ಉತ್ತರ ಪ್ರದೇಶದ ಮದರಸಾಗಳಲ್ಲಿ 1 ರಿಂದ 8 ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದನ್ನು ಕೇಂದ್ರ ಸರ್ಕಾರ ನಿರ್ಬಂಧಿಸಿದೆ. ಪ್ರತಿ ಶೈಕ್ಷಣಿಕ ವರ್ಷ ನೀಡಲಾಗುತ್ತಿದ್ದ ಸ್ಕಾಲರ್ಶಿಪ್ ಗೆ ಈ ಬಾರಿ ತಡೆ ಹಾಕಿದೆ.
ಈವರೆಗೂ 1 ರಿಂದ 5 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ 1,000 ರೂ. ಶಿಷ್ಯವೇತನವನ್ನು ನೀಡಲಾಗುತ್ತಿತ್ತು. 6 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ವಿವಿಧ ಕೋರ್ಸ್ಗಳ ಆಧಾರದ ಮೇಲೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿತ್ತು.
ಕೇಂದ್ರ ಸರ್ಕಾರದ ಪ್ರಕಾರ, ಶಿಕ್ಷಣ ಹಕ್ಕು ಕಾಯ್ದೆಯಡಿ 1 ರಿಂದ 8 ನೇ ತರಗತಿವರೆಗೆ ಶಿಕ್ಷಣವನ್ನು ಉಚಿತವಾಗಿ ನೀಡಲಾಗುತ್ತದೆ. ಮದರಸಾಗಳಲ್ಲಿ ಮಧ್ಯಾಹ್ನದ ಊಟ ಮತ್ತು ಪುಸ್ತಕಗಳನ್ನು ಕೂಡ ಉಚಿತವಾಗಿ ನೀಡಲಾಗುತ್ತಿದೆ. ಇದರೊಂದಿಗೆ ವಿದ್ಯಾರ್ಥಿಗಳಿಗೆ ಇತರ ಅಗತ್ಯ ವಸ್ತುಗಳನ್ನು ಸಹ ನೀಡಲಾಗುತ್ತದೆ. ಹೀಗಾಗಿ ವಿದ್ಯಾರ್ಥಿ ವೇತನವನ್ನು ನಿಲ್ಲಿಸಲಾಗಿದೆ ಎಂದು ಸ್ಪಷ್ಟನೆ ನೀಡಲಾಗಿದೆ.
ಆದ್ದರಿಂದ 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾತ್ರ ವಿದ್ಯಾರ್ಥಿವೇತನವನ್ನು ನೀಡಲಾಗುವುದು ಮತ್ತು ಅವರ ಅರ್ಜಿಗಳನ್ನು ರವಾನಿಸಬೇಕು ಎಂದು ಆದೇಶದಲ್ಲಿ ತಿಳಿಸಿದೆ. ಕಳೆದ ವರ್ಷ ಸುಮಾರು 5 ಲಕ್ಷ ಮಕ್ಕಳು ಸ್ಕಾಲರ್ ಶಿಪ್ ಪಡೆದುಕೊಂಡಿದ್ದರು. ಈ ಪೈಕಿ 16,558 ಮದರಸಾ ವಿದ್ಯಾರ್ಥಿಗಳು ಫಲಾನುಭವಿಗಳಾಗಿದ್ದರು.
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…