Advertisement
MIRROR FOCUS

#Karnataka Bandh | ಕರ್ನಾಟಕ ಬಂದ್‌ಗೆ ಮಂಗಳೂರಲ್ಲಿ ಬೆಂಬಲ ಇಲ್ಲ| ಎತ್ತಿನಹೊಳೆ ಹೋರಾಟಕ್ಕೆ ಬೆಂಬಲಿಸಿಲ್ಲ | ದಿಲ್‌ರಾಜ್ ಆಳ್ವ

Share

ಕನ್ನಡ ನಾಡು, ನುಡಿ, ನೆಲ, ಜಲ, ಅಂತ ಬಂದಾಗ ರಾಜ್ಯದ ಎಲ್ಲಾರೂ ಒಂದೇ. ಆದರೆ ನೀರಿನ ವಿಚಾರ ಬಂದಾಗ ಇದು ಯಾವ ಭಾಗಕ್ಕೆ ಸಂಬಂಧಿಸಿದೆಯೋ ಆ ಭಾಗದವರು ಮಾತ್ರ ಅದಕ್ಕಾಗಿ ಹೋರಾಡುವ ಸ್ಥಿತಿ ಈಗ ರಾಜ್ಯದಲ್ಲಿ ನಿರ್ಮಾಣವಾಗಿದೆ. ಕಾವೇರಿ ಹೋರಾಟಕ್ಕೆ ಕರಾವಳಿ ಬಸ್‌ ಮಾಲಿಕರ ಸಂಘ ಬೆಂಬಲ ನೀಡುವುದಿಲ್ಲ ಎಂದು ಹೇಳಿದೆ. ಕಾರಣ ನಮ್ಮ ನೇತ್ರಾವತಿ ಹೋರಾಟದಲ್ಲಿ ಕನ್ನಡಪರ ಸಂಘಟನೆಗಳು ಬೆಂಬಲ ಸೂಚಿಸಿಲ್ಲ.

ಕಾವೇರಿ ನದಿ ನೀರಿನ ಹೋರಾಟ ದಿನದಿಂದ ದಿನಕ್ಕೆ ಕಾವು ಪಡೆಯುತ್ತಿದೆ. ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ರೈತಪರ ಸಂಘಟನೆಗಳು(Farmers Organisation), ಕನ್ನಡಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳಿಂದ ಹೋರಾಟ ತೀವ್ರಗೊಂಡಿದೆ. ಈ ಮಧ್ಯೆ ನಾಳೆ ಕರ್ನಾಟಕ ಬಂದ್‌ಗೆ ಕೂಡ ಕರೆ ನೀಡಲಾಗಿದೆ. ಹಿರಿಯ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಾಳೆ ವಿವಿಧ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದು, ಆ ಮೂಲಕ ಕಾವೇರಿ ಪರ ಹೋರಾಟ ಮತ್ತೊಂದು ಹಂತಕ್ಕೆ ತೆಗೆದುಕೊಂಡು ಹೋಗಲು ನಿರ್ಧರಿಸಿದ್ದಾರೆ. ನಾಳೆ ನಡೆಯಲಿರುವ ಕರ್ನಾಟಕ ಬಂದ್‌ಗೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಬೆಂಬಲ ವ್ಯಕ್ತವಾಗಿದ್ದು, ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಬಂದ್‌ ಮಾಡಿ ಜನರು ಕಾವೇರಿ ಹೋರಾಟಕ್ಕೆ ಬೆಂಬಲ ಸೂಚಿಸಲಿದ್ದಾರೆ.

