ಕನ್ನಡ ನಾಡು, ನುಡಿ, ನೆಲ, ಜಲ, ಅಂತ ಬಂದಾಗ ರಾಜ್ಯದ ಎಲ್ಲಾರೂ ಒಂದೇ. ಆದರೆ ನೀರಿನ ವಿಚಾರ ಬಂದಾಗ ಇದು ಯಾವ ಭಾಗಕ್ಕೆ ಸಂಬಂಧಿಸಿದೆಯೋ ಆ ಭಾಗದವರು ಮಾತ್ರ ಅದಕ್ಕಾಗಿ ಹೋರಾಡುವ ಸ್ಥಿತಿ ಈಗ ರಾಜ್ಯದಲ್ಲಿ ನಿರ್ಮಾಣವಾಗಿದೆ. ಕಾವೇರಿ ಹೋರಾಟಕ್ಕೆ ಕರಾವಳಿ ಬಸ್ ಮಾಲಿಕರ ಸಂಘ ಬೆಂಬಲ ನೀಡುವುದಿಲ್ಲ ಎಂದು ಹೇಳಿದೆ. ಕಾರಣ ನಮ್ಮ ನೇತ್ರಾವತಿ ಹೋರಾಟದಲ್ಲಿ ಕನ್ನಡಪರ ಸಂಘಟನೆಗಳು ಬೆಂಬಲ ಸೂಚಿಸಿಲ್ಲ.
ಕಾವೇರಿ ನದಿ ನೀರಿನ ಹೋರಾಟ ದಿನದಿಂದ ದಿನಕ್ಕೆ ಕಾವು ಪಡೆಯುತ್ತಿದೆ. ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ರೈತಪರ ಸಂಘಟನೆಗಳು(Farmers Organisation), ಕನ್ನಡಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳಿಂದ ಹೋರಾಟ ತೀವ್ರಗೊಂಡಿದೆ. ಈ ಮಧ್ಯೆ ನಾಳೆ ಕರ್ನಾಟಕ ಬಂದ್ಗೆ ಕೂಡ ಕರೆ ನೀಡಲಾಗಿದೆ. ಹಿರಿಯ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಾಳೆ ವಿವಿಧ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿದ್ದು, ಆ ಮೂಲಕ ಕಾವೇರಿ ಪರ ಹೋರಾಟ ಮತ್ತೊಂದು ಹಂತಕ್ಕೆ ತೆಗೆದುಕೊಂಡು ಹೋಗಲು ನಿರ್ಧರಿಸಿದ್ದಾರೆ. ನಾಳೆ ನಡೆಯಲಿರುವ ಕರ್ನಾಟಕ ಬಂದ್ಗೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಬೆಂಬಲ ವ್ಯಕ್ತವಾಗಿದ್ದು, ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿ ಜನರು ಕಾವೇರಿ ಹೋರಾಟಕ್ಕೆ ಬೆಂಬಲ ಸೂಚಿಸಲಿದ್ದಾರೆ.
ಸಾಮಾನ್ಯವಾಗಿ ಈ ಹಿಂದಿನ ಅನೇಕ ದಶಕಗಳ ಬೆಳವಣಿಗೆಗಳನ್ನು ಗಮನಿಸಿದಾಗ ಕರ್ನಾಟಕದ ನೆಲ ಜಲ ಪರ ಹೋರಾಟಗಳಿಗೆ ಕರಾವಳಿ ಭಾಗದಲ್ಲಿ ಬೆಂಬಲ ವ್ಯಕ್ತವಾಗೋದು ಕಡಿಮೆ. ಕಾವೇರಿ ಪರ ಹೋರಾಟ, ಕನ್ನಡ ಪರ ಹೋರಾಟ, ಮೇಕೆದಾಟು, ಸೇರಿದಂತೆ ನೆಲ ಜಲ ಭಾಷೆಗೆ ಸಂಬಂಧಿಸಿದ ಕರ್ನಾಟಕದ ಹೋರಾಟಗಳಿಗೆ ಕರಾವಳಿ ಭಾಗ ಅರ್ಥಾತ್ ತುಳುನಾಡಿನಲ್ಲಿ ಬೆಂಬಲ ವ್ಯಕ್ತವಾಗೋದಿಲ್ಲ. ಅದರ ಜೊತೆಗೆ ತುಳುನಾಡು ಪರ ಹೋರಾಟಗಳಿಗೂ ಕೂಡ ಕರಾವಳಿ ಹೊರತುಪಡಿಸಿ ಇತರ ಭಾಗದಲ್ಲಿ ಬೆಂಬಲ ವ್ಯಕ್ತವಾಗೋದು ಕಡಿಮೆ. ಉದಾಃ ತುಳು ಭಾಷೆ, ಎತ್ತಿನಹೊಳೆ ಹೋರಾಟ, ಕಂಬಳ ಸೇರಿದಂತೆ ಇತರ ಹೋರಾಟಗಳಿಗೆ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಬಿಟ್ಟರೆ ಕರ್ನಾಟಕದ ಬೇರೆ ಭಾಗದಿಂದ ಹೇಳಿಕೊಳ್ಳುವಂತಹ ಮಟ್ಟಿಗೆ ಬೆಂಬಲ ವ್ಯಕ್ತವಾದ ಉದಾಹರಣೆ ಇಲ್ಲ. ಇದೀಗ ಈ ಬಾರಿಯ ಕಾವೇರಿ ಪರ ಹೋರಾಟದಲ್ಲೂ ಕರಾವಳಿಯಲ್ಲಿ ಬೆಂಬಲ ವ್ಯಕ್ತವಾಗಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರ್ನಾಟಕ ಬಂದ್ ದಿನ ಎಲ್ಲವೂ ಯಥಾಸ್ಥಿತಿಯಲ್ಲಿ ಇರಲಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಮಾತನಾಡಿರುವ ಖಾಸಗಿ ಬಸ್ ಮಾಲಕರ ಸಂಘದ ಮುಖಂಡ ದಿಲ್ ರಾಜ್ ಆಳ್ವ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರ್ನಾಟಕ ಬಂದ್ಗೆ ಬೆಂಬಲ ಇಲ್ಲ, ಜಿಲ್ಲೆಯಲ್ಲಿ ಅಂದು ಎಲ್ಲವೂ ಯಥಾಸ್ಥಿತಿಯಲ್ಲಿ ಇರಲಿದೆ ಎಂದು ಹೇಳಿದ್ದಾರೆ.
