ಉತ್ತರ ಪ್ರದೇಶದ ಮದರಸಾಗಳಲ್ಲಿ 1 ರಿಂದ 8 ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದನ್ನು ಕೇಂದ್ರ ಸರ್ಕಾರ ನಿರ್ಬಂಧಿಸಿದೆ. ಪ್ರತಿ ಶೈಕ್ಷಣಿಕ ವರ್ಷ ನೀಡಲಾಗುತ್ತಿದ್ದ ಸ್ಕಾಲರ್ಶಿಪ್ ಗೆ ಈ ಬಾರಿ ತಡೆ ಹಾಕಿದೆ.
ಈವರೆಗೂ 1 ರಿಂದ 5 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ 1,000 ರೂ. ಶಿಷ್ಯವೇತನವನ್ನು ನೀಡಲಾಗುತ್ತಿತ್ತು. 6 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ವಿವಿಧ ಕೋರ್ಸ್ಗಳ ಆಧಾರದ ಮೇಲೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿತ್ತು.
ಕೇಂದ್ರ ಸರ್ಕಾರದ ಪ್ರಕಾರ, ಶಿಕ್ಷಣ ಹಕ್ಕು ಕಾಯ್ದೆಯಡಿ 1 ರಿಂದ 8 ನೇ ತರಗತಿವರೆಗೆ ಶಿಕ್ಷಣವನ್ನು ಉಚಿತವಾಗಿ ನೀಡಲಾಗುತ್ತದೆ. ಮದರಸಾಗಳಲ್ಲಿ ಮಧ್ಯಾಹ್ನದ ಊಟ ಮತ್ತು ಪುಸ್ತಕಗಳನ್ನು ಕೂಡ ಉಚಿತವಾಗಿ ನೀಡಲಾಗುತ್ತಿದೆ. ಇದರೊಂದಿಗೆ ವಿದ್ಯಾರ್ಥಿಗಳಿಗೆ ಇತರ ಅಗತ್ಯ ವಸ್ತುಗಳನ್ನು ಸಹ ನೀಡಲಾಗುತ್ತದೆ. ಹೀಗಾಗಿ ವಿದ್ಯಾರ್ಥಿ ವೇತನವನ್ನು ನಿಲ್ಲಿಸಲಾಗಿದೆ ಎಂದು ಸ್ಪಷ್ಟನೆ ನೀಡಲಾಗಿದೆ.
ಆದ್ದರಿಂದ 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾತ್ರ ವಿದ್ಯಾರ್ಥಿವೇತನವನ್ನು ನೀಡಲಾಗುವುದು ಮತ್ತು ಅವರ ಅರ್ಜಿಗಳನ್ನು ರವಾನಿಸಬೇಕು ಎಂದು ಆದೇಶದಲ್ಲಿ ತಿಳಿಸಿದೆ. ಕಳೆದ ವರ್ಷ ಸುಮಾರು 5 ಲಕ್ಷ ಮಕ್ಕಳು ಸ್ಕಾಲರ್ ಶಿಪ್ ಪಡೆದುಕೊಂಡಿದ್ದರು. ಈ ಪೈಕಿ 16,558 ಮದರಸಾ ವಿದ್ಯಾರ್ಥಿಗಳು ಫಲಾನುಭವಿಗಳಾಗಿದ್ದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…