Advertisement
ಸುದ್ದಿಗಳು

ಮದರಸಾಗಳಲ್ಲಿ 1 ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ನಿರ್ಬಂಧ

Share

ಉತ್ತರ ಪ್ರದೇಶದ ಮದರಸಾಗಳಲ್ಲಿ 1 ರಿಂದ 8 ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದನ್ನು ಕೇಂದ್ರ ಸರ್ಕಾರ ನಿರ್ಬಂಧಿಸಿದೆ. ಪ್ರತಿ ಶೈಕ್ಷಣಿಕ ವರ್ಷ ನೀಡಲಾಗುತ್ತಿದ್ದ ಸ್ಕಾಲರ್‌ಶಿಪ್‌ ಗೆ ಈ ಬಾರಿ ತಡೆ ಹಾಕಿದೆ.

ಈವರೆಗೂ 1 ರಿಂದ 5 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ 1,000 ರೂ. ಶಿಷ್ಯವೇತನವನ್ನು ನೀಡಲಾಗುತ್ತಿತ್ತು. 6 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ವಿವಿಧ ಕೋರ್ಸ್‍ಗಳ ಆಧಾರದ ಮೇಲೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿತ್ತು.

ಕೇಂದ್ರ ಸರ್ಕಾರದ ಪ್ರಕಾರ, ಶಿಕ್ಷಣ ಹಕ್ಕು ಕಾಯ್ದೆಯಡಿ 1 ರಿಂದ 8 ನೇ ತರಗತಿವರೆಗೆ ಶಿಕ್ಷಣವನ್ನು ಉಚಿತವಾಗಿ ನೀಡಲಾಗುತ್ತದೆ. ಮದರಸಾಗಳಲ್ಲಿ ಮಧ್ಯಾಹ್ನದ ಊಟ ಮತ್ತು ಪುಸ್ತಕಗಳನ್ನು ಕೂಡ ಉಚಿತವಾಗಿ ನೀಡಲಾಗುತ್ತಿದೆ. ಇದರೊಂದಿಗೆ ವಿದ್ಯಾರ್ಥಿಗಳಿಗೆ ಇತರ ಅಗತ್ಯ ವಸ್ತುಗಳನ್ನು ಸಹ ನೀಡಲಾಗುತ್ತದೆ. ಹೀಗಾಗಿ ವಿದ್ಯಾರ್ಥಿ ವೇತನವನ್ನು ನಿಲ್ಲಿಸಲಾಗಿದೆ ಎಂದು ಸ್ಪಷ್ಟನೆ ನೀಡಲಾಗಿದೆ.

ಆದ್ದರಿಂದ 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾತ್ರ ವಿದ್ಯಾರ್ಥಿವೇತನವನ್ನು ನೀಡಲಾಗುವುದು ಮತ್ತು ಅವರ ಅರ್ಜಿಗಳನ್ನು ರವಾನಿಸಬೇಕು ಎಂದು ಆದೇಶದಲ್ಲಿ ತಿಳಿಸಿದೆ. ಕಳೆದ ವರ್ಷ ಸುಮಾರು 5 ಲಕ್ಷ ಮಕ್ಕಳು ಸ್ಕಾಲರ್ ಶಿಪ್ ಪಡೆದುಕೊಂಡಿದ್ದರು. ಈ ಪೈಕಿ 16,558 ಮದರಸಾ ವಿದ್ಯಾರ್ಥಿಗಳು ಫಲಾನುಭವಿಗಳಾಗಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

16 hours ago

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

18 hours ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

19 hours ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

22 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

23 hours ago