Advertisement

ಸಾಮಾನ್ಯವಾಗಿ ಈ ಹಿಂದಿನ ಅನೇಕ ದಶಕಗಳ ಬೆಳವಣಿಗೆಗಳನ್ನು ಗಮನಿಸಿದಾಗ ಕರ್ನಾಟಕದ ನೆಲ ಜಲ ಪರ ಹೋರಾಟಗಳಿಗೆ ಕರಾವಳಿ ಭಾಗದಲ್ಲಿ ಬೆಂಬಲ ವ್ಯಕ್ತವಾಗೋದು ಕಡಿಮೆ. ಕಾವೇರಿ ಪರ ಹೋರಾಟ, ಕನ್ನಡ ಪರ ಹೋರಾಟ, ಮೇಕೆದಾಟು, ಸೇರಿದಂತೆ ನೆಲ ಜಲ ಭಾಷೆಗೆ ಸಂಬಂಧಿಸಿದ ಕರ್ನಾಟಕದ ಹೋರಾಟಗಳಿಗೆ ಕರಾವಳಿ ಭಾಗ ಅರ್ಥಾತ್ ತುಳುನಾಡಿನಲ್ಲಿ ಬೆಂಬಲ ವ್ಯಕ್ತವಾಗೋದಿಲ್ಲ. ಅದರ ಜೊತೆಗೆ ತುಳುನಾಡು ಪರ ಹೋರಾಟಗಳಿಗೂ ಕೂಡ ಕರಾವಳಿ ಹೊರತುಪಡಿಸಿ ಇತರ ಭಾಗದಲ್ಲಿ ಬೆಂಬಲ ವ್ಯಕ್ತವಾಗೋದು ಕಡಿಮೆ. ಉದಾಃ ತುಳು ಭಾಷೆ, ಎತ್ತಿನಹೊಳೆ ಹೋರಾಟ, ಕಂಬಳ ಸೇರಿದಂತೆ ಇತರ ಹೋರಾಟಗಳಿಗೆ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಬಿಟ್ಟರೆ ಕರ್ನಾಟಕದ ಬೇರೆ ಭಾಗದಿಂದ ಹೇಳಿಕೊಳ್ಳುವಂತಹ ಮಟ್ಟಿಗೆ ಬೆಂಬಲ ವ್ಯಕ್ತವಾದ ಉದಾಹರಣೆ ಇಲ್ಲ.  ಇದೀಗ ಈ ಬಾರಿಯ ಕಾವೇರಿ ಪರ ಹೋರಾಟದಲ್ಲೂ ಕರಾವಳಿಯಲ್ಲಿ ಬೆಂಬಲ ವ್ಯಕ್ತವಾಗಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರ್ನಾಟಕ ಬಂದ್ ದಿನ ಎಲ್ಲವೂ ಯಥಾಸ್ಥಿತಿಯಲ್ಲಿ ಇರಲಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಮಾತನಾಡಿರುವ ಖಾಸಗಿ ಬಸ್ ಮಾಲಕರ ಸಂಘದ ಮುಖಂಡ ದಿಲ್ ರಾಜ್ ಆಳ್ವ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರ್ನಾಟಕ ಬಂದ್‌ಗೆ ಬೆಂಬಲ ಇಲ್ಲ, ಜಿಲ್ಲೆಯಲ್ಲಿ ಅಂದು ಎಲ್ಲವೂ ಯಥಾಸ್ಥಿತಿಯಲ್ಲಿ ಇರಲಿದೆ ಎಂದು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!

ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…

7 minutes ago

ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?

ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್‌ಡಿಆರ್‌ಎಫ್ ಪರಿಹಾರ ಮೊತ್ತ…

52 minutes ago

ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಲ್ಲಿದೆ ಗೊತ್ತಾ..?

ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…

3 hours ago

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ; ರಾಸಾಯನಿಕ ಮಿಶ್ರಣವೇ ಅಪಾಯ – ಎಸ್.ಆರ್. ಸತೀಶ್ಚಂದ್ರ

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…

4 hours ago

ಹವಾಮಾನ ವರದಿ | 04-07-2026 | ಜುಲೈ 10ರ ಬಳಿಕ ಕರ್ನಾಟಕದಲ್ಲಿ ಮುಂಗಾರು ದುರ್ಬಲ..? ಕರಾವಳಿ-ಮಲೆನಾಡಿನಲ್ಲಿ ಮಳೆ ಇಳಿಕೆಗೆ ಮುನ್ಸೂಚನೆ

ಜುಲೈ 10ರ ಬಳಿಕ ರಾಜ್ಯದಲ್ಲಿ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

4 hours ago

2026ರಲ್ಲಿ ಜಗತ್ತಿನ ಅಂತ್ಯವೇ..? 1960ರ ‘ಡೂಮ್ಸ್‌ಡೇ’ ಅಧ್ಯಯನದ ನಿಜಾಂಶ ಏನು..?

1960ರ ವಿಜ್ಞಾನ ಲೇಖನವು 2026ರಲ್ಲಿ ಜಗತ್ತು ಅಂತ್ಯವಾಗುತ್ತದೆ ಎಂದು ಹೇಳಿಲ್ಲ. ಅದು ಕೇವಲ…

4 hours ago