ ಮೇಲೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿತ್ತು.

Advertisement

ಕೇಂದ್ರ ಸರ್ಕಾರದ ಪ್ರಕಾರ, ಶಿಕ್ಷಣ ಹಕ್ಕು ಕಾಯ್ದೆಯಡಿ 1 ರಿಂದ 8 ನೇ ತರಗತಿವರೆಗೆ ಶಿಕ್ಷಣವನ್ನು ಉಚಿತವಾಗಿ ನೀಡಲಾಗುತ್ತದೆ. ಮದರಸಾಗಳಲ್ಲಿ ಮಧ್ಯಾಹ್ನದ ಊಟ ಮತ್ತು ಪುಸ್ತಕಗಳನ್ನು ಕೂಡ ಉಚಿತವಾಗಿ ನೀಡಲಾಗುತ್ತಿದೆ. ಇದರೊಂದಿಗೆ ವಿದ್ಯಾರ್ಥಿಗಳಿಗೆ ಇತರ ಅಗತ್ಯ ವಸ್ತುಗಳನ್ನು ಸಹ ನೀಡಲಾಗುತ್ತದೆ. ಹೀಗಾಗಿ ವಿದ್ಯಾರ್ಥಿ ವೇತನವನ್ನು ನಿಲ್ಲಿಸಲಾಗಿದೆ ಎಂದು ಸ್ಪಷ್ಟನೆ ನೀಡಲಾಗಿದೆ.

ಆದ್ದರಿಂದ 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾತ್ರ ವಿದ್ಯಾರ್ಥಿವೇತನವನ್ನು ನೀಡಲಾಗುವುದು ಮತ್ತು ಅವರ ಅರ್ಜಿಗಳನ್ನು ರವಾನಿಸಬೇಕು ಎಂದು ಆದೇಶದಲ್ಲಿ ತಿಳಿಸಿದೆ. ಕಳೆದ ವರ್ಷ ಸುಮಾರು 5 ಲಕ್ಷ ಮಕ್ಕಳು ಸ್ಕಾಲರ್ ಶಿಪ್ ಪಡೆದುಕೊಂಡಿದ್ದರು. ಈ ಪೈಕಿ 16,558 ಮದರಸಾ ವಿದ್ಯಾರ್ಥಿಗಳು ಫಲಾನುಭವಿಗಳಾಗಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ
February 25, 2025
7:20 AM
by: ದ ರೂರಲ್ ಮಿರರ್.ಕಾಂ
ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ
February 25, 2025
7:10 AM
by: The Rural Mirror ಸುದ್ದಿಜಾಲ
ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು
February 25, 2025
7:05 AM
by: The Rural Mirror ಸುದ್ದಿಜಾಲ
ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |
February 24, 2025
10:54 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror