Advertisement
MIRROR FOCUS

#Karnataka Bandh | ಕರ್ನಾಟಕ ಬಂದ್‌ಗೆ ಮಂಗಳೂರಲ್ಲಿ ಬೆಂಬಲ ಇಲ್ಲ| ಎತ್ತಿನಹೊಳೆ ಹೋರಾಟಕ್ಕೆ ಬೆಂಬಲಿಸಿಲ್ಲ | ದಿಲ್‌ರಾಜ್ ಆಳ್ವ

Share

ಕನ್ನಡ ನಾಡು, ನುಡಿ, ನೆಲ, ಜಲ, ಅಂತ ಬಂದಾಗ ರಾಜ್ಯದ ಎಲ್ಲಾರೂ ಒಂದೇ. ಆದರೆ ನೀರಿನ ವಿಚಾರ ಬಂದಾಗ ಇದು ಯಾವ ಭಾಗಕ್ಕೆ ಸಂಬಂಧಿಸಿದೆಯೋ ಆ ಭಾಗದವರು ಮಾತ್ರ ಅದಕ್ಕಾಗಿ ಹೋರಾಡುವ ಸ್ಥಿತಿ ಈಗ ರಾಜ್ಯದಲ್ಲಿ ನಿರ್ಮಾಣವಾಗಿದೆ. ಕಾವೇರಿ ಹೋರಾಟಕ್ಕೆ ಕರಾವಳಿ ಬಸ್‌ ಮಾಲಿಕರ ಸಂಘ ಬೆಂಬಲ ನೀಡುವುದಿಲ್ಲ ಎಂದು ಹೇಳಿದೆ. ಕಾರಣ ನಮ್ಮ ನೇತ್ರಾವತಿ ಹೋರಾಟದಲ್ಲಿ ಕನ್ನಡಪರ ಸಂಘಟನೆಗಳು ಬೆಂಬಲ ಸೂಚಿಸಿಲ್ಲ.

Advertisement

ಕಾವೇರಿ ನದಿ ನೀರಿನ ಹೋರಾಟ ದಿನದಿಂದ ದಿನಕ್ಕೆ ಕಾವು ಪಡೆಯುತ್ತಿದೆ. ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ರೈತಪರ ಸಂಘಟನೆಗಳು(Farmers Organisation), ಕನ್ನಡಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳಿಂದ ಹೋರಾಟ ತೀವ್ರಗೊಂಡಿದೆ. ಈ ಮಧ್ಯೆ ನಾಳೆ ಕರ್ನಾಟಕ ಬಂದ್‌ಗೆ ಕೂಡ ಕರೆ ನೀಡಲಾಗಿದೆ. ಹಿರಿಯ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಾಳೆ ವಿವಿಧ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದು, ಆ ಮೂಲಕ ಕಾವೇರಿ ಪರ ಹೋರಾಟ ಮತ್ತೊಂದು ಹಂತಕ್ಕೆ ತೆಗೆದುಕೊಂಡು ಹೋಗಲು ನಿರ್ಧರಿಸಿದ್ದಾರೆ. ನಾಳೆ ನಡೆಯಲಿರುವ ಕರ್ನಾಟಕ ಬಂದ್‌ಗೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಬೆಂಬಲ ವ್ಯಕ್ತವಾಗಿದ್ದು, ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಬಂದ್‌ ಮಾಡಿ ಜನರು ಕಾವೇರಿ ಹೋರಾಟಕ್ಕೆ ಬೆಂಬಲ ಸೂಚಿಸಲಿದ್ದಾರೆ.

ಸಾಮಾನ್ಯವಾಗಿ ಈ ಹಿಂದಿನ ಅನೇಕ ದಶಕಗಳ ಬೆಳವಣಿಗೆಗಳನ್ನು ಗಮನಿಸಿದಾಗ ಕರ್ನಾಟಕದ ನೆಲ ಜಲ ಪರ ಹೋರಾಟಗಳಿಗೆ ಕರಾವಳಿ ಭಾಗದಲ್ಲಿ ಬೆಂಬಲ ವ್ಯಕ್ತವಾಗೋದು ಕಡಿಮೆ. ಕಾವೇರಿ ಪರ ಹೋರಾಟ, ಕನ್ನಡ ಪರ ಹೋರಾಟ, ಮೇಕೆದಾಟು, ಸೇರಿದಂತೆ ನೆಲ ಜಲ ಭಾಷೆಗೆ ಸಂಬಂಧಿಸಿದ ಕರ್ನಾಟಕದ ಹೋರಾಟಗಳಿಗೆ ಕರಾವಳಿ ಭಾಗ ಅರ್ಥಾತ್ ತುಳುನಾಡಿನಲ್ಲಿ ಬೆಂಬಲ ವ್ಯಕ್ತವಾಗೋದಿಲ್ಲ. ಅದರ ಜೊತೆಗೆ ತುಳುನಾಡು ಪರ ಹೋರಾಟಗಳಿಗೂ ಕೂಡ ಕರಾವಳಿ ಹೊರತುಪಡಿಸಿ ಇತರ ಭಾಗದಲ್ಲಿ ಬೆಂಬಲ ವ್ಯಕ್ತವಾಗೋದು ಕಡಿಮೆ. ಉದಾಃ ತುಳು ಭಾಷೆ, ಎತ್ತಿನಹೊಳೆ ಹೋರಾಟ, ಕಂಬಳ ಸೇರಿದಂತೆ ಇತರ ಹೋರಾಟಗಳಿಗೆ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಬಿಟ್ಟರೆ ಕರ್ನಾಟಕದ ಬೇರೆ ಭಾಗದಿಂದ ಹೇಳಿಕೊಳ್ಳುವಂತಹ ಮಟ್ಟಿಗೆ ಬೆಂಬಲ ವ್ಯಕ್ತವಾದ ಉದಾಹರಣೆ ಇಲ್ಲ.  ಇದೀಗ ಈ ಬಾರಿಯ ಕಾವೇರಿ ಪರ ಹೋರಾಟದಲ್ಲೂ ಕರಾವಳಿಯಲ್ಲಿ ಬೆಂಬಲ ವ್ಯಕ್ತವಾಗಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರ್ನಾಟಕ ಬಂದ್ ದಿನ ಎಲ್ಲವೂ ಯಥಾಸ್ಥಿತಿಯಲ್ಲಿ ಇರಲಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಮಾತನಾಡಿರುವ ಖಾಸಗಿ ಬಸ್ ಮಾಲಕರ ಸಂಘದ ಮುಖಂಡ ದಿಲ್ ರಾಜ್ ಆಳ್ವ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರ್ನಾಟಕ ಬಂದ್‌ಗೆ ಬೆಂಬಲ ಇಲ್ಲ, ಜಿಲ್ಲೆಯಲ್ಲಿ ಅಂದು ಎಲ್ಲವೂ ಯಥಾಸ್ಥಿತಿಯಲ್ಲಿ ಇರಲಿದೆ ಎಂದು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

14 hours ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

15 hours ago

ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು

ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …

15 hours ago

ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ

ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…

15 hours ago

ಸಫಾರಿ ಆರಂಭಿಸಲು ಮತ್ತೆ ಅನುಮತಿ | ಸಮಯ ಕಡಿತ, GPS-ಡ್ಯಾಶ್ ಕ್ಯಾಮ್ ಕಡ್ಡಾಯ – ಸಚಿವ ಈಶ್ವರ್ ಖಂಡ್ರೆ

ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…

15 hours ago

ಚಿಕ್ಕಮಗಳೂರು : ಅರಣ್ಯ ಸಂರಕ್ಷಣೆಗೆ ಇಲಾಖೆ ಸನ್ನದ್ಧ; 970 ಕಿ.ಮೀ. ‘ಬೆಂಕಿ ಪಥ’ ನಿರ್ಮಾಣ

ಚಿಕ್ಕಮಗಳೂರು ಅರಣ್ಯ ವಿಭಾಗದಲ್ಲಿ ಕಾಡು ಬೆಂಕಿ ತಡೆಯಲು 970 ಕಿ.ಮೀ. ಬೆಂಕಿ ಪಥ…

15 hours ago