ಅಲ್ಲದೇ, ತುಳುನಾಡಿನ ನಾಡು ನುಡಿ ಪರ ಹೋರಾಟಗಳಿಗೆ ಕನ್ನಡ ಪರ ಸಂಘಟನೆಗಳು ಬೆಂಬಲ ಕೊಟ್ಟಿಲ್ಲ, ಹೀಗಾಗಿ ಕಾವೇರಿ ಹೋರಾಟಕ್ಕೆ ಮಂಗಳೂರಲ್ಲಿ ಖಾಸಗಿ ಬಸ್ಗಳ ಬೆಂಬಲ ಇಲ್ಲ ಎಂದು ಹೇಳಿದ್ದಾರೆ. ದ.ಕ ಜಿಲ್ಲೆಯಲ್ಲಿ ಬಂದ್ಗೆ ಕೇವಲ ನೈತಿಕ ಬೆಂಬಲ ಮಾತ್ರ ಎಂದಿರುವ ದಿಲ್ರಾಜ್ ಆಳ್ವ, ಬಂದ್, ಪ್ರತಿಭಟನೆ ಮಾಡಿ ಬಂದ್ಗೆ ಬೆಂಬಲವನ್ನು ನೀಡೋದಿಲ್ಲ. ಎತ್ತಿನಹೊಳೆ ವಿಚಾರದಲ್ಲಿ ಕನ್ನಡ ಸಂಘಟನೆಗಳ ಬೆಂಬಲ ಕೇಳಿದ್ದೆವು. ಆಗ ನೀರು ಎಲ್ಲರ ಹಕ್ಕು ಎಂದು ಹೇಳಿ ಬೆಂಬಲ ನೀಡಿಲ್ಲ ಎಂದರು. ತುಳು ಭಾಷೆ ವಿಚಾರದ ಹೋರಾಟದಲ್ಲಿ ನಮಗೆ ಬೆಂಬಲ ಸಿಕ್ಕಿಲ್ಲ, ತುಳು ಭಾಷೆ ಬಗ್ಗೆ ಚರ್ಚೆ ಆದಾಗ ಆ ಭಾಗದ ಶಾಸಕರು ತಮಾಷೆ ಮಾಡಿದ್ದರು. ಎತ್ತಿನ ಹೊಳೆ ಅವೈಜ್ಞಾನಿಕ ಅಂತಾ ಗೊತ್ತಿದ್ದರೂ ನಮ್ಮ ಹೋರಾಟಕ್ಕೆ ಬೆಂಬಲ ನೀಡಿಲ್ಲ. ಹೀಗಾಗಿ ಕರ್ನಾಟಕ ಬಂದ್ಗೆ ನಮ್ಮ ನೈತಿಕ ಬೆಂಬಲ ಮಾತ್ರವೇ ಇದೆ. ಬಸ್ ಗಳ ಓಡಾಟ ಸೇರಿ ಎಲ್ಲವೂ ಅಂದು ಯಥಾಸ್ಥಿತಿಯಲ್ಲಿ ಇರಲಿದೆ ದಿಲ್ ರಾಜ್ ಆಳ್ವ ಹೇಳಿದ್ದಾರೆ.
ಇತ್ತೀಚಿನ ದಿನಗಳಲ್ಲಿ, ಜನರು ಮೊಬೈಲ್ ಫೋನ್ಗಳನ್ನು(Mobile Phone) ಹಿಡಿದಿಟ್ಟುಕೊಳ್ಳುವ ಬದಲು ಇಯರ್ಫೋನ್(Ear Phone)…
ಇದೋ, ಬಂದಿದೆ ನೋಡಿ 2024ರ ಹಲಸು ಮೇಳ(Jackfruit Mela) ಪುತ್ತೂರು(Puttur). ಪ್ರತಿ ವರ್ಷದಂತೆ…
ಒಂದು ಸಸ್ಯ(Plant) ಪರಿಪೂರ್ಣವಾಗಿ ಮತ್ತು ಆರೋಗ್ಯವಾಗಿ(Healthy) ಬೆಳೆಯಬೇಕಾದರೆ ಸುಮಾರು 108 ಪೋಷಕಾಂಶಗಳ(Nutrition) ಅವಶ್ಯಕತೆ…
ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…
ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ…
ